1.ದೊಡ್ಡಪೇಟೆಯಲ್ಲಿ ಅಕ್ರಮವಾಗಿ ಕಟ್ಟಿದ್ದ ಅಂಗಡಿಗಳು ತೆರವು
ಕುಣಿಗಲ್ ಪಟ್ಟಣದ ದೊಡ್ಡಪೇಟೆ ಮುಂಭಾಗದ ಹಳೆಯ ರಾಷ್ಟ್ರೀಯ ಹೆದ್ದಾರಿ 48ಕ್ಕೆ ಹೊಂದಿಕೊಂಡಂತೆ, ಇರುವ ಸಂತೆ ಮೈದಾನಕ್ಕೆ ಹೋಗುವ ರಸ್ತೆಗೆ ಅಂಗಡಿ ಮಳಿಗೆ ವರ್ತಕರು ರಸ್ತೆ ಮತ್ತು ಚರಂಡಿ ಮೇಲೆ ಸಾಮಗ್ರಿಗಳನ್ನು ಇಟ್ಟಿದ್ದರು, ಇದರಿಂದ ಪ್ರತಿನಿತ್ಯ ಓಡಾಡುವ ವಾಹನ ಸಂಚಾರಕ್ಕೆ ತುಂಬಾ ತೊಂದರೆಯಾಗಿದ್ದ ಹಿನ್ನೆಲೆಯಲ್ಲಿ ಪುರಸಭಾ ಮುಖ್ಯಾಧಿಕಾರಿ ಮಂಜುಳ ಹಾಗೂ ಪರಿಸರ ಇಂಜಿನಿಯರ್ ಚಂದ್ರಶೇಖರ್, ತಮ್ಮ ಪುರಸಭೆ ಸಿಬ್ಬಂದಿಗಳೊಂದಿಗೆ ಅಕ್ರಮವಾಗಿ ರಸ್ತೆ ಮೇಲೆ ಇಟ್ಟಿದ್ದ ವ್ಯಾಪಾರದ ವಸ್ತುಗಳನ್ನು ತೆರವುಗೊಳಿಸಲು ಮುಂದಾಗಿದ್ದರು
2.ಶ್ರೀ ಭೂತಪ್ಪ ಸ್ವಾಮಿಯವರ ಜಾತ್ರಾ ಮಹೋತ್ಸವ
ಮಧುಗಿರಿಯ ಬಡವನಹಳ್ಳಿ ಗ್ರಾಮದಲ್ಲಿ ಶ್ರೀ ಭೂತಪ್ಪ ಸ್ವಾಮಿಯವರ ಪ್ರತಿಷ್ಠಾಪನೆ ದೃಷ್ಟಿ ಪೂಜೆ ಮಹೋತ್ಸವ ಜರುಗಿತು . ಈ ಸಂದರ್ಭದಲ್ಲಿ ಗಂಗೆಪೂಜೆ ಗಣಪತಿ ಪೂಜೆ ನವಗ್ರಹ ಆರಾಧನೆ ಪಂಚಾಬ್ರಹ್ಮ ಪೂಜೆ ಪ್ರಧಾನ ಕಲಶ ಆರಾಧನೆ ಹಾಗೂ ವಿಶೇಷವಾಗಿ ಭಕ್ತದಿಗಳಿಂದ ಸುಮಾರು ನಾಲ್ಕು ಸಾವಿರ ಭಕ್ತದಿಗಳಿಗೆ ಬಾಡೂಟದ ಅನ್ನಸಂತರ್ಪಣೆ ಏರ್ಪಡಿಸಲಾಗಿತು . ಗುಡಿಕಟ್ಟಿನ ಅಣ್ಣತಮ್ಮಂದಿರು ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ದೇವಸ್ಥಾನದ ಸಕಲ ಕೈವಾಡದವರು ಸಹಕಾರದೊಂದಿಗೆ ಯಶಸ್ವಿಯಾಗಿ ನೆರವೇರಿತು.
3.ಗೋವುಗಳ ಮೇಲೆ ವಿಕೃತಿ ಮೆರೆದವರ ವಿರುದ್ಧ ತುಮಕೂರಿನಲ್ಲಿ ಪ್ರತಿಭಟನೆ
ರಾಜ್ಯದಲ್ಲಿ ಮಾರಕಾಸ್ತ್ರಗಳಿಂದ ಗೋವುಗಳ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದಿರುವ ದುರುಳರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ದುಷ್ಕೃತ್ಯಗಳು ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ತುಮಕೂರು ಗೋ ಸಂರಕ್ಷಣಾ ಸಂವರ್ಧನ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಗಿದೆ.
