By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚನ್ನಪಟ್ಟಣ ಟಿಕೆಟ್ ವಿಚಾರ : ನೆಲದವರೆಗೂ ಬಗ್ಗಿದ್ದೇನೆ, ಇನ್ನೂ ಬಗ್ಗಲು ನನ್ನಿಂದ ಸಾಧ್ಯವಿಲ್ಲ ಎಂದ ಹೆಚ್ಡಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಚನ್ನಪಟ್ಟಣ ಟಿಕೆಟ್ ವಿಚಾರ : ನೆಲದವರೆಗೂ ಬಗ್ಗಿದ್ದೇನೆ, ಇನ್ನೂ ಬಗ್ಗಲು ನನ್ನಿಂದ ಸಾಧ್ಯವಿಲ್ಲ ಎಂದ ಹೆಚ್ಡಿಕೆ

BlogMain PostTop Storiesರಾಜಕೀಯ | Politics

ಚನ್ನಪಟ್ಟಣ ಟಿಕೆಟ್ ವಿಚಾರ : ನೆಲದವರೆಗೂ ಬಗ್ಗಿದ್ದೇನೆ, ಇನ್ನೂ ಬಗ್ಗಲು ನನ್ನಿಂದ ಸಾಧ್ಯವಿಲ್ಲ ಎಂದ ಹೆಚ್ಡಿಕೆ

HD Kumaraswamy on Channapatna Assembly Byelection

Published October 22, 2024
Share
5 Min Read
HD Kumaraswamy
SHARE

ಬೆಂಗಳೂರು: ಚನ್ನಪಟ್ಟಣ ಟಿಕೆಟ್ ವಿಷಯಕ್ಕೆ ನೆಲದವರೆಗೂ ಬಗ್ಗಿದ್ದೇನೆ. ಇನ್ನೂ ಬಗ್ಗಿ ಎಂದರೆ ಎಲ್ಲಿಗೆ ಬಗ್ಗಲಿ. ನನ್ನ ತಾಳ್ಮೆ, ಸಹನೆಗೂ ಮಿತಿ ಇದೆ. ಅಭ್ಯರ್ಥಿ ವಿಷಯದಲ್ಲಿ ಕಾರ್ಯಕರ್ತರ ಭಾವನೆಗಳಿಗೆ ವಿರುದ್ಧವಾಗಿ ನಿರ್ಧಾರ ಕೈಗೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಕಾರ್ಯಕರ್ತರು ಮುಖಂಡರ ಸಭೆಯಲ್ಲಿ ಮಾತನಾಡಿದರು ಕೇಂದ್ರ ಸಚಿವರು.

ನನಗೆ ಭಯವೇ ಇಲ್ಲ
ಈ ರಾಜ್ಯದಲ್ಲಿ ನನ್ನಷ್ಟು ಉಪ ಚುನಾವಣೆಗಳನ್ನು ಎದುರಿಸಿದ, ಯಶಸ್ವಿಯಾಗಿ ನಿಭಾಯಿಸಿದ ವ್ಯಕ್ತಿ ಇನ್ನೊಬ್ಬರಿಲ್ಲ, ಎಂತೆಂತಹ ಚುನಾವಣೆಗಳನ್ನು, ಅಗ್ನಿಪರೀಕ್ಷೆಗಳನ್ನು ಎದುರಿಸಿದ್ದೇನೆ. ಚನ್ನಪಟ್ಟಣ ಚುನಾವಣೆ ಎದುರಿಸುವುದಕ್ಕೆ ನನಗೆ ಭಯವೇ..? ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವರು ಗುಡುಗಿದರು. ನಿಮ್ಮಂತ ಕಾರ್ಯಕರ್ತರು ಜೊತೆಯಲ್ಲಿ ಇರಬೇಕಾದರೆ ನಾವು ಹೆದುರುತ್ತೇವೆಯೇ? ನೆಲದವರಿಗೆ ಬಗ್ಗಿದ್ದೇನೆ, ಜೆಡಿಎಸ್ ಮುಗಿಸಲು ಅನೇಕರು ನಮ್ಮಿಂದಲೇ ಬೆಳೆದವರು ಎಂತೆತ ಮಾತಾಡಿದ್ದಾರೆ

