ಬೆಳಗಾವಿ: ಮಿಸ್ಟರ್ ಕುಮಾರಸ್ವಾಮಿ ನೀನು ಈ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಗೆಲ್ಲಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ.ಶಿವಕುಮಾರ್ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದು, ಮಿಸ್ಟರ್ ಕುಮಾರಸ್ವಾಮಿ ನೀನು ಚುನಾವಣೆಯಲ್ಲಿ ಗೆಲ್ಲಲ್ಲ ಹೆದರಿ ಪಕ್ಕದ ಕ್ಷೇತ್ರಕ್ಕೆ ಹೋಗಿದ್ರಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪ್ರತಿಕ್ರಿಯೆಗಳಿಗೆ , ಉಗ್ರರಿಗೆ ನಿಯಮ, ನಿಯಮಗಳಿಲ್ಲ: ಜೈಶಂಕರ್
ಕಾಂಗ್ರೆಸ್ ಸರ್ಕಾರ ಹೆಣ್ಣು ಮಕ್ಕಳಿಗೆ ಒಳ್ಳೆಯದಾಗಲಿ, “ಹೆಣ್ಣು ಕುಟುಂಬದ ಕಣ್ಣು” ಎಂದು 2000, ರೂಪಾಯಿ ಹಣ ನೀಡುತ್ತಿದೆ. ಹೆಣ್ಣು ಮಕ್ಕಳು ಏನ್ ದಡ್ಡರಾ? ಮಹಿಳೆಯರಿಗೆ ಸ್ವಾಭಿಮಾನದ ಪ್ರಶ್ನೆ. ಇದು, ಅವರಿಗೆ ಶಕ್ತಿ ಕೊಡಲು ಕೊಟ್ಟ್ ಕಾರ್ಯಕ್ರಮ ಇದು. ಕುಮಾರಸ್ವಾಮಿ ಹೇಳಿಕೆ ಖಂಡಿಸಿ ಹೋರಾಟ ಮಾಡಲೇಬೇಕು. ನಾನು ಈಗಲೇ ಕರೆ ಕೊಡುತೇನೆ. ಪ್ರತಿಯೊಂದು ಮಹಿಳಾ ಸಂಘಟೆಗಳು ರಾಜ್ಯದ್ಯಂತ ಮಹಿಳೆಯರು ಕುಮಾರಸ್ವಾಮಿ ಹೇಳಿಕೆ ಖಂಡಿಸಿ ಹೊರಾಡ ಮಾಡಬೇಕು, ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಬೇಕು ಎಂದು ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ:ಪತಿ ನೇರ ಭೇಟಿಗೆ ಪತ್ನಿ ಸುನಿತಾಗೆ ಅನುಮತಿ ನಿರಾಕರಣೆ: ತಿಹಾರ್ ಅಧಿಕಾರಿಗಳ ವಿರುದ್ಧ ಆಪ್ ಆರೋಪ