4.ರಸ್ತೆ ಅಗಲಿಕರಣ ಭೂಮಿ ಪೂಜೆ ನೆರವೇರಿಸಿದ ಶಾಸಕರು
ವಾಹನ ಸಂಚಾರ ಸುಗಮವಾಗೋದಕ್ಕೆ ಗೋಕಾಕ ನಗರದ ವಾಲ್ಮೀಕಿ ವೃತ್ತದಿಂದ ಜತ್ತ ಜಾಂಬೊಟಿ ಹೆದ್ದಾರಿ ರಸ್ತೆಯನ್ನು ಅಂದಾಜು 980.00 ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು ರಸ್ತೆ ಅಗಲಿಕರಣ ಮತ್ತು ಸುದಾರಣೆ ಮಾಡುವ ಕಾಮಗಾರಿಗೆ ಶಾಸಕ ರಮೇಶ ಜಾರಕಿಹೋಳಿ ಭೂಮಿ ಪೂಜೆ ನೇರವೆರಿಸಿದರು. ಈ ಸಂದರ್ಭದಲ್ಲಿ ಗೋಕಾಕ ಡಾ: ಮೊಹನ ಬಸ್ಮೇ, ಸಾಗರ ಕಟ್ಟಿಮನಿ,ಶಿವಪ್ಪ ರಾಮದುರ್ಗ, ಅಮೀತ ಜಕಾತಿ,ಈಶ್ವರ ದಯನ್ನವರ,ಸೇರಿದಂತೆ ಇನ್ನೂಳಿದ ಸಿಬ್ಬಂದಿಗಳು ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು
5.ಬ್ಯಾಂಕ್ ದರೋಡೆಕೋರರ ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗಿದೆ
ಮಂಗಳೂರು ಕೋಟೆಕಾರ್ ಬ್ಯಾಂಕ್ ದರೋಡೆ ಮತ್ತು ಬೀದರ್ನಲ್ಲಿ ಎಟಿಎಂಗೆ ಕ್ಯಾಶ್ ತುಂಬುವ ವ್ಯಾನ್ ದರೋಡೆ ಮತ್ತು ಇಬ್ಬರು ಗಾರ್ಡ್ಗಳ ಕೊಲೆಗೆ ಸಂಬಂಧಿಸಿದಂತೆ ಖಚಿತವಾದ ಮಾಹಿತಿ ಲಭ್ಯವಾಗಿದೆ, ಅದನ್ನು ಮಾಧ್ಯಮಗಳ ಜೊತೆ ಶೇರ್ ಮಾಡಲಾಗಲ್ಲ, ಆದಷ್ಟು ಬೇಗ ಅಪರಾಧಿಗಳನ್ನು ವಶಕ್ಕೆ ಪಡೆಯುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ
6.ಕಾಂತಾರ 2’ ಚಿತ್ರತಂಡದ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ
ರಿಷಬ್ ಶೆಟ್ಟಿ ಅವರ ‘ಕಾಂತಾರ 2’ ಚಿತ್ರೀಕರಣದ ಸಂದರ್ಭದಲ್ಲಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಚ್ಚಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಪರಿಸರ ಹಾನಿ ಹಾಗೂ ವನ್ಯಜೀವಿಗಳಿಗೆ ಉಂಟಾಗಬಹುದಾದ ಅಪಾಯದ ಬಗ್ಗೆ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದು, ಇದರಿಂದಾಗಿ ಚಿತ್ರತಂಡದ ವಿರುದ್ಧ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ…
7.‘ನಾನು ಉಕ್ರೇನ್ ಯುದ್ಧವನ್ನು ಕೊನೆಗೊಳಿಸುತ್ತೇನೆ : ಟ್ರಂಪ್ಡೊ
