ಬೆಂಗಳೂರು: ನಗರದ ಪ್ರತಿಷ್ಠಿತ ಹೋಟೆಲ್ ಮೇಲಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ರೇಸ್ಕೋರ್ಸ್ ರಸ್ತೆಯ ರಿನೈಸಾನ್ಸ್ ಹೋಟೆಲ್ನಲ್ಲಿ ನಡೆದಿದೆ.
ಹೋಟೆಲ್ನ 19 ನೆ ಫ್ಲೋರ್ನ ಬಾಲ್ಕನಿಯಲ್ಲಿ ವ್ಯಕ್ತಿಯೊಬ್ಬ ಅರ್ಧಗಂಟೆಗೂ ಹೆಚ್ಚು ಕಾಲ ಓಡಾಡುತ್ತಿದ್ದ. ಅನುಮಾನಗೊಂಡ ಭದ್ರತಾ ಸಿಬ್ಬಂದಿ ಬಾಲ್ಕನಿಗೆ ತೆರಳುವಷ್ಟರಲ್ಲಿ ಆ ವ್ಯಕ್ತಿ ಜಿಗಿದು ಆತ್ನಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆಯ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ:ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಡಿಕ್ಕಿ- ಓರ್ವ ಸಾವು
ಮೃತಪಟ್ಟ್ ವ್ಯಕ್ತ ಯಾರು ಎನ್ನುವುದು ಸದ್ಯ ಪತ್ತೆಯಾಗಿಲ್ಲ. ಹೋಟೆಲ್ನಲ್ಲಿ ತಂಗಿದ್ದನಾ ಅಥವಾ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿನಾ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.ಇದನ್ನೂ ಓದಿ: ಚುನಾವಣೆ ನಂತರ ಜನರೇ ರಾಹುಲ್ ಗಾಂಧಿಗೆ ಕಡ್ಡಾಯ ರಜೆ ಕೊಡುತಾರೆ: ರವಿ