ಮೋದಿ, ಶಾ ಸಂಬಂಧ ಹಾಳು ಮಾಡಿಕೊಳ್ಳಲಾರೆ
ನಾನು ಬಗ್ಗಿರುವುದು ಅಧಿಕಾರಕ್ಕಾಗಿ ಅಲ್ಲಾ. ವೈಯಕ್ತಿಕವಾಗಿ ನಾನು ಮಾಡದಿರುವ ತಪ್ಪಿಗೆ ತಲೆಕೊಟ್ಟಿದ್ದೇನೆ. ಈ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಮೂಲೋತ್ಪಾಟನೆ ಮಾಡಬೇಕು ಎನ್ನುವ ಪ್ರಧಾನಿ ಮೋದಿ ಸಂಕಲ್ಪಕ್ಕೆ ಹೆಗಲಾಗಿ ನಿಂತಿದ್ದೇನೆ ಎಂದು ಅವರು ಹೇಳಿದರು.

ನಾಲ್ಕು ತಿಂಗಳಾಯಿತು ನಾನು ಮಂತ್ರಿಯಾಗಿ. ಆರೋಗ್ಯ ಹಾಳು ಮಾಡಿಕೊಂಡು ಏತಕ್ಕಾಗಿ ಇಷ್ಟೆಲ್ಲಾ ಮಾಡಬೇಕು. ನನ್ನಿಂದ ಜನರಿಗೆ ಅಲ್ಪಸ್ವಲ್ಪವಾದರೂ ಸಹಾಯ ಆಗುತ್ತದೆಯೇ ಎಂದು ಒಡ್ಡಾಡುತ್ತಿದ್ದೇನೆ. ಎನ್ ಡಿಎ ಮೈತ್ರಿ ಭದ್ರವಾಗಿದೆ. ಪ್ರಧಾನಿ ಮೋದಿ ಅವರು ದೇವೇಗೌಡರಿಗೆ ಕೊಡುವ ಗೌರವವನ್ನು ಯಾರಿಗೂ ಕೊಡಲ್ಲ. ಅವರಿಬ್ಬರ ನಡುವಿನ ಗೌರವಭಾವ ಎಂತದ್ದು ಎನ್ನುವುದನ್ನು ನಾನು ನೋಡಿದ್ದೇನೆ. ಆ ಸಂಬಂಧಕ್ಕೆ ಚ್ಯುತಿ ಬರಬಾರದು. ಅದಕ್ಕಾಗಿ ಬಗ್ಗಿದ್ದೇನೆ, ಇನ್ನೂ ಬಗ್ಗಿ ಎಂದರೆ ನನ್ನಿಂದ ಸಾಧ್ಯವಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಜೆಡಿಎಸ್ ನಿಂದಲೇ ಟಿಕೆಟ್ ಕೊಡಿ ಎಂದಿದ್ದರು ನಡ್ಡಾ
ನವದೆಹಲಿಯಲ್ಲಿ ಭೇಟಿಯಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಅವರಿಗೆ (ಯೋಗೇಶ್ವರ್) ರಾಜೀನಾಮೆ ಕೊಟ್ಟು ಜೆಡಿಎಸ್ ನಿಂದ ಚುನಾವಣೆಗೆ ನಿಲ್ಲುವುದಕ್ಕೆ ಹೇಳುತ್ತೇವೆ ಎಂದು ಹೇಳಿದ್ದರು. ನಾನು ಈ ಸಂಬಂಧ ಉಳಿಯಬೇಕು, ಒಂದು ಸ್ಥಾನ ಮುಖ್ಯವಲ್ಲ, ಎನ್ ಡಿಎ ಮೈತ್ರಿ ಗೆಲ್ಲಬೇಕು ಎಂದು ಹೇಳುತ್ತಲೇ ಇದ್ದೇನೆ. ಮೋದಿ, ಅಮಿತ್ ಶಾ, ನಡ್ಡಾ ಅವರಂತಹ ನಾಯಕರ ಜತೆ ಸಂಬಂಧ ಕಡಿದುಕೊಳ್ಳಬೇಕಾ? ಎಂದು ಅವರು ಕಿಡಿಕಾರಿದರು.

