ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲಿ ಸಿಎಂ ತವರು ಭಾಗದಲ್ಲಿ ಕಾಂಗ್ರೆಸ್ ಪಕ್ಷ ಬಲಪಡಿಸಲು ಸಿಎಂ ಸಿದ್ದರಾಮಯ್ಯು ಮುಂದಾಗಿದ್ದಾರೆ ಎಂದು ಕಾಣುತ್ತೆ. ಇದೇ ರಾಜಕೀಯ ಕಾರಣಕ್ಕಾಗಿ 6 ವರ್ಷಗಳಿಂದ ಇದ್ದ ಮುನಿಸನ್ನು ಮರೆತು ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ.
ಪ್ರಚಾರಕ್ಕಾಗಿ ನಾಳೆ ಪ್ರಧಾನಿ ನರೇಂದ್ರ ಅವರು ಮೈಸೂರಿಗೆ ಆಗಮಿಸಲಿದ್ದಾರೆ. ಆದರೆ ಇದೇ ಹೊತ್ತಿನಲ್ಲಿ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಅವರನ್ನು ಸಿಎಂ ಭೇಟಿಯಾಗಿರುವುದು ಅಚ್ಚರಿ ಮೂಡಿಸಿದೆ. ಸುಮಾರು 6 ವರ್ಷಗಳಿಂದ ದಿಗ್ಗಜ ನಾಯಕರು ಪರಸ್ಪರ ಭೇಟಿಯಾಗಿದ್ದು ಇಲ್ಲ, ಮಾತನಾಡಿದ್ದು ಇಲ್ಲ. ಆದರೆ ಇಗ ಚುನಾವಣೆ ಹೊಸ್ತಿಲಲ್ಲಿ ಪ್ರಸಾದ್ ಮನೆಗೆ ಸಿದ್ದರಾಮಯ್ಯ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಫ್ಲೈ ಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು
6 ವರ್ಷ ಮುನಿಸು ಏಕೆ?
2013 ರಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಕಂದಾಯ ಸಚಿವರಾಗಿದ್ದ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ತಮ್ಮ ಸಂಪುಟದಿಂದ ಕೈಬಿಟ್ಟಿದ್ದರು. ಇದರಿಂದ ಕುಪಿತಗೊಂಡಿದ್ದ ಪ್ರಸಾದ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಚುನಾವಣೆ ಎದುರಿಸಿದ್ದರು. ಆಗ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದರು. ನಂತರ ಚಾಮರಾಜನಗರ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಪ್ರಸಾದ್ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಸ್ಕೂಟರ್ಗೆ ಕಾರು ಡಿಕ್ಕಿ : ಇಬ್ಬರು ಬಿಜೆಪಿ ಕಾರ್ಯಕರ್ತರು ಸಾವು
ಸಂಪುಟದಿಂದ ಕೈಬಿಟ್ಟಾಗಿನಿಂದ ಸಿದ್ದರಾಮಯ್ಯ ವಿರುದ್ಧ ಪ್ರಸಾದ್ ಅಸಮಾಧಾನ ಹೊಂದಿದ್ದರು. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಲವು ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಪ್ರಸಾದ್ ಅನಾರೋಗ್ಯ ಹಾಗೂ ವಯಸ್ಸಿನ ಕಾರಣ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಬಿಜೆಪಿಯಿಂದ ಬಾಲರಾಜ್ ಕಣಕ್ಕಿಳಿದಿದ್ದಾರೆ. ಇತ್ತ ಕಾಂಗ್ರೆಸ್ನಿಂದ ಹೆಚ್.ಸಿ.ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ ಸ್ರ್ಧಿಸಿದ್ದಾರೆ. ಪುತ್ರನ ಗೆಲುವಿಗಾಗಿ ಕ್ಷೇತ್ರದಲ್ಲಿ ಮಹದೇವಪ್ಪ ಕಸರತ್ತು ನಡೆಸುತ್ತಿದ್ದಾರೆ. ಹೀಗಾಗಿ ಬಿಜೆಪಿಯ ಶ್ರೀನಿವಾಸ್ ಪ್ರಸಾದ್ ಮನೆಗೆ ಭೇಟಿ ನೀಡಿ ರಾಜಕೀಯ ದಾಳ ಉರುಳಿಸಿದ್ದರು. ಇದನ್ನೂ ಓದಿ: ರಾಜಸ್ಥಾನದಲ್ಲಿ “ಕೈ” ತೊರೆದ 400 ಕಾರ್ಯಕರ್ತರು
ಸಿದ್ದರಾಮಯ್ಯ- ಪ್ರಸಾದ್ ಭೇಟಿಗೆ ಕಾರಣಗಳು
- ಲೋಕಸಭಾ ಚುನಾವಣೆಗೆ ಸುನೀಲ್ ಬೋಸ್ ಸ್ಪರ್ಧಿಸಿರುವುದು
2. ಈಗಾಗಲೇ ಡಾ.ಎಚ್.ಸಿ.ಮಹದೇವಪ್ಪ, ಪುತ್ರ ಸುನೀಲ್ ಬೋಸ್, ಡಾ.ಯತೀಂದ್ರ ಸಿದ್ದರಾಮಯ್ಯ ಮೂಲಕ ಭೇಟಿ ಮಾಡಿರುವುದು
3. ಕಳೆದ ಏಳೆಂಟು ವರ್ಷಗಳ ರಾಜಕೀಯ ವೈಷಮ್ಯ ಮರೆಯುವಂತೆ ಮನವಿ ಮಾಡಿರುವುದು
4.ಶ್ರೀನಿವಾಸ ಪ್ರಸಾದ್ ರಾಜಕೀಯ ನಿವೃತ್ತ ಸಂದರ್ಭದಲ್ಲಿ ಅವರನ್ನ ಗೌರವಿಸುವ ನೆಪ
5. ಶ್ರೀನಿವಾಸ ಪ್ರಸಾದ್ ಕುಟುಂಬಕ್ಕೆ ಟಿಕೆಟ್ ಕೈತಪ್ಪಿರುವುದು
6. ಬಿಜೆಪಿ ಪಕ್ಷದಲ್ಲಿ ಮೂಲೆಗುಂಪು ಮಾಡಿದ್ದಾರೆ. ಮುಂದೆ ಅಳಿಯಂದಿರು, ಮೊಮ್ಮಕ್ಕಳ ರಾಜಕಾರಣಕ್ಕೆ ತೊಂದರೆ ಆಗುತ್ತದೆ ಎಂಬ ಮನವರಿಕೆ ಮಾಡಲು
7. ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಗೆಲ್ಲಿಸಿಕೊಳ್ಳಲು
8.ಮೈಸೂರು-ಚಾಮರಾಜನಗರ ಭಾಗದಲ್ಲಿ ಪ್ರಸಾದ್ ಅಭಿಮಾನಿಗಳ ಕಾಂಗ್ರೆಸ್ ನತ್ತ ಸೆಳೆಯಲು
9.ಕಾಂಗ್ರೆಸ್ ಪಕ್ಷದಲ್ಲಿ ಮುಂಬರುವ ದಿನಗಳಲ್ಲಿ ಪ್ರಸಾದ್ ಅಳಿಯಂದಿರು ಹಾಗು ಕುಟುಂಬದವರಿಗೆ ಅವಕಾಶ ಕಲ್ಪಿಸುವ ಭರವಸೆ
10. ಹಳೆಯ ದೋಸ್ತಿ ಮುಂದುವರಿಸುವ ಇಂಗಿತ