1.ಡ್ರಗ್ಸ್ ಕೇಸ್ನಲ್ಲಿ ರಾಗಿಣಿ ನಿರಪರಾಧಿ :
ರಾಗಿಣಿ ದ್ವಿವೇದಿ ಅವರ ವಿರುದ್ಧ ದಾಖಲಾಗಿದ್ದ ಡ್ರಗ್ಸ್ ಪ್ರಕರಣದಲ್ಲಿ ಹೈಕೋರ್ಟ್ ನಿರಪರಾಧಿ ಎಂದು ತೀರ್ಪು ನೀಡಿದೆ. ಸಾಕ್ಷ್ಯಾಧಾರ ಕೊರತೆಯಿಂದ ಪ್ರಕರಣ ರದ್ದಾಗಿದೆ. ನಾಲ್ಕು ವರ್ಷಗಳ ಕಾನೂನು ಹೋರಾಟದ ಬಳಿಕ ಈ ತೀರ್ಪು ರಾಗಿಣಿಗೆ ದೊಡ್ಡ ನೆಮ್ಮದಿ ನೀಡಿದೆ.
2.ಲೋಕಾಯುಕ್ತ ದಾಳಿ ಬಳಿಕ ಇಬ್ಬರು ಬಿಬಿಎಂಪಿ ಅಧಿಕಾರಿಗಳ ಅಮಾನತು :
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ನಿರ್ದೇಶನದ ಮೇರೆಗೆ ಪಾಲಿಕೆ ಆಡಳಿತ ಇಲಾಖೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಜನವರಿ 10ರಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಬಿಬಿಎಂಪಿಯ 54 ಕಚೇರಿಗಳ ಮೇಲೆ ದಾಳಿ ನಡೆಸಲಾಗಿತ್ತು. ನಗರದ ಸೌತ್ ಎಂಡ್ ಸರ್ಕಲ್ನಲ್ಲಿರುವ ಸಹಾಯಕ ಕಂದಾಯ ಅಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದಾಗ ಅಮ್ಮನ ಬದಲಿಗೆ ಅವರ ಮಗ ನವೀನ್ ಕಚೇರಿ ಲಾಗಿನ್ ಐಡಿ ಪಡೆದು ಕೆಲಸ ಮಾಡುತ್ತಿರುವುದು ಪತ್ತೆಯಾಗಿತ್ತು.
3.ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಹಾಗೂ ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರು ಪ್ರಯಾಣಿಸುತ್ತಿದ್ದ ಕಾರು ಅಂಬಡಗಟ್ಟಿ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಲಕ್ಷ್ಮಿ ಹೆಬ್ಬಾಳ್ಳರ್ ಹಾಗೂ, ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆಯಲ್ಲಿ ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ
4.ಸಿಮೆಂಟ್ ತುಂಬಿದ್ದ ಟ್ರಕ್ ಪಲ್ಟಿ , ಚಾಲಕ ಸ್ಥಳದಲ್ಲೇ ಸಾವು
ಬಾಗಲಕೊಟ ಜಿಲ್ಲೆಯ ಮುದೋಳ ತಾಲೂಕಿನ ಹಲಕಿ ಗ್ರಾಮದ ಜೆಕೆ ಸಿಮೆಂಟ್ ಕಾರ್ಖಾನೆಯಿಂದ ಪುಣೆ ಶಹರಕ್ಕೆ ಹೊರಟ್ಟಿದ್ದ ಬೃಹತ ಗಾತ್ರದ ಸಿಮೇಂಟ ತುಂಬಿದ ಟ್ರಕ್ ಪಲ್ಟಿಯಾಗಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಾಲಕ ಕುಡಿದ ಅಮಲಿನಲ್ಲಿ ಟ್ರಕ್ ಚಲಾಯಿಸುತ್ತಿದ್ದ ಎಂದು ತಿಳಿದು ಬಂದಿದೆ. ಹಾಗೇನೇ ಟ್ರಕ್ ನಿಯಂತ್ರಣಕ್ಕೆ ಬಾರದೇ ಸುಮಾರು ಹತ್ತಾರು ಬೈಕಗಳಿಗೆ ಗುದ್ದಿ ಜಕಂ ಮಾಡಿದ್ದಾನೆ ಎಂದು ಸಾರ್ವಜನಿಕರು ದೂರಿದ್ದಾರೆ . ಇನ್ನು ಈ ಘಟನೆ ಕುಡಚಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಪ್ರಕರಣ ದಾಖಲಾಗಿದೆ
5.ಬನಶಂಕರಿ ಜಾತ್ರೆಯಲ್ಲಿ ಮಹಿಳೆಯರ ತಾಳಿ ಚೈನ್ ಹಾಗೂ ಮೊಬೈಲ್ ಕಳ್ಳತನ
ಬಾಗಲಕೋಟ ಜಿಲ್ಲೆ ಬಾದಾಮಿ ತಾಲೂಕಿನಲ್ಲಿ ಶ್ರೀ ಬನಶಂಕರಿ ಜಾತ್ರೆ ಆದೂರಿಯಾಗಿ ನೆರವೇರಿತು, ಜಾತ್ರೆಗೆ ಬಂದ ಭಕ್ತರ ಬಂಗಾರದ ತಾಳಿ ಚೈನ್ ಹಾಗೂ ಮೊಬೈಲ್ ಕಳೆದುಕೊಂಡ ಭಕ್ತರು ಜಾತ್ರಾ ಪೊಲೀಸ್ ಸ್ಟೇಷನನಲ್ಲಿ ಕಂಪ್ಲೇಟ್ ಕೊಟ್ಟಿದ್ದಾರೆ. ಆದ್ರೆ ಪೊಲೀಸರಿಂದ ಯಾವುದೇ ರಿತುಯಾ ನ್ಯಾಯ ಸಿಗದ ಕಾರಣ ಭಕ್ತರು ಪೋಲೀಸರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.