ದೆಹಲಿಯ ಬಿಜೆಪಿ ನಾಯಕರು ಜೆಡಿಎಸ್ ಪಕ್ಷಕ್ಕೆ ಬಹಳ ಗೌರವ ಕೊಟ್ಟಿದ್ದಾರೆ. ನನಗೆ ಕೆಲಸ ಮಾಡಲು ಮುಕ್ತ ಅವಕಾಶ ನೀಡಿದ್ದಾರೆ. ಏನೇ ಮನವಿ ಮಾಡಿದರೂ ತಕ್ಷಣ ಸ್ಪಂದಿಸುತ್ತಿದ್ದಾರೆ. ನಿಮ್ಮ ಭಾವನೆಗಳಿಗೆ ಧಕ್ಕೆ ಆಗದಂತೆ ನಿರ್ಧಾರ ಮಾಡುತ್ತೇನೆ. ನಿಮ್ಮ ಮಾತಿಗೆ ಗೌರವ ನೀಡುತ್ತೇನೆ. ಕಾರ್ಯಕರ್ತರು ಒಟ್ಟಾಗಿರಿ, ಯಾರಿಗೂ ತಲೆಬಾಗಬೇಕಿಲ್ಲ. ಗೌರವಕ್ಕೆ ತಲೆಬಾಗೊಣ,‌ ಇನ್ನು ಮೂರು ದಿನ‌ ಸಮಯ ಇದೆ. ನನ್ನ ಕಾರ್ಯಕರ್ತರ ಭಾವನೆಯೇ ಅಂತಿಮ. ಸಮಯ ಕೊಡಿ ಎಂದು ಕುಮಾರಸ್ವಾಮಿ ಅವರು ಕಾರ್ಯಕರ್ತರನ್ನು ಮನವಿ ಮಾಡಿಕೊಂಡರು.

ಕಾಂಗ್ರೆಸ್ ಪಕ್ಷದವರು ಕುತಂತ್ರ ಮಾಡಿ ನಮ್ಮ ಪಕ್ಷವನ್ನು ಪಾತಾಳಕ್ಕೆ ತುಳಿದಿದ್ದಾರೆ. ಅವರು ತುಳಿದಷ್ಟೂ ನಾವು ಪ್ರಬಲವಾಗಿ ಎದ್ದು ಬಂದಿದ್ದೇವೆ. ಲೋಕಸಭೆ ಚುನಾವಣೆಗೆ ಮೊದಲು ಜೆಡಿಎಸ್ ಮುಗಿದೇ ಹೋಯಿತು ಎಂದು ಜಾಗಟೆ ಹೊಡೆಯುತ್ತಿದ್ದರು. ಈಗ ಇದೇ ಕುಮಾರಸ್ವಾಮಿ ಏನು ಎನ್ನುವುದು ಅವರಿಗೆ ಅರ್ಥವಾಗಿದೆ. ಇಂಥ ಕಾಂಗ್ರೆಸ್ ನವರಿಗೆ ನಾನು ಹೆದರಲ್ಲ. ಚಿನ್ನದಂತಹ ಕಾರ್ಯಕರ್ತರು ಇದ್ದೀರಿ. ಧೈರ್ಯವಾಗಿ ಚುನಾವಣೆ ಎದುರಿಸೋಣ. ಇದೊಂದು ಅಗ್ನಿಪರೀಕ್ಷೆ ನಿಜ, ಹಾಗಂತ ಎದೆಗುಂದಬೇಕಿಲ್ಲ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು ಕೇಂದ್ರ ಸಚಿವರು.

ಕಾರ್ಯಕರ್ತರ ಆಗ್ರಹಕ್ಕೆ ಮಣಿದು ಭಾಷಣ ಮೊಟಕುಗೊಳಿಸಿದ HDK
ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ಕೊಡಬೇಕು, ಯಾವುದೇ ಕಾರಣಕ್ಕೂ ಯೋಗೇಶ್ವರ್ ಅವರಿಗೆ ಕೊಡಬಾರದು ಎಂದು ಚನ್ನಪಟ್ಟಣ ಕಾರ್ಯಕರ್ತರು ಗದ್ದಲ ಎಬ್ಬಿಸಿದರು. ನಿಖಿಲ್ ಕುಮಾರಸ್ವಾಮಿ ಅವರು ಭಾಷಣ ಮಾಡುವಾಗಲೂ ಪದೇಪದೆ ಅಡ್ಡಿಪಡಿಸಿ, ನಿಖಿಲ್ ಅವರ ಹೆಸರನ್ನು ಘೋಷಣೆ ಮಾಡುವಂತೆ ಒತ್ತಾಯಿಸಿದರು.

