By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉಪಚುನಾವಣೆ ಬಳಿಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ವಿಜಯೇಂದ್ರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಉಪಚುನಾವಣೆ ಬಳಿಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ವಿಜಯೇಂದ್ರ

Blogರಾಜಕೀಯ | Politics

ಉಪಚುನಾವಣೆ ಬಳಿಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ವಿಜಯೇಂದ್ರ

Siddaramaiah to resign as CM after by-election: Vijayendra

Published November 9, 2024
Share
3 Min Read
BY Vijayendra
SHARE

ಬೆಂಗಳೂರು: ಉಪ ಚುನಾವಣೆಯ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆನ್ನುವುದು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೂ ಗೊತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ಸಂಡೂರು ಉಪಚುನಾವಣೆ ಪ್ರಚಾರಕ್ಕೆ ಹೊರಡುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಂಡೂರಿನಲ್ಲಿ ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ಸಿನವರು 500 ರೂ. ಕೊಟ್ಟು ಜನರನ್ನು ಕರೆಸುತ್ತಿದ್ದಾರೆ ಎಂದು ಆರೋಪಿಸಿದರು. ಇದು ಟಿ.ವಿಗಳಲ್ಲಿ ಬಿತ್ತರವಾದ ಕುರಿತು ಗಮನ ಸೆಳೆದರು.

2 ದಿನಗಳ ಕಾಲ ಸಿಎಂ ಸಂಡೂರು ಪ್ರವಾಸ ನಿಗದಿಯಾಗಿತ್ತು. ಮತ್ತೆ 3 ದಿನಗಳ ಕಾಲ ವಿಸ್ತರಿಸಿದ್ದಾರೆ. ಮುಖ್ಯಮಂತ್ರಿಗಳನ್ನು ನೋಡಬೇಕು; ಅವರ ಮಾತು ಕೇಳಬೇಕು; ಅಪರಾಧಿಗಳ ಮಾತು ಕೇಳಬೇಕೆಂಬ ಆಸಕ್ತಿಯೂ ಜನರಲ್ಲಿ ಹೊರಟುಹೋಗಿದೆ ಎಂದು ವಿಶ್ಲೇಷಿಸಿದರು. ಸಿಎಂ, ಹತಾಶರಾಗಿ ಈ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದರು.

ಎಸಿಬಿ, ಲೋಕಾಯುಕ್ತ ವಿಚಾರದಲ್ಲಿ ಸಿದ್ದರಾಮಯ್ಯರಿಗೆ ಹೈಕೋರ್ಟ್ ಮಂಗಳಾರತಿ ಎತ್ತಿತ್ತು. ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಲೋಕಾಯುಕ್ತ ಬಾಗಿಲು ಹಾಕಿ ಎಸಿಬಿ ರಚಿಸಿದಾಗ ಹೈಕೋರ್ಟ್ ಮಂಗಳಾರತಿ ಎತ್ತಿತ್ತು. ಇವೆಲ್ಲ ರಾಜ್ಯದ ಜನರಿಗೆ ಗೊತ್ತಿದೆ. ಇವರ ಗೊಡ್ಡು ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ಯಡಿಯೂರಪ್ಪನವರು ದೂರ ಉಳಿದರೆ ಹೇಗಾದರೂ ಸಂಡೂರು ಗೆಲ್ಲಬಹುದು; ಹಾಗಾದರೆ ಚನ್ನಪಟ್ಟಣ, ಶಿಗ್ಗಾಂವಿ ಗೆಲ್ಲುವ ಭ್ರಮೆಯಲ್ಲಿದ್ದಾರೆ. ಸಿಎಜಿ ವರದಿ ಆಧಾರದಲ್ಲಿ ಯಡಿಯೂರಪ್ಪನವರ ವಿರುದ್ಧ ಕೇಸುಗಳನ್ನು ದಾಖಲಿಸಿದ್ದನ್ನು ಜನರು ಮರೆತಿಲ್ಲ ಎಂದು ಪ್ರಶ್ನೆಗೆ ಉತ್ತರಿಸಿದರು.