6.ಹಾಲ ಶಿರಗೂರ ಗ್ರಾಮದಲ್ಲಿ ಸುಗ್ಗಿ ಹಬ್ಬ
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕೀನ. ಹಾಲ ಶಿರಗೂರ ಗ್ರಾಮದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಸುಗ್ಗಿ ಹಬ್ಬವನ್ನು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಿಬ್ಬಿನ್ ಕತ್ತರಿಸುವ ಮೂಲಕ ಆಚರಿಸಲಯಿತು. ಪ್ರೌಡಶಾಲೆಯ SDMC ಅದ್ಯಕ್ಷ ಶಂಕರ ದಳವಾಯಿ ಮತ್ತು ಸರಕಾರಿ ಪ್ರಾಥಮಿಕ ಶಾಲೆ SDMC ಅದ್ಯಕ್ಷ ಸಿದ್ದೂ ದಳವಾಯಿ ಶಾಲೆಯ ಸಿಬ್ಬಂದಿ ವರ್ಗದವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಮಕ್ಕಳು ರೈತನ ವೇಷ ಭೂಷಣ ತೋಟ್ಟು ಮತ್ತು ವಿವಿಧ ರೀತಿಯ ಶೈಲಿಯಲ್ಲಿ ವೇಷ ಭೂಷಣ್ ತೊಟ್ಟು ಕಾರ್ಯಕ್ರಮಕ್ಕೆ ಕಲೆ ತಂದರು . ಈ ಸಮಯದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು, SDMC ಸದಸ್ಯರು ಗ್ರಾಮದ ಪ್ರಮುಖರು, ಪಾಲಕರು ಶಾಲೆ ಎಲ್ಲ ಶಿಕ್ಷಕರೂ, ಶಿಕ್ಷಕಿಯರು ,ಅಡುಗೆ ಸಿಬ್ಬಂದಿಯವರು, ಗ್ರಾಮಸ್ಥರು ಮುದ್ದು ಮಕ್ಕಳು ಉಪಸ್ಥಿತರಿದ್ದರು
7.ಓರ್ವ ವ್ಯಕ್ತಿಗಾಗಿ ಇಬ್ಬರು ಮಹಿಳೆಯರ ಕಿತ್ತಾಟ
ಓರ್ವ ವ್ಯಕ್ತಿಗಾಗಿ ಇಬ್ಬರು ಮಹಿಳೆಯರು ಪರಸ್ಪರ ಕಿತ್ತಾಡಿಕೊಂಡು ರಂಪಾಟ ಮಾಡಿಕೊಂಡಿರುವ ಅಪರೂಪದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಂಜನಾನಗರದಲ್ಲಿ ನಡೆದಿದೆ. ಈಗಾಗಲೇ ಪತ್ನಿಯನ್ನು ಕಳೆದುಕೊಂಡಿರುವ ವ್ಯಕ್ತಿಯನ್ನು ಮದುವೆಯಾಗಲು ಇಬ್ಬರು ಮಹಿಳೆಯರ ನಡುವೆ ಪೈಪೋಟಿ ನಡೆದಿದ್ದು, ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಈ ವೇಳೆ ಮಹಿಳೆಯೋರ್ವಳು ಮತ್ತೊಬ್ಬ ಮಹಿಳೆಗೆ ಚಾಕುವಿನಿಂದ ಇರಿದಿದ್ದಾಳೆ.