ನಮ್ಮನ್ನು ಯೋಗೇಶ್ವರ್ ಹಿಂಸಿಸಿದ್ದಾರೆ. ನೀವು ಶಾಸಕರಾಗಿದ್ದಾಗಲೇ ನಮಗೆ ಕೊಡಬಾರದ ಕಾಟ ಕೊಟ್ಟರು. ಆ ವ್ಯಕ್ತಿಯೇ ಶಾಸಕರಾಗಿದ್ದಾಗ ಜೆಡಿಎಸ್ ಕಾರ್ಯಕರ್ತರು ಪ್ರತಿದಿನವೂ ಪೊಲೀಸ್ ಠಾಣೆಗೆ ಅಲೆಯಬೇಕಾಗಿತ್ತು. ಒಂದು ವೇಳೆ ನೀವು ನಿಖಿಲ್ ಅವರನ್ನು ಬಿಟ್ಟು ಯೋಗೇಶ್ವರ್ ಗೆ ಮಣೆ ಹಾಕಿದರೆ ನಮ್ಮ ಆಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂದು ಹಠ ಹಿಡಿದರು ಕಾರ್ಯಕರ್ತರು.

ಅಯೋಧ್ಯೆ ವಿವಾದ ಇತ್ಯರ್ಥಕ್ಕೆ ದೇವರಲ್ಲಿ ಬೇಡಿಕೊಂಡಿದ್ದೆ : ಭಾರಿ ಚರ್ಚೆಯಾಗುತ್ತಿದೆ ಸಿಜೆಐ ಚಂದ್ರಚೂಡ್ ಹೇಳಿಕೆ

ಕಾರ್ಯಕರ್ತರ ಕೂಗಾಟ, ಆಕ್ರೋಶದ ಕಾರಣದಿಂದ ಕುಮಾರಸ್ವಾಮಿ ಅವರು ಭಾಷಣ ಮುಂದುವರಿಸಲು ಆಗಲಿಲ್ಲ. ಮೊದಲು ನಿಖಿಲ್ ಅವರ ಹೆಸರು ಘೋಷಣೆ ಮಾಡಿ, ಆಮೇಲೆ ಬೇಕಾದರೆ ನಿಮ್ಮ ಭಾಷಣ ಕೇಳುತ್ತೇವೆ ಎಂದರು. ಕೊನೆಗೆ, ನನ್ನ ಆರೋಗ್ಯ ಸರಿ ಇಲ್ಲ. ಮಾತನಾಡಲು ಅವಕಾಶ ಕೊಡಿ ಎಂದರೂ ಕಾರ್ಯಕರ್ತರು ಕೇಳಲಿಲ್ಲ. ಕೊನೆಗೂ ಗದ್ದಲದಲ್ಲಿಯೇ ಕೇಂದ್ರ ಸಚಿವರು ಭಾಷಣ ಮೊಟಕು ಮಾಡಿದರು.

ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು, ಶಾಸಕಾಂಗ ಪಕ್ಷದ ನಾಯಕರಾದ ಸಿ.ಬಿ.ಸುರೇಶ್ ಬಾಬು, ಮಾಜಿ ಸಚಿವರಾದ ಸಾ ರಾ ಮಹೇಶ್, ವೆಂಕಟರಾವ್ ನಾಡಗೌಡ, ಶಾಸಕ ಶರಣು ಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯ ಮಂಜೇಗೌಡ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಚನ್ನಪಟ್ಟಣ ತಾಲೂಕು ಅಧ್ಯಕ್ಷ ಜಯಮುತ್ತು, ಹಾಪಕಾಮ್ಸ್ ದೇವರಾಜು, ಹಿರಿಯ ಮುಖಂಡ ಪ್ರಸನ್ನ, ಜಯರಾಂ ಮುಂತಾದವರು ವೇದಿಕೆಯ ಮೇಲಿದ್ದರು.

