1.ಇಸ್ರೋಗೆ ಹೊಸ ಸಾರಥಿ
ಇಸ್ರೋ ಸಂಸ್ಥೆಗೆ ಹೊಸ ಅಧ್ಯಕ್ಷರನ್ನಾಗಿ ಹಿರಿಯ ವಿಜ್ಞಾನಿ ಡಾ.ವಿ.ನಾರಾಯಣನ್ ಅವರನ್ನು ನೇಮಿಸಲಾಗಿದೆ. ಈ ಸಂಬಂಧ ನೆನ್ನೆ ಅಧಿಸೂಚನೆ ಹೊರಬಿದ್ದಿದ್ದು ಸಂಪುಟ ನೇಮಕಾತಿ ಸಮಿತಿಯು ಹೊರಡಿಸಿರುವ ಅಧಿಕೃತ ಆದೇಶದ ಪ್ರಕಾರ ನಾರಾಯಣನ್ ಅವರು ಮುಂದಿನ ಎರಡು ವರ್ಷಗಳ ಅವಧಿಗೆ ಇಸ್ರೋ ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ
2.ಎನ್ಕೌಂಟರ್ಗೆ ಬಲಿಯಾದ ನಕ್ಸಲ್ ನಾಯಕ ವಿಕ್ರಂ ಗೌಡ ಸಹೋದರಿ ಮನವಿ
ಕಳೆದ ನವೆಂಬರ್ ತಿಂಗಳು ನಡೆದಿದ್ದ ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್ನಿಂದ ರಾಜ್ಯದಲ್ಲಿ ನಕ್ಸಲರು ಭಯಭೀತರಾಗಿದ್ದಾರೆ. ಇಂದು ಸುಮಾರು ಆರು ಜನ ನಕ್ಸಲರು ಶರಣಾಗುವ ಸಾಧ್ಯತೆ ಕೂಡ ಇದೆ ಈ ನಡುವೆ ಎನ್ಕೌಂಟರ್ಗೆ ಬಲಿಯಾಗಿದ್ದ ನಕ್ಸಲ್ ನಾಯಕ ವಿಕ್ರಂ ಗೌಡ ಸಹೋದರಿ ಸುಗುಣ, ಅಣ್ಣನ ಜೀವ ವಾಪಸ್ ಕೊಡೋದಕ್ಕೆ ಸಾಧ್ಯವಿಲ್ಲ ಪರಿಹಾರ ಆದರೂ ನೀಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
3.ಗದಗ ಜಿಲ್ಲಾಧಿಕಾರಿಗಳ ಹಠಾತ್ ವರ್ಗಾವಣೆ
ಗದಗ ಜಿಲ್ಲೆಯಲ್ಲಿ ಕೇವಲ ಆರು ತಿಂಗಳ ಹಿಂದಷ್ಟೇ ಅಧಿಕಾರ ವಹಿಸಿಕೊಂಡಿದ್ದ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರನ್ನ ದಿಢೀರ್ ವರ್ಗಾವಣೆ ಮಾಡಿ ಸರ್ಕಾರ ಆದೇಶ ಮಾಡಿದೆ. ಆರು ತಿಂಗಳಲ್ಲಿ ಗದಗ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ವರ್ಗಾವಣೆಗೊಂಡಿದ್ದು, ನೂತನ ಜಿಲ್ಲಾಧಿಕಾರಿಯನ್ನಾಗಿ ಸಿಎನ್ ಶ್ರೀಧರ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. 2024 ರ ಜೂನ್ 6 ರಂದು ಗೋವಿಂದರೆಡ್ಡಿ ಅವರು ಗದಗ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿದ್ದರು. ಆದರೆ ಮಂಗಳವಾರ ಸಂಜೆಯಷ್ಟೇ ಅವರನ್ನು ಬೇರೆ ಯಾವುದೇ ಹುದ್ದೆಗೆ ನೇಮಕಗೊಳಿಸದೇ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿದೆ.