ವಾಲ್ಮೀಕಿ ನಿಗಮದ ಹಗರಣ, ಮೈಸೂರು ಮುಡಾ ಹಗರಣ ಸಿದ್ದರಾಮಯ್ಯನವರ ಬುಡಕ್ಕೆ ಬಂದಿದೆ. ಸಿದ್ದರಾಮಯ್ಯನವರ ಮುಖ್ಯಮಂತ್ರಿ ಕುರ್ಚಿ ಅಲ್ಲಾಡುತ್ತಿದೆ. ಕೇಂದ್ರದ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯನವರು 5 ವರ್ಷ ಮುಖ್ಯಮಂತ್ರಿ ಎನ್ನಲು ತಯಾರಿಲ್ಲ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಜಾಮೀನು ಕೋರಿ ಸುಪ್ರೀಂ ಮೊರೆಹೋದ ಪ್ರಜ್ವಲ್ ರೇವಣ್ಣ

ಕಾಂಗ್ರೆಸ್ ಸರಕಾರಗಳ ಅವಧಿಯಲ್ಲಿ ರಚಿಸಿದ ಆಯೋಗಗಳು, ಅವು ನೀಡಿದ ವರದಿಯ ವಿಚಾರ ನಮಗೆ ಮತ್ತು ರಾಜ್ಯದ ಜನತೆಗೆ ಗೊತ್ತಿದೆ. ಇದೇ ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಹಿಂದೆ ಲೋಕಾಯುಕ್ತದ ಬಾಗಿಲನ್ನು ಮುಚ್ಚಿ ಹಾಕಿ, ಎಸಿಬಿ ರಚಿಸಿ ತಮ್ಮನ್ನು ತಾವು ರಕ್ಷಿಸುವ ಕೆಲಸ ಮಾಡಿಲ್ಲವೇ? ಮುಖ್ಯಮಂತ್ರಿ, ಸಚಿವರು ಮತ್ತು ಶಾಸಕರನ್ನು ರಕ್ಷಿಸುವ ಕೆಲಸ ಮಾಡಿಲ್ಲವೇ ಎಂದು ಕೇಳಿದರು.

ಪಾಪ ಸಿದ್ದರಾಮಯ್ಯನವರು ಮೊನ್ನೆ ಮುಡಾ ಹಗರಣದಲ್ಲಿ ಲೋಕಾಯುಕ್ತ ತನಿಖೆ ಎದುರಿಸಿದ್ದರು. ಬಹಳ ಧೈರ್ಯವಾಗಿ, ಮುಖ್ಯಮಂತ್ರಿಗಳಿಗೆ ಬೇಕಾದ ತನಿಖಾಧಿಕಾರಿಗಳು ಲೋಕಾಯುಕ್ತದಲ್ಲಿ ಇದ್ದಾರೆಂದು ಮನವರಿಕೆ ಮಾಡಿಕೊಂಡು, ಸಿದ್ದರಾಮಯ್ಯನವರು ಬಹಳ ಶೂರರಂತೆ ಮೈಸೂರಿನಲ್ಲಿ ತನಿಖೆ ಎದುರಿಸಿ ಬಂದಿದ್ದಾರೆ. ಸಿದ್ದರಾಮಯ್ಯನವರಾಗಲೀ, ಕಾಂಗ್ರೆಸ್ ಸರಕಾರವಾಗಲಿ ತಮ್ಮ ಸರಕಾರವನ್ನು, ತಮ್ಮ ಸಚಿವರು, ಶಾಸಕರನ್ನು ಯಾವ್ಯಾವ ಸಂದರ್ಭದಲ್ಲಿ ರಕ್ಷಣೆ ಮಾಡಿಕೊಳ್ಳಬೇಕೋ, ಅದಕ್ಕೆ ಬೇಕಾದ ಆಯೋಗ ರಚಿಸುವುದರಲ್ಲಿ ನಿಸ್ಸೀಮರಿದ್ದಾರೆ ಎಂದು ತಿಳಿಸಿದರು.