ನಡ್ಡಾ, ಪ್ರಹ್ಲಾದ್ ಜೋಷಿ ಸೇರಿ ಯೋಗೇಶ್ವರಗೆ ಜೆಡಿಎಸ್ ಟಿಕೆಟ್ ಕೊಡಿ ಎಂದು ಕೇಳಿದ್ದಾರೆ : HDK
ಬೆಂಗಳೂರು: ನಡ್ಡಾ, ಪ್ರಹ್ಲಾದ್ ಜೋಷಿ ಸೇರಿ ಯೋಗೇಶ್ವರಗೆ ಜೆಡಿಎಸ್ ಟಿಕೆಟ್ ಕೊಡಿ ಎಂದು ಕೇಳಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಯೋಗೇಶ್ವರ್ ಸ್ವಾಗತಕ್ಕೆ ಕ್ಯೂ ನಿಂತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣ ಕಾರ್ಯಕರ್ತರು, ಮುಖಂಡರ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ ಅವರು; ಚನ್ನಪಟ್ಟಣ ಕಾರ್ಯಕರ್ತರ ಸಭೆಯಲ್ಲಿ ಅವರ ಭಾವನೆಗಳನ್ನು ಅರಿತುಕೊಂಡಿದ್ದೇನೆ. ಸ್ಥಳಿಯವಾಗಿ ಬಿಜೆಪಿ ನಾಯಕರಲ್ಲಿ ಗೊಂದಲವಿದೆ. ಇನ್ನೂ ಮೂರು ದಿನ ಸಮಯವಿದೆ. ಎಲ್ಲಾ ಬೆಳವಣಿಗೆ ಗಮನಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

ಬೆಳಗ್ಗೆಯಿಂದ ಎಲ್ಲಾ ಕಾಂಗ್ರೆಸ್ ನಾಯಕರು ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಸಾಲು ಸಾಲಾಗಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಸಿಎಂ, ಡಿಸಿಎಂ ಸೇರಿದರೆ ಕೈ ಪಕ್ಷದ ಅನೇಕ ನಾಯಕರು ಸ್ವಾಗತ ಕೋರುತ್ತಿದ್ದಾರೆ. ಮೂರು ದಿನಗಳ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾ ಅವರು ನನ್ನ‌ ಮುಂದೆ ಪ್ರಸ್ತಾವನೆ ಇಟ್ಟಿದ್ದರು.

ಅವರಿಗೆ ಜೆಡಿಎಸ್ ಪಕ್ಷದಿಂದಲೇ ಬಿ ಫಾರಂ ಕೊಡಿ ಎಂದು ಅವರು ಕೇಳಿದ್ದರು. ಅವರ ಮಾತಿಗೆ ಗೌರವ ಕೊಡಲು ನಾವು ನಿರ್ಧಾರ ಮಾಡಿದ್ದೆವು. ಪಕ್ಷದ ವೇದಿಕೆಯಲ್ಲಿ ಕೂಡ ಈ ಬಗ್ಗೆ ಸಮಾಲೋಚನೆ ನಡೆಸಿದ್ದೆ ಎಂದು ಕೇಂದ್ರ ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮೊದಲು ಯಾವ ಪಕ್ಷದಿಂದಲಾದರೂ ಟಿಕೆಟ್ ಕೊಟ್ಟರೆ ನಿಲ್ಲುತ್ತೇನೆ ಎಂದು ಯೋಗೇಶ್ವರ್ ಹೇಳುತ್ತಿದ್ದರು. ಆಮೇಲೆ ವರಸೆ ಬದಲಿಸಿದರು. ಈಗ ಬಿಎಸ್ಪಿಯಿಂದ ನಿಲ್ಲುತ್ತೇನೆ ಎನ್ನುತ್ತಿದ್ದಾರೆ. ಕಾಂಗ್ರೆಸ್ ನಾಯಕರು ನೋಡಿದರೆ ಈಗಾಗಲೇ ಸ್ವಾಗತ ಕೋರಲಿಕ್ಕೆ ಕ್ಯೂ ನಿಂತುಕೊಂಡಿದ್ದಾರೆ. ಪ್ರಹ್ಲಾದ ಜೊಶಿ ಅವರು ಪೋನ್ ಕರೆ ಮಾಡಿ ಯೋಗೇಶ್ವರಗೆ ಟಿಕೆಟ್ ಕೊಡಿ ಎಂದು ಮನವಿ ಮಾಡಿದ್ದರು.