4.ಇಂದು ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ
ರಾಕಿಂಗ್ ಸ್ಟಾರ್ ಯಶ್ ಗೆ ಇಂದು 39 ನೇ ಹುಟ್ಟುಹಬ್ಬದ ಸಂಭ್ರಮ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾದ ಮೊದಲ ಟೀಸರ್ ರಿಲೀಸ್ ಆಗಿದೆ. ನಟ ಯಶ್ ಅವರು ಮಸ್ತ್ ಆಗಿರುವ ಲುಕ್ನಲ್ಲಿ ಕಾಣಿಸಿಕೊಂಡಿದ್ದು ಬರ್ತ್ಡೇ ದಿನ ರಾಕಿ ಭಾಯ್ ಅವರು ಭರ್ಜರಿಯಾಗಿರುವ ಟ್ರೀಟ್ ಕೊಟ್ಟಿದ್ದಾರೆ. ಸಖತ್ ಆಗಿರುವ ಬಿಜಿಎಂ ಜೊತೆ ಯಶ್ ಅವರ ಮಸ್ತ್ ಲುಕ್ ರಿವೀಲ್ ಆಗಿದ್ದು ಟಾಕ್ಸಿಕ್ ಅವತಾರದಲ್ಲಿ ಯಶ್ ಮಿಂಚಿದ್ದಾರೆ.
5.ರಾಜ್ಯದ ಎಂಟು ಕಡೆ ಲೋಕಾಯುಕ್ತ ದಾಳಿ
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನಲೆಯಲ್ಲಿ ಬುಧವಾರ ಬೆಳಂಬೆಳಗ್ಗೆ ಲೋಕಾಯುಕ್ತಅಧಿಕಾರಿಗಳು ದಾಳಿ ನಡೆಸಿದ್ದಾರೆ ಗದಗ ಬೆಟಗೇರಿ ನಗರಸಭೆಯ ಇಂಜಿನಿಯರ್ಗೆ ಸೇರಿದ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ರಾಯಚೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ಗದಗ, ಬಳ್ಳಾರಿ, ಮತ್ತು ಬೆಂಗಳೂರಿನಲ್ಲಿ ದಾಳಿ ನಡೆದಿದೆ.
6.ಭರದಿಂದ ಸಾಗಿತ್ತಿದೆ ಮಹಾಕುಂಭದ ಸಿದ್ಧತೆಗಳು
ಪ್ರತಿ 12 ವರ್ಷಗಳಿಗೊಮ್ಮೆ ಆಚರಿಸಲಾಗುವ ಮಹಾಕುಂಭ ಮೇಳವು ಅತ್ಯಂತ ಪ್ರಮುಖ ಮತ್ತು ಆಧ್ಯಾತ್ಮಿಕ ಹಬ್ಬ. ಫೆಬ್ರವರಿ 13ರಿಂದ ಫೆಬ್ರವರಿ 26ರವರೆಗೆ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾಕುಂಭವು ನಡೆಯಲಿದೆ. ಈ ಮಹಾಕುಂಭದ ಸಿದ್ಧತೆಗಳು ಭರದಿಂದ ಸಾಗಿದ್ದು ಈ ಕುಂಭ ಮೇಳದಲ್ಲಿ ಲಕ್ಷಾಂತರ ಮಂದಿ ಭಕ್ತರು, ಸಾಧುಗಳು, ಸಂತರು, ನಾಗಾಸಾಧುಗಳು , ಅಘೋರಿಗಳು ಸೇರಿದಂತೆ ಲಕ್ಷಾಂತರ ಭಕ್ತರು ದೇಶ ವಿದೇಶಗಳಿಂದ ಬರುತ್ತಾರೆ.