8.ಕುಡಿದು ಮದುವೆ ಮಂಟಪದಲ್ಲಿ ವರನ ರಂಪಾಟ
ಕಂಠಪೂರ್ತಿ ಕುಡಿದು ಆರತಿ ತಟ್ಟೆಯನ್ನೇ ಎಸೆದು ಮದುವೆ ಮಂಟಪದಲ್ಲಿ ವರ ರಂಪಾಟ ಮಾಡಿದನೆಂದು ವಧುವಿನ ತಾಯಿ ಮದುವೆಯನ್ನೇ ಕ್ಯಾನ್ಸಲ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆಡಿದ್ದು ತಾಯಿಯ ಈ ದಿಟ್ಟ ನಿರ್ಧಾರಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
9.ಬೆಂಗಳೂರಿನಲ್ಲಿ ಪದೇ ಪದೇ ಪ್ರತ್ಯಕ್ಷವಾಗುತ್ತಿದೆ ಚಿರತೆ
ಮೈಸೂರು ಇನ್ಫೋಸಿಸ್ ಆವರಣದೊಳಗೆ ಹೊಕ್ಕಿರುವ ಚಿರತೆಯ ಚಲನವಲನದ ಮಾಹಿತಿಗೆ ಇನ್ನೂ ಅರಣ್ಯ ಇಲಾಖೆಯ ಅಧಿಕಾರಿಗಳು, ಪ್ರಯತ್ನವನ್ನು ಮಾಡುತ್ತಲೇ ಇದ್ದಾರೆ. ಈ ಮಧ್ಯೆ, ಬೆಂಗಳೂರಿನ ಬನಶಂಕರಿ ಭಾಗದಲ್ಲಿ ಚಿರತೆ ಮತ್ತು ಅದರ ಮರಿಗಳ ಓಡಾಟ ಜನರನ್ನು ಬೆಚ್ಚಿಬೀಳಿಸಿದೆ. ಬನಶಂಕರಿ ಆರನೇ ಹಂತದ ಮೊದಲನೇ ಬ್ಲಾಕ್ ನಲ್ಲಿ, ತುರಹಳ್ಳಿ ಫಾರೆಸ್ಟ್ ಬಳಿ ತಾಯಿ ಮತ್ತು ಮರಿ ಚಿರತೆ ಪ್ರತ್ಯಕ್ಷವಾಗಿದೆ.
10.ವಿಜಯಪುರ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು
ನಾಲ್ವರು ಮಕ್ಕಳೊಂದಿಗೆ ಕಾಲುವೆಗೆ ಬಿದ್ದು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಇದೀಗ ತಿರುವು ಸಿಕ್ಕಿದೆ. ಈ ಪ್ರಕರಣದ ಹಿಂದೆ ಮಹಿಳೆಯ ಪತಿಯ ಕೈವಾಡ ಇರುವುದು ಬೆಳಕಿಗೆ ಬಂದಿದೆ. ಮಹಿಳೆಯೇ ಖುದ್ದಾಗಿ ಮಾಹಿತಿ ನೀಡಿ, ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟಿದ್ದಾರೆ. ತನ್ನ ತವರು ಮನೆಯಲ್ಲಿ ಸಹೋದರರ ಜಗಳದಿಂದ ಬೇಸರಗೊಂಡು ಪತ್ನಿ ಭಾಗ್ಯಶ್ರೀ ಭಜಂತ್ರಿ ಮಕ್ಕಳ ಸಮೇತ ಆತ್ಮಹತ್ಯೆಗೆ ಯತ್ನಿದ್ದರು ಎಂದು ಆಕೆಯ ಪತಿ ಅಲವತ್ತುಕೊಂಡಿದ್ದರು. ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ಭಾಗ್ಯಶ್ರೀ ಭಜಂತ್ರಿ ಇದೀಗ ನಿಜ ಮಾಹಿತಿ ಬಹಿರಂಗಪಡಿಸಿದ್ದಾರೆ. ತನ್ನ ಪತಿಯೇ ವಿಷ ಹಾಕಿ ತಮ್ಮನ್ನು ಕಾಲುವೆಗೆ ಎಸೆದನೆಂದು ಆಕೆ ತನ್ನ ಸಂಬಂಧಿಕರಿಗೆ ತಿಳಿಸಿದ್ದಾಳೆ.
- ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
- ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
- ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
- ಚಂದ್ರಯಾನ-4 ಲ್ಯಾಂಡಿಂಗ್ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
- ಬಾಲಿವುಡ್ಗೆ ಅಲ್ಲು ಅರ್ಜುನ್ ಎಂಟ್ರಿ : ಸಂಜಯ್ ಲೀಲಾ ಬನ್ಸಾಲಿ ಜೊತೆಗಿನ ಸಿನಿಮಾ ಸದ್ಯಕ್ಕೆ ಮುಂದೂಡಿಕೆ