ಮತ್ತೆ ನಡ್ಡಾ ಅವರೂ ಕರೆ ಮಾಡಿ ಯೋಗೇಶ್ವರ್ ಜೆಡಿಎಸ್ ನಿಂದಲೇ ಅಭ್ಯರ್ಥಿಯಾಗಲಿ ಎಂದು ಹೇಳಿದ್ದಾರೆ. ಕಾಂಗ್ರೆಸ್ ನವರು ನೋಡಿದರೆ ಯೋಗೇಶ್ವರ್ ಅವರನ್ನು ಬರ ಮಾಡಿಕೊಳ್ಳಲು ಸಜ್ಜಾಗಿ ನಿಂತಿದ್ದಾರೆ. ನಾನು ಏನು ಮಾಡೋದು? ಎಂದು ಕುಮಾರಸ್ವಾಮಿ ಅವರು ಕೇಳಿದರು.

You Might Also Like

ಪ್ರತಿ ಕಂಬಳಕ್ಕೂ 5 ಲಕ್ಷ ರೂ. ಅನುದಾನ ನೀಡಲು ಸರ್ಕಾರ ಆದೇಶ

ಮೆಲೋನಿ-ಮೋದಿ ಭೇಟಿ : ಜಿ 20 ಶೃಂಗಸಭೆಯಲ್ಲಿ ವಿವಿಧ ರಾಷ್ಟ್ರಗಳ ನಾಯಕರ ಜೊತೆ ಪ್ರಧಾನಿ ಚರ್ಚೆ

ಬುಲೆಟ್ ಪ್ರೂಫ್ ಕಾರು ಬಳಸಲಾರಂಭಿಸಿದ ರಾಜ್ಯಪಾಲರು

ತಲೆ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ ಪ್ರಕರಣ, ಮಹಿಳೆಯ ಸ್ಥಿತಿ ಗಂಭೀರ

ಮೋದಿಯವರನ್ನು ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣದಲ್ಲಿ ಎಳೆದು ತರಬೇಡಿ: ನಿಖಿಲ್ ಕುಮಾರಸ್ವಾಮಿ

TAGGED:hd kumaraswamy
Share This Article
Facebook Copy Link Print
Previous Article CJI Chandrachud ಅಯೋಧ್ಯೆ ವಿವಾದ ಇತ್ಯರ್ಥಕ್ಕೆ ದೇವರಲ್ಲಿ ಬೇಡಿಕೊಂಡಿದ್ದೆ : ಭಾರಿ ಚರ್ಚೆಯಾಗುತ್ತಿದೆ ಸಿಜೆಐ ಚಂದ್ರಚೂಡ್ ಹೇಳಿಕೆ
Next Article CP Yogeshwar And Nikhil Kuamraswamy ಯೋಗೇಶ್ವರ್ 5 ಬಿ ಫಾರಂ ಇಟ್ಟುಕೊಂಡು ತಿರುಗಾಡುತ್ತಿದ್ದಾರೆ : ನಿಖಿಲ್ ಕುಮಾರಸ್ವಾಮಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
asfsfsdfd asfsfsdfd asfsfsdfd
ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ
ರಾಷ್ಟ್ರೀಯ-National Latest
April 19, 2026
vinay kulkarni
ಜೀವಾವಧಿ ಶಿಕ್ಷೆಗೊಳಗಾದ ವಿನಯ್ ಕುಲಕರ್ಣಿ ಖೈದಿ ಸಂಖ್ಯೆ ನೀಡಿದ ಜೈಲಾಧಿಕಾರಿಗಳು
ರಾಜ್ಯ-Karnataka
April 19, 2026
dgshgsh dgshgsh dgshgsh
ಐಪಿಎಲ್ : ‘ಮಿಲ್ಲರ್’ ಕಿಲ್ಲರ್ ಆಟಕ್ಕೆ ಶರಣಾದ ಆರ್ಸಿಬಿ, ರೋಚಕ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್
ಕ್ರೀಡೆ-Sports
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up