ತಿರುವನಂತಪುರಂ: ಕಳೆದ ವರ್ಷ ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ವಿವಾದಕ್ಕೆ ಒಳಗಾಗಿದ್ದ ಸಿನಿಮಾ ಎಂದರೆ ಅದು ದಿ ಕೇರಳ ಸ್ಟೋರಿ. ಇದೀಗ ಈ ಸಿನಿಮಾ ಮತ್ತೊಮ್ಮೆ ವಿವಾದಕ್ಕೆ ಒಳಗಾಗಿದೆ. ನಟಿ ಅದಾ ಶರ್ಮಾ ನಟನೆಯ ದಿ ಕೇರಳ ಸ್ಟೋರಿ ಸಿನಿಮಾವನ್ನು ಇಂದು ಏಪ್ರಿಲ್ 5ರಂದು ರಾತ್ರಿ 8 ಗಂಟೆಗೆ ದೂರದರ್ಶನದಲ್ಲಿ ಪ್ರಸಾರವಾಗುತ್ತಿದೆ.
ಆದರೆ ಈ ಸಿನಿಮಾವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಬಾರದು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ದೂರದರ್ಶನವು ದಿ ಕೇರಳ ಸ್ಟೋರಿ ಸಿನಿಮಾವನ್ನು ಏಪ್ರಿಲ್ 5ರಂದು ಪ್ರಸಾರ ಮಾಡುವುದಾಗಿ ತಿಳಿಸಿತ್ತು. ಇದನ್ನೂ ಓದಿ:ನೀತಿ ಸಂಹಿತೆ ಉಲ್ಲಂಘನೆ-ಶ್ರೀನಿವಾಸ ಪುಜಾರಿಗೆ ಕೋರ್ಟ್ ಸಂಕಷ್ಟ
ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಲೋಕಸಭಾ ಚುನಾವಣೆ ನಡೆಯುತ್ತಿರುವ ಹೊತ್ತಲ್ಲಿ ಕೋಮುಭಾವನೆಯನ್ನು ಕೆರಳಿಸುವ ಸಾಧ್ಯತೆ ಇದೆ. ಹೀಗಾಗಿ ದೂರದರ್ಶನ ಈ ನಿರ್ಧಾರವನ್ನು ಹೊಂಪಡೆಯಬೇಕು ಎಂದು ಆಗ್ರಹಿಸಿ ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸ್ಟಾರ್ ಕ್ರಿಕೆಟಿಗ ದೊಡ್ಡ ಗಣೇಶ, ಸುಮಲತಾ ಜೊತೆ ಬಿಜೆಪಿಗೆ ಎಂಟ್ರಿ
ಜೊತೆಗೆ ದೂರದರ್ಶನವು ಬಿಜೆಪಿ ಮತ್ತು ಆರ್?ಎಸ್?ಎಸ್?ನ ಪ್ರಚಾರ ಮಾಡುವ ಯಂತ್ರ ಆಗಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ಬೆಂಗಳೂರಲ್ಲಿ ಬೆಂಕಿ.. ಹೊತ್ತಿ ಉರಿದ ಖಾಸಗಿ ಕಟ್ಟಡ: ಲಕ್ಷಂತರ ಮೌಲ್ಯದ ಆಯುರ್ವೇದಿಕ್ ಮೆಡಿಸಿನ್ ಆಗ್ನಿಆಹುತಿ

