ಮುಂಬೈ : ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿದ ಘಟನೆ ಪುಣೆ ಸಮೀಪದ ಬವ್ಧಾನ್ನಲ್ಲಿ ನಡೆದಿದೆ. ಖಾಸಗಿ ಹೆಲಿಕಾಪ್ಟರ್ನಲ್ಲಿ ಇಬ್ಬರು ಪೈಲಟ್ಗಳು ಮತ್ತು ಎಂಜಿನಿಯರ್ ಇದ್ದರು ಎಂದು ತಿಳಿದು ಬಂದಿದೆ. ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ 6:45ರ ಹೊತ್ತಿಗೆ ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಪುಣೆಯ ಪಿಂಪ್ರಿ ಚಿಂಚ್ವಾಡ್ ಪೊಲೀಸರು ತಿಳಿಸಿದ್ದಾರೆ.
ಹೆಲಿಕಾಪ್ಟರ್ನಲ್ಲಿ ಮೂವರು ಪೈಲಟ್ಗಳಾದ ಪರಮ್ಜಿತ್ ಸಿಂಗ್ ಮತ್ತು ಜಿಕೆ ಪಿಳ್ಳೈ ಮತ್ತು ಒಬ್ಬ ಇಂಜಿನಿಯರ್ ಪ್ರೀತಮ್ ಭಾರದ್ವಾಜ್ ಇದ್ದರು. ಪ್ರಾಥಮಿಕ ಮಾಹಿತಿ ಪ್ರಕಾರ ಹೆಲಿಕಾಪ್ಟರ್ ಹೆರಿಟೇಜ್ ಏವಿಯೇಷನ್ ಗೆ ಸೇರಿದ್ದು, ಪುಣೆಯಲ್ಲಿತ್ತು.
ಹೆಲಿಕಾಪ್ಟರ್ ಆಕ್ಸ್ಫರ್ಡ್ ಗಾಲ್ಫ್ ಕ್ಲಬ್ನ ಹೆಲಿಪ್ಯಾಡ್ನಿಂದ ಟೇಕಾಫ್ ಆಗಿದ್ದು, ಆ ಪ್ರದೇಶದಲ್ಲಿ ದಟ್ಟವಾದ ಮಂಜಿನಿಂದಾಗಿ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಆಗಮಿಸಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೆಲಿಕಾಪ್ಟರ್ ಅನ್ನು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ಚಾರ್ಟರ್ ಮಾಡಲಾಗಿತ್ತು ಮತ್ತು ಮುಂಬೈಗೆ ತೆರಳಿತ್ತು. ಎನ್ಸಿಪಿ ಮುಖ್ಯಸ್ಥ ಸುನೀಲ್ ತಟ್ಕರೆ ಪ್ರಕಾರ, ಅವರು ಹೆಲಿಕಾಪ್ಟರ್ನಲ್ಲಿ ರಾಯಗಢಕ್ಕೆ ಭೇಟಿ ನೀಡಲಿದ್ದರು. ಆದರೆ ಅದಕ್ಕೂ ಮೊದಲೇ ಈ ಅವಘಡ ಸಂಭವಿಸಿದೆ.