ಎದುರಾಳಿಗಳನ್ನು ರಾಜಕೀಯವಾಗಿ ಮುಗಿಸಲು ಬೇಕಾದ ತಂತ್ರ ಮಾಡುವ ವಿಚಾರದಲ್ಲೂ, ಅದಕ್ಕಾಗಿ ಆಯೋಗ ರಚನೆ, ಯಾವ ರೀತಿ ವರದಿ ಕೊಡಬೇಕೆಂಬ ವಿಷಯದಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎಂದು ಟೀಕಿಸಿದರು. ಬಿಜೆಪಿ, ಯಡಿಯೂರಪ್ಪನವರಾಗಲೀ, ಈ ರೀತಿ ತನಿಖಾ ವರದಿಗಳಿಂದ ಹೆದರಿ ಓಡಿ ಹೋಗುವ ಪ್ರಶ್ನೆ ಇಲ್ಲ ಎಂದು ಸವಾಲು ಹಾಕಿದರು.

ಹಿಂದೆ ಯಡಿಯೂರಪ್ಪನವರ ವಿರುದ್ಧ ಅನೇಕ ಬಾರಿ ಷಡ್ಯಂತ್ರಗಳು ನಡೆದಿವೆ. ಬಹುಶಃ ಕರ್ನಾಟಕ ರಾಜ್ಯದಲ್ಲಿ ಯಡಿಯೂರಪ್ಪನವರ ವಿರುದ್ಧ ನಡೆದಷ್ಟು ಕುತಂತ್ರ, ಷಡ್ಯಂತ್ರಗಳು ಬೇರೆ ಯಾವ ರಾಜಕಾರಣಿ ವಿರುದ್ಧ ನಡೆದಿರಲು ಸಾಧ್ಯವಿಲ್ಲ; ಇವೆಲ್ಲವನ್ನೂ ಕೂಡ ಚಕ್ರವ್ಯೂಹದಂತೆ ಭೇದಿಸಿ ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಗಳಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ವಿವರಿಸಿದರು.

ಸಿದ್ದರಾಮಯ್ಯನವರು ಹತಾಶರಾಗಿದ್ದಾರೆ. 3 ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಸೋಲಿನ ದವಡೆಯಲ್ಲಿ ಸಿದ್ದರಾಮಯ್ಯರ ಸರಕಾರ ಸಿಲುಕಿದೆ; 3 ಕ್ಷೇತ್ರಗಳಲ್ಲೂ ಸೋಲಾದರೆ ಸಿಎಂ ಬುಡಕ್ಕೆ ಬರುತ್ತದೆ ಎಂಬ ಅರಿವು, ಸತ್ಯ ಗೊತ್ತಾಗಿದೆ. ಅದಕ್ಕಾಗಿ ಕುನ್ಹ ವರದಿಯನ್ನು ಆತುರಾತುರವಾಗಿ ತೆಗೆದುಕೊಳ್ಳುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.

You Might Also Like

ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ಹೈಲೈಟ್ಸ್

ಸಾರ್ವಜನಿಕವಾಗಿ ಮಹಿಳೆಯರು ಹಾಡುವಂತಿಲ್ಲ, ಮಾತನಾಡುವಂತಿಲ್ಲ : ತಾಲಿಬಾನ್ ಹೊಸ ಕಾನೂನು

ನನ್ನ ನಾಯಕತ್ವ ಕೊಹ್ಲಿ ಕ್ರಿಕೆಟ್ ಆಡಿದ್ದಾರೆ ಎಂದ ತೇಜಸ್ವಿ ಯಾದವ್ ಹೇಳಿಕೆ ವೈರಲ್

ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿದ ನಂತರ ನನ್ನನ್ನು ಬಿಜೆಪಿಗೆ ತೆಗೆದುಕೊಳ್ಳುತ್ತಾರೆ : ಯತ್ನಾಳ್

30ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ “ಜನರೊಂದಿಗೆ ಜನತಾದಳ” 2ನೇ ಹಂತದ ಪ್ರವಾಸ : ನಿಖಿಲ್ ಕುಮಾರಸ್ವಾಮಿ

TAGGED:#BY VijayendraSiddaramaiah
Share This Article
Facebook Copy Link Print
Previous Article prajwal revanna prajwal revanna prajwal revanna ಜಾಮೀನು ಕೋರಿ ಸುಪ್ರೀಂ ಮೊರೆಹೋದ ಪ್ರಜ್ವಲ್ ರೇವಣ್ಣ
Next Article Four killed ಗೂಡ್ಸ್ ವಾಹನ – ಕಾರಿನ ನಡುವೆ ಮುಖಾಮುಖಿ ಡಿಕ್ಕಿ, ನಾಲ್ವರು ದುರ್ಮರಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up