7.ಮದುವೆ ಆಗದ ಜೋಡಿಗಳಿಗೆ ಬಿಗ್ ಶಾಕ್
ಓಯೋ.. ಭಾರತದ ಅತ್ಯಂತ ಜನಪ್ರಿಯ ಹೋಟೆಲ್ ಚೆಕ್ ಇನ್ ಫ್ಲಾಟ್ಫಾರ್ಮ್. ವಿಶೇಷವಾಗಿ ಜೋಡಿ ಹಕ್ಕಿಗಳು ಅತಿ ಹೆಚ್ಚು ಬಳಕೆ ಮಾಡಿಕೊಳ್ಳುತ್ತಿದ್ರು. ಇದರಿಂದಲೇ ಸಾಕಷ್ಟು ಜನಪ್ರಿಯವಾಗಿದ್ದ ಈ ಓಯೋ ಇದೀಗ ಲವರ್ಸ್ಗಳಿಗೆ ಬಿಗ್ ಶಾಕ್ ಕೊಟ್ಟಿದೆ.ಇನ್ಮುಂದೆ ಅವಿವಾಹಿತ ಜೋಡಿಗೆ ಎಂಟ್ರಿ ಇಲ್ಲ ಅಂತ ಓಯೋ ಹೊಸ ನಿಯಮವನ್ನ ಜಾರಿಗೆ ತಂದಿದೆ. ಜನಪ್ರಿಯ ಲಾಡ್ಜ್ ಬುಕ್ಕಿಂಗ್ ಕಂಪನಿ ಓಯೋ ಈ ಶಾಕಿಂಗ್ ನಿರ್ಧಾರ ಭಾರೀ ಚರ್ಚೆಯಾಗುತ್ತಿದೆ. ಇನ್ಮುಂದೆ ಅವಿವಾಹಿತ ಜೋಡಿಗೆ ಹೋಟೆಲ್ಗಳಿಗೆ ಪ್ರವೇಶ ಇಲ್ಲ. ಮದುವೆಯಾಗದ ಜೋಡಿಗೆ ನಿರ್ಬಂಧ ವಿಧಿಸಲಾಗಿದೆ
8.ಹಸು ಸಗಣಿಗೂ ಬಂತು ಡಿಮ್ಯಾಂಡ್
ನಮ್ಮ ದೇಶದಲ್ಲಿ ಪುರಾತನ ಕಾಲದಿಂದಲೂ ಹಸುವಿನಿಂದ ಸಿಗುವ ಸಗಣಿ ಹಾಗೂ ಗೋ ಮೂತ್ರವನ್ನು ಪವಿತ್ರ ಎಂದು ಪರಿಗಣಿಸಿ ಬೇರೆ ಬೇರೆ ರೀತಿಯಲ್ಲಿ ಅವುಗಳ ಉಪಯೋಗ ಮಾಡುತ್ತಾ ಬಂದಿದ್ದೇವೆ. ಅದೇ ರೀತಿ ಇತ್ತೀಚಿನ ದಿನಗಳಲ್ಲಿ ಭಾರತದ ಹಸುವಿನ ಸಗಣಿಗೆ ಬೇಡಿಕೆ ಹೆಚ್ಚಾಗಿದ್ದು ನಮ್ಮ ದೇಶದಿಂದ ವಿದೇಶಗಳಿಗೆ ಸಗಣಿ ಯನ್ನು ರಫ್ತು ಮಾಡಲಾಗುತ್ತಿದೆ. ಕುವೈತ್ ಮತ್ತು ಅರಬ್ ದೇಶಗಳಲ್ಲಿ ಗೋಮಾತೆಯ ಸಗಣಿಗೆ ಇದೀಗ ಹೆಚ್ಚು ಡಿಮ್ಯಾಂಡ್ ಕ್ರಿಯೆಟ್ ಆಗಿದೆ
9.ಚಿತ್ರರಂಗಕ್ಕೆ ಪವನ್ ಕಲ್ಯಾಣ್ ಮಗ ಎಂಟ್ರಿ
ರಾಜಕಾರಣಿಯಾದ ಬಳಿಕ ಪವನ್ ಕಲ್ಯಾಣ್ ಸಿನಿಮಾಗಳಿಂದ ದೂರವೇ ಆಗಿಬಿಟ್ಟಿದ್ದಾರೆ. ಆದರೆ ತಮ್ಮ ಬದಲಿಗೆ ತಮ್ಮ ಪುತ್ರನನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಪವನ್ ಕಲ್ಯಾಣ್ ಪುತ್ರ ಈಗಾಗಲೇ ಒಂದು ಸಿನಿಮಾದಲ್ಲಿ ನಟಿಸಿದ್ದು, ಆ ಸಿನಿಮಾ ಕೆಲವೇ ತಿಂಗಳಲ್ಲಿ ಬಿಡುಗಡೆ ಆಗಲಿದೆ.
10.ಮುಂದುವರೆದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಮಾಸಿಕ ಗೌರವಧನ 15 ಸಾವಿರಕ್ಕೆ ಏರಿಕೆ ಮಾಡಬೇಕು ಎಂದು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಬುಧವಾರವೂ ಮುಂದುವರಿದಿದೆ.ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ವಾಸ್ತವ್ಯ ಹೂಡಿರುವ ಆಶಾ ಕಾರ್ಯಕರ್ತೆಯರು ಕೊರೆಯುವ ಚಳಿಯ ಮಧ್ಯೆಯೂ ಹೋರಾಟ ಮುಂದುವರಿಸಿದ್ದಾರೆ.

