ಅಯೋಧ್ಯೆ: ಅಯೋಧ್ಯೆಯಲ್ಲಿ 8ನೇ ಆವೃತ್ತಿಯ ದೀಪೋತ್ಸವದ ಸಿದ್ಧತೆಗಳು ಅಂತಿಮ ಹಂತದಲ್ಲಿದ್ದು, ನಾಳೆ (ಅಕ್ಟೋಬರ್ 30) ಅಯೋಧ್ಯೆ ನಗರವನ್ನು 28 ಲಕ್ಷ ಮಣ್ಣಿನ ಹಣತೆಗಳಿಂದ ದೀಪ ಬೆಳಗಿಸುವ ಮೂಲಕ ಮತ್ತೊಂದು ವಿಶ್ವ ದಾಖಲೆಯನ್ನು ರಚಿಸಲು ಪ್ಲಾನ್ ಮಾಡಲಾಗಿದೆ.
ಈ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ದೀಪೋತ್ಸವದ ಸಿದ್ಧತೆಗಳು ಅಂತಿಮ ಹಂತದಲ್ಲಿವೆ. ದೀಪಗಳನ್ನು ಇರಿಸುವ ಕೆಲಸ ನಡೆಯುತ್ತಿದೆ. ಲೇಸರ್, ಸೌಂಡ್ ಮತ್ತು ಡ್ರೋನ್ ಶೋಗಳ ಪ್ರಯೋಗಗಳು ಪ್ರಗತಿಯಲ್ಲಿವೆ ಎಂದಿದ್ದಾರೆ.
ಈ ವರ್ಷ ಈ ಕಾರ್ಯಕ್ರಮವು ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಏಕೆಂದರೆ ಇದು ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹವನ್ನು ಪ್ರತಿಷ್ಠಾಪಿಸಿದ ನಂತರ ನಡೆಯುತ್ತಿರುವ ಮೊದಲ ದೀಪೋತ್ಸವವಾಗಿದೆ. ಈ ದೀಪೋತ್ಸವವು ಪವಿತ್ರ ನಗರದ ಆಧ್ಯಾತ್ಮಿಕ, ಸಾಂಪ್ರದಾಯಿಕ ಮತ್ತು ಸಾಂಸ್ಕೃತಿಕ ಸಾರವನ್ನು ತೋರಿಸುತ್ತದೆ.
ಏಕೆಂದರೆ ಇದನ್ನು ಮಯನ್ಮಾರ್, ನೇಪಾಳ, ಥೈಲ್ಯಾಂಡ್, ಮಲೇಷ್ಯಾ, ಕಾಂಬೋಡಿಯಾ ಮತ್ತು ಇಂಡೋನೇಷ್ಯಾ ಈ 6 ದೇಶಗಳ ಕಲಾವಿದರು ಪ್ರದರ್ಶಿಸುತ್ತಾರೆ. ಉತ್ತರಾಖಂಡದ ರಾಮ್ ಲೀಲಾ ಪ್ರಸ್ತುತಿ ಕೂಡ ರಾತ್ರಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯವಲ್ಲದೆ, ಅನೇಕ ರಾಜ್ಯಗಳ ಕೆಲವು ದೇಶೀಯ ಕಲಾವಿದರು ಸಹ ಪ್ರದರ್ಶನ ನೀಡುತ್ತಾರೆ. ಪಶುಸಂಗೋಪನಾ ಸಚಿವ ಧರ್ಮಪಾಲ್ ಸಿಂಗ್ ಅವರು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಇಲಾಖೆಯ ಪರವಾಗಿ ಸುಮಾರು 1,50,000 ದೀಪಗಳನ್ನು ಬೆಳಗಿಸುವುದಾಗಿ ವಾಗ್ದಾನ ಮಾಡಿದ್ದಾರೆ.
ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ಮಸಿ ಮತ್ತು ಮಾಲಿನ್ಯವನ್ನು ಕಡಿಮೆ ಮಾಡಲು ಸ್ವಚ್ಛತೆ ಮತ್ತು ಪರಿಸರ ಜಾಗೃತಿಯನ್ನು ಖಚಿತಪಡಿಸಿಕೊಳ್ಳಲು ವಿಶೇಷ ಮಣ್ಣಿನ ಹಣತೆಗಳನ್ನು ಬಳಸಲಾಗುವುದು. ಅಕ್ಟೋಬರ್ 30ರಂದು ಘಾಟ್ಗಳನ್ನು ಅಲಂಕರಿಸಲು 30,000ಕ್ಕೂ ಹೆಚ್ಚು ಸ್ವಯಂಸೇವಕರು ಸಹಾಯ ಮಾಡುತ್ತಾರೆ.
ಈ ಬಾರಿಯ ದೀಪೋತ್ಸವದಲ್ಲಿ ಪರಿಸರ ಸಂರಕ್ಷಣೆಯ ಸಂದೇಶವನ್ನು ನೀಡುವ ಮೂಲಕ ದೇವಾಲಯದ ಸಂಕೀರ್ಣವನ್ನು ಹೂವಿನಿಂದ ಅಲಂಕರಿಸಲಾಗುವುದು. ಇಡೀ ಕಾರ್ಯಕ್ರಮದ ನೇರ ಪ್ರಸಾರವನ್ನು ಸಹ ಆಯೋಜಿಸಲಾಗಿದೆ. ಆಚರಣೆಯನ್ನು ಪ್ರದರ್ಶಿಸಲು ಅಯೋಧ್ಯೆಯಾದ್ಯಂತ ಎಲ್ಇಡಿ ಗೋಡೆಗಳು ಮತ್ತು ವ್ಯಾನ್ಗಳನ್ನು ಸ್ಥಾಪಿಸಲಾಗುವುದು. ನಗರವನ್ನು ಹೂವಿನ ಹಾರಗಳು ಮತ್ತು ಆಕರ್ಷಕ ಬೆಳಕಿನಿಂದ ಅಲಂಕರಿಸಲಾಗುತ್ತದೆ.
500 ವರ್ಷಗಳ ಕಾಯುವಿಕೆಯ ನಂತರ ಅಯೋಧ್ಯೆಯ ರಾಮಲಲ್ಲಾನ ಜನ್ಮಸ್ಥಳದಲ್ಲಿ ನಿರ್ಮಿಸಲಾದ ದೇವಾಲಯದಲ್ಲಿ ದೀಪಾವಳಿ ಹಬ್ಬದಂದು ಸಾವಿರಾರು ದೀಪಗಳನ್ನು ಬೆಳಗಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ಈ ವರ್ಷದ ಜನವರಿಯಲ್ಲಿ ಅಯೋಧ್ಯೆ ದೇವಸ್ಥಾನದಲ್ಲಿ ರಾಮ ಲಲ್ಲಾನ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು. ಇದು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಪ್ರಮುಖ ಭರವಸೆಯಾಗಿತ್ತು.

