ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಕರ್ನೈಲ್ ಸಿಂಗ್ ಮತ್ತು ಧರ್ಮರಾಜ್ ಕಶ್ಯಪ್ ಎಂದು ಗುರುತಿಸಲಾಗಿದೆ.ಕರ್ನೈಲ್ ಉತ್ತರ ಪ್ರದೇಶದ ನಿವಾಸಿಯಾಗಿದ್ದು, ಧರ್ಮರಾಜ್ ಹರ್ಯಾಣದವನು ಎನ್ನಲಾಗಿದೆ.ವಿಚಾರಣೆ ವೇಳೆ ಆರೋಪಿಗಳು ತಮ್ಮನ್ನು ಬಿಷ್ಣೋಯ್ ಗ್ಯಾಂಗ್ನ ಸದಸ್ಯರು ಎಂದು ಗುರುತಿಸಿಕೊಂಡಿದ್ದಾರೆ.
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಜಿತ್ ಪವಾರ್ ಬಣದ ಪ್ರಮುಖ ರಾಜಕಾರಣಿ ಮತ್ತು ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಬಾಬಾ ಸಿದ್ದಿಕಿ (66) ಅವರನ್ನು ಕಳೆದ ರಾತ್ರಿ ಬಾಂದ್ರಾದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ.ಸಿದ್ದೀಕ್ ಅವರ ಮಗನ ಕಚೇರಿ ಬಳಿ ಕನಿಷ್ಠ ಆರು ಗುಂಡುಗಳನ್ನು ಹಾರಿಸಲಾಗಿದ್ದು, ನಾಲ್ಕು ಗುಂಡುಗಳು ಅವರ ಎದೆಗೆ ತಗುಲಿವೆ. ಇದು ಗುತ್ತಿಗೆ ಕೊಲೆ ಎಂದು ಶಂಕಿಸಿರುವ ಪೊಲೀಸರು ಪ್ರಕರಣದ ತನಿಖೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದಾರೆ.
ದಸರಾ ಹಬ್ಬದ ಸಂದರ್ಭದಲ್ಲಿ ಈ ಗುಂಡಿನ ದಾಳಿಯನ್ನು ಮೂವರು ಪುರುಷರು ನಡೆಸಿದ್ದಾರೆ. ಹರಿಯಾಣದ ಕರ್ನೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಎಂಬ ಇಬ್ಬರನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿ ಪರಾರಿಯಾಗಿದ್ದಾನೆ.ನಿರ್ಮಲ್ ನಗರದ ಕೋಲ್ಗೇಟ್ ಗ್ರೌಂಡ್ ಬಳಿ ಇರುವ ಬಾಬಾ ಸಿದ್ದಿಕಿ ಪುತ್ರ ಹಾಗೂ ಶಾಸಕ ಜೀಶಾನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಈ ಘಟನೆ ನಡೆದಿದೆ. ಘಟನೆ ನಡೆದ ತಕ್ಷಣ ಇಬ್ಬರನ್ನು ಬಂಧಿಸಲಾಗಿದೆ.
ಬಾಬಾ ಸಿದ್ದಿಕಿ ಅವರು ಬಾಂದ್ರಾ (ಪಶ್ಚಿಮ) ಕ್ಷೇತ್ರವನ್ನು ವಿಧಾನಸಭೆಯಲ್ಲಿ ಮೂರು ಬಾರಿ ಪ್ರತಿನಿಧಿಸಿದ್ದರು. ಮುಂಬೈನ ಪ್ರಮುಖ ಮುಸ್ಲಿಂ ನಾಯಕ ಸಿದ್ದಿಕಿ, ಹಲವಾರು ಬಾಲಿವುಡ್ ತಾರೆಯರ ನಿಕಟವರ್ತಿಯಾಗಿದ್ದರು. ಬಾಬಾ ಸಿದ್ದೀಕಿ ಹತ್ಯೆ ಚುನಾವಣೆಯ ಹೊಸ್ತಿನಲ್ಲಿರುವ ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

