ವಿಜಯಪುರ: ತೋಟದಲ್ಲಿ ಇರುವ 400 ಅಡಿ ಕೊಳವೆ ಬಾವಿಗೆ ವರ್ಷದ ಮಗು ಬಿದಿದ್ದು, ರಕ್ಷಣೆಗಾಗಿ ಅಹೋರಾತ್ರಿಯಿಂದಲೇ ಕಾರ್ಯಾಚರಣೇ ನಡೆಯುತ್ತಿದ್ದು , ಮಗು ಕಾಕಲು ಅಲುಗಾಡಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿರುವ ಘಟನೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ.

ಇದು 400 ಅಡಿ ಕೊಳವೆ ಬಾವಿ ಇದ್ದಾಗಿದ್ದು ಕಳೆದ 13 ಗಂಟೆಯಿoದ ಮಗುವಿನ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಲಬುರಗಿಯಿಂದ ಎಸ್ಡಿಆರ್ಎಫ್, ಹೈದರಾಬಾದ್ನಿಂದ ಎನ್ಡಿಆರ್ಎಫ್ ತಂಡ ರಾತ್ರಿಯೇ ಸ್ಥಳಕ್ಕೆ ಬಂದಿದೆ. ಸ್ಥಳೀಯ ಆಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಜೊತೆಗೂಡಿದ್ದು ರಕ್ಷಣಾ ಕಾರ್ಯಾಚರಣೆ ವೇಗವಾಗಿ ನಡೆಸುತ್ತಿದೆ. ಇದನ್ನೂ ಓದಿ: ಲೋಕ ಜನಶಕ್ತಿ ಪಕ್ಷದ 22 ನಾಯಕರು ರಾಜೀನಾಮೆ – ಇಂಡಿಯಾ ಒಕ್ಕೂಟಕ್ಕೆ ಬೆಂಬಲ
ಸತೀಶ್-ಪೂಜಾ ದಂಪತಿಗೆ ನಾಲ್ಕು ಎಕರೆ ಜಮೀನಿದ್ದು, ನಿಂಬೆ ಮತ್ತು ಕಬ್ಬಗೆ ನೀರಿನ ಕೊರತೆ ಎದುರಾಗಿದ್ದ ಹಿನ್ನಬಲೆಯಲ್ಲಿ ಮೊನ್ನೆಯಷ್ಟೇ ಕೊಳವೆ ಬಾವಿ ಕೊರೆಸಿದ್ದರು. ನೀರು ಸಿಕ್ಕಿದ ಹಿನ್ನೆಲೆಯಲ್ಲಿ ಅದನ್ನು ಹಾಗೆಯೇ ಬಿಟ್ಟಿದ್ದರು. ಇದನ್ನೂ ಓದಿ:ಕಾಂಗ್ರೆಸ್ ಹಿರಿಯ ನಾಯಕ ಗೌರವ್ ವಲ್ಲಭ್ ರಾಜೀನಾಮೆ “ಕೈ” ಗೆ ಮತ್ತೊಂದು ಶಾಕ್

