ನವದೆಹಲಿ: ವಕ್ಫ್ ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿ ಸಭೆ ಇಂದು ನಡೆಯಿತು. ಪ್ರತಿಪಕ್ಷಗಳ ಸಂಸದರು ಇಂದು ಸಭೆಯನ್ನು ಬಹಿಷ್ಕರಿಸಿ ಹೊರನಡೆದಿದ್ದಾರೆ.
ಸಭೆಯನ್ನು ಕಾಂಗ್ರೆಸ್ನ ಗೌರವ್ ಗೊಗೊಯ್ ಮತ್ತು ಇಮ್ರಾನ್ ಮಸೂದ್, ಡಿಎಂಕೆಯ ಎ ರಾಜಾ, ಶಿವಸೇನೆಯ (ಉದ್ಧವ್) ಅರವಿಂದ್ ಸಾವಂತ್, ಎಐಎಂಐಎಂನ ಅಸಾದುದ್ದೀನ್ ಓವೈಸಿ, ಸಮಾಜವಾದಿ ಪಕ್ಷದ ಮೊಹಿಬುಲ್ಲಾ ಮತ್ತು ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್ ಸೇರಿದಂತೆ ಹಲವಾರು ವಿರೋಧ ಪಕ್ಷದ ಸಂಸದರು ವಿರೋಧಿಸಿದರು.
ಜಂಟಿ ಸಮಿತಿ ನಿಯಮಾನುಸಾರ ಕೆಲಸ ಮಾಡುತ್ತಿಲ್ಲ ಎಂದು ಶಿವಸೇನೆ ನಾಯಕ ಅರವಿಂದ್ ಸಾವಂತ್ ಆರೋಪಿಸಿದರು.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ಮತ್ತು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರು ಕರ್ನಾಟಕ ಸರ್ಕಾರ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದರು.
ವಕ್ಫ್ ತಿದ್ದುಪಡಿ ಮಸೂದೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದರು. ಬಳಿಕ ಪ್ರತ್ಯೇಕ ಸಭೆ ನಡೆಸಿದ ವಿಪಕ್ಷ ಸದಸ್ಯರು ಜೆಪಿಸಿ ಧೋರಣೆ ಕುರಿತು ಲೋಕಸಭೆ ಸ್ಪೀಕರ್ ಅವರನ್ನು ಸಂಪರ್ಕಿಸಲು ನಿರ್ಧರಿಸಿದರು.