ನಾಲ್ಡ್ ಟ್ರಂಪ್ ಅವರು ಅಮೆರಿಕ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಮಹತ್ವದ ಘೋಷಣೆ ಮಾಡಿದ್ದಾರೆ. ‘ನಾನು ಉಕ್ರೇನ್ ಯುದ್ಧವನ್ನು ಕೊನೆಗೊಳಿಸುತ್ತೇನೆ. ನಾನು ಮಧ್ಯಪ್ರಾಚ್ಯದಲ್ಲಿ ಅವ್ಯವಸ್ಥೆಯನ್ನು ನಿಲ್ಲಿಸುತ್ತೇನೆ ಮತ್ತು ಮೂರನೇ ಮಹಾಯುದ್ಧ ನಡೆಯದಂತೆ ತಡೆಯುತ್ತೇನೆ’ ಎಂದು ಹೇಳಿದ್ದಾರೆ. ಗಡಿಗಳ ಮೇಲೆ ನಾವು ಶೀಘ್ರವಾಗಿ ನಿಯಂತ್ರಣವನ್ನು ಮರು ಸ್ಥಾಪಿಸುತ್ತೇವೆ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ…
8.ಗರ್ಭಿಣಿ ಹಸುವಿನ ತಲೆ, ಕಾಲು ಕಡಿದ ಕಿಡಿಗೇಡಿಗಳು
ಗರ್ಭಿಣಿ ಹಸುವಿನ ತಲೆ, ಕಾಲು ಕಡಿದು, ಹೊಟ್ಟೆ ಸೀಳಿ ಕರುವನ್ನೂ ಹತ್ಯೆ ಮಾಡಿದ ಘೋರ ಘಟನೆ ಸಾಲ್ನಡ ಗ್ರಾಪಂಚಾಯಿತಿ ವ್ಯಾಪ್ತಿಯ ಕೊಂಡಾಕುಳಿಯಲ್ಲಿ ನಡೆದಿದೆ. ಕೊಂಡಾಕುಳಿಯ ಕೃಷ್ಣ ಆಚಾರಿ ಎಂಬುವವರು ಶನಿವಾರ ಹಸುವನ್ನು ಮೇಯಲು ಬಿಟ್ಟಿದ್ದರು. ರಾತ್ರಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಹುಡುಕಾಡಿದರೂ ಸಿಕ್ಕಿರಲಿಲ್ಲ. ಭಾನುವಾರ ಬೆಳಗ್ಗೆ ಹಸು ಹತ್ಯೆ ಮಾಡಿರುವ ಕುರುಹು ಪತ್ತೆಯಾಗಿದೆ. ಇದನ್ನು ನೋಡಿದ ಮಾಲೀಕರು ಹಾಗೂ ಊರ ಜನ ದುಃಖಿತರಾಗಿದ್ದಾರೆ. ಹಸು ಮೇಲೆ ಕ್ರೌರ್ಯ ಮೆರೆದಿರುವ ರಕ್ಕಸರನ್ನು ಶೀಘ್ರ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕೃಷ್ಣ ಆಚಾರಿ ಹೊನ್ನಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ…
9.ಸಾಧು ಕೋಕಿಲಗೆ ಗೌರವ ಡಾಕ್ಟರೇಟ್
ನಟ ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರಿಗೆ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ. ಈ ಕುರಿತು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿರುವ ಸಾಧು ಕೋಕಿಲ ಅವರು, ‘ಸಂಗೀತ ಕ್ಷೇತ್ರದಲ್ಲಿನ ನನ್ನ ಸಾಧನೆ,ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಿ ಪುರಸ್ಕರಿಸಿದ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕುಲಪತಿಗಳಿಗೆ ನನ್ನ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ….
10.ಮದ್ಯಪ್ರಿಯರ ಜೇಬು ಸುಡಲಿದೆ ಹುಷಾರ್
ಇಂದಿನಿಂದ ರಾಜ್ಯದಲ್ಲಿ ಮದ್ಯಪ್ರಿಯರ ಜೇಬು ಸುಡಲಿದೆ. ಸರ್ಕಾರ ಮತ್ತೊಮ್ಮೆ ಬಿಯರ್ ಬೆಲೆ ಪರಿಷ್ಕರಿಸಿದ್ದು, ಹೊಸ ಬೆಲೆ ಇಂದಿನಿಂದ ಜಾರಿಗೆ ಬರಲಿದೆ. ಅಬಕಾರಿ ಇಲಾಖೆಯಿಂದ ನಿರೀಕ್ಷಿತ ಮಟ್ಟದ ಆದಾಯ ