By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯಸಭೆಯಲ್ಲಿ ಬಹುಮತ ಪಡೆದುಕೊಂಡ ಎನ್‌ಡಿಎ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ರಾಜ್ಯಸಭೆಯಲ್ಲಿ ಬಹುಮತ ಪಡೆದುಕೊಂಡ ಎನ್‌ಡಿಎ
BlogLatestTop Storiesರಾಷ್ಟ್ರೀಯ-National

ರಾಜ್ಯಸಭೆಯಲ್ಲಿ ಬಹುಮತ ಪಡೆದುಕೊಂಡ ಎನ್‌ಡಿಎ

12 Members Elected Unopposed To Rajya Sabha, NDA Touches Majority Mark

Published August 28, 2024
Share
2 Min Read
NDA
SHARE

ನವದೆಹಲಿ: ರಾಜ್ಯಸಭೆಗೆ 12 ಸದಸ್ಯರು ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮೇಲ್ಮನೆಯಲ್ಲಿ 2014ರ ನಂತರ ಸ್ಪಷ್ಟವಾದ ಬಹುಮತವನ್ನು ಪಡೆದಿದೆ.

ರಾಜ್ಯಸಭೆಯ 10 ಸದಸ್ಯರು ಲೋಕಸಭೆಗೆ ಆಯ್ಕೆಯಾಗಿದ್ದರು. ಬಿಆರ್‌ಎಸ್‌ನ ಕೇಶವ ರಾವ್‌ ಹಾಗೂ ಬಿಜೆಡಿಯ ಮಮತಾ ಮೊಹಾಂತ ಅವರು ಕ್ರಮವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಸೇರುವ ಮುನ್ನ ರಾಜೀನಾಮೆ ನೀಡಿದ್ದರಿಂದ 12 ಸ್ಥಾನಗಳಿಗೆ ಉಪ ಚುನಾವಣೆ ನಡೆದಿತ್ತು.

ಉಪಚುನಾವಣೆಯಲ್ಲಿ ಬಿಜೆಪಿ 9 ಸ್ಥಾನ ಗೆದ್ದರೆ ಮಿತ್ರ ಪಕ್ಷಗಳಾದ ಎನ್‌ಸಿಪಿ (ಅಜಿತ್‌ ಪವಾರ್‌ ಬಣ) ಮತ್ತು ರಾಷ್ಟ್ರೀಯ ಲೋಕ ಮಂಚ್‌ನ ತಲಾ ಒಬ್ಬರು ಆಯ್ಕೆಯಾಗಿದ್ದಾರೆ. ಇನ್ನೊಂದು ಸ್ಥಾನವನ್ನು ಕಾಂಗ್ರೆಸ್‌ ಪಕ್ಷ ತೆಲಂಗಾಣದಿಂದ ಗೆದ್ದುಕೊಂಡಿದೆ.

ಹಿರಿಯ ವಕೀಲ ಅಭಿಷೇಕ್‌ ಸಿಂಘ್ವಿ ಅವರು ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದಾರೆ. ಜಾರ್ಜ್‌ ಕುರಿಯನ್‌ (ಮಧ್ಯಪ್ರದೇಶದಿಂದ) ಮತ್ತು ರವನೀತ್‌ ಸಿಂಗ್‌ ಬಿಟ್ಟೂ (ರಾಜಸ್ಥಾನದಿಂದ) ಕೇಂದ್ರ ಸಚಿವರಾಗಿದ್ದು ಜೂನ್‌ನಲ್ಲಿ ಕೇಂದ್ರ ಸಂಪುಟಕ್ಕೆ ಸೇರ್ಪಡೆಗೊಂಡಾಗ ಇಬ್ಬರೂ ಸಂಸದರಾಗಿರಲಿಲ್ಲ. ಮಂತ್ರಿಯಾದ 6 ತಿಂಗಳ ಒಳಗಡೆ ಸಂಸದರಾಗಬೇಕಾಗಿರುವ ಕಾರಣ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗಿದೆ.

ಈ ವಾರ “ಲಾಫಿಂಗ್ ಬುದ್ಧ”ನ ಆಗಮನ

ರಾಜ್ಯಸಭೆಯ ಒಟ್ಟು 245 ಸ್ಥಾನಗಳ ಪೈಕಿ 8 ಸ್ಥಾನಗಳು (ಜಮ್ಮು ಮತ್ತು ಕಾಶ್ಮೀರದಿಂದ 4, ನಾಮನಿರ್ದೇಶಿತ 4) ಖಾಲಿಯಿವೆ. ಹೀಗಾಗಿ ಸದನದ ಬಲ 237 ಆಗಿರುವುದರಿಂದ ಬಹುಮತಕ್ಕೆ 119 ಸ್ಥಾನಗಳ ಅಗತ್ಯವಿದೆ.

ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಗೆ ಬಹುಮತ ಸಿಕ್ಕಿದ್ದರೂ ರಾಜ್ಯಸಭೆಯಲ್ಲಿ ಬಹುಮತದ ಕೊರತೆಯಾಗಿತ್ತು. ನಾಮ ನಿರ್ದೇಶನಗೊಂಡ 6 ಸದಸ್ಯರು ಮತ್ತು ಹರಿಯಾಣದ ಓರ್ವ ಪಕ್ಷೇತರ ಸೇರಿದಂತೆ ಎನ್‌ಡಿಎ ಮೈತ್ರಿಕೂಟದ ಸದಸ್ಯರ ಸಂಖ್ಯೆ 110 ಇತ್ತು. ಈ ಚುನಾವಣೆಯ ನಂತರ ಎನ್‌ಡಿಎ ಸದಸ್ಯರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ.

ರಾಜ್ಯಸಭೆಯಲ್ಲಿ ಬಿಜೆಪಿಯ ಸದಸ್ಯರ ಸಂಖ್ಯೆ 96ಕ್ಕೆ ಏರಿಕೆಯಾಗಿದ್ದು ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್‌ 27 ಸದಸ್ಯರನ್ನು ಹೊಂದಿದೆ. 13 ಸದಸ್ಯರನ್ನು ಹೊಂದುವ ಮೂಲಕ ಟಿಎಂಸಿಯು ಅತಿಹೆಚ್ಚು ಸದಸ್ಯರನ್ನು ಹೊಂದಿರುವ ಮೂರನೇ ಪಕ್ಷ ಆಗಿದೆ.

ರಾಜ್ಯಸಭೆಯ ಒಟ್ಟು ಸದಸ್ಯರ ಸಂಖ್ಯೆ 245 ಆಗಿದ್ದು ಬಹುಮತಕ್ಕೆ 123 ಸ್ಥಾನದ ಅಗತ್ಯ ಬೇಕಿದೆ. ನಾಮ ನಿರ್ದೇಶಿತ ಸದಸ್ಯರ ನಾಲ್ಕು ಸ್ಥಾನಗಳನ್ನು ಸರ್ಕಾರ ಭರ್ತಿಗೊಳಿಸಿದರೆ ಎನ್‌ಡಿಎ ಸದಸ್ಯರ ಸಂಖ್ಯೆ 125ಕ್ಕೆ ಏರಿಕೆಯಾಗಲಿದೆ.

2014ರ ನಂತರ ಮೊದಲ ಬಾರಿಗೆ ಎನ್‌ಡಿಎ ಒಕ್ಕೂಟ ರಾಜ್ಯಸಭೆಯಲ್ಲಿ ಬಹುಮತ ಪಡೆದಿದೆ. ಮೋದಿ ಸರ್ಕಾರದ ಎರಡೂ ಅವಧಿಯಲ್ಲಿ ಎನ್‌ಡಿಎ ಮತ್ತು ಯುಪಿಎ ಹೊರತಾದ ಪಕ್ಷಗಳ ಸದಸ್ಯರ ಬಲದಿಂದ ರಾಜ್ಯಸಭೆಯಲ್ಲಿ ಮಸೂದೆಗಳನ್ನು ಪಾಸ್‌ ಮಾಡುತಿತ್ತು.

ವೈಎಸ್‌ಆರ್‌ಪಿ(11), ಬಿಜೆಡಿ(8), ಎಐಎಡಿಎಂಕೆ(4) ಸದಸ್ಯರು ಹಲವು ಬಾರಿ ಸರ್ಕಾರದ ಪರ ನಿಂತಿದ್ದರು. ಈ ಬಾರಿ ವೈಎಸ್‌ಆರ್‌ಪಿ ಮತ್ತು ಬಿಜೆಡಿ ವಿರೋಧ ಪಕ್ಷದ ಸ್ಥಾನದಲ್ಲಿದೆ.

You Might Also Like

ಆರ್‌ಸಿಬಿ ಫ್ಯಾನ್ಸ್‌ ಗೆ ಗುಡ್‌ನ್ಯೂಸ್‌- DK ರಿಎಂಟ್ರಿ

Internal Reservation Report : ಬಹುನಿರೀಕ್ಷಿತ ಒಳ ಮೀಸಲಾತಿ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

ಪರಮಾಣು ಬೆದರಿಕೆ ಹಾಕಿದ ರಣಹೇಡಿ ಆಸಿಮ್ ಮುನೀರ್, ಪ್ರತಿಕ್ರಿಯೆ ನೀಡಿದ ಭಾರತದ ವಿದೇಶಾಂಗ ಸಚಿವಾಲಯ

ನಟ ದರ್ಶನ್​ಗೆ ಜೈಲೂಟವೇ ಗತಿ

Video : ಕ್ರಿಕೆಟ್ ಆಡುತ್ತಲೇ ಪ್ರಾಣಬಿಟ್ಟ ಯುವಕ, ಹೃದಯಾಘಾತ ವಿಡಿಯೋ ವೈರಲ್

TAGGED:ndaRajya Sabha
Share This Article
Facebook Copy Link Print
Previous Article laughing Buddha ಈ ವಾರ “ಲಾಫಿಂಗ್ ಬುದ್ಧ”ನ ಆಗಮನ
Next Article Karnataka Working Journalist's Voice Association District Conference ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆಯ ಜಿಲ್ಲಾ ಸಮಾವೇಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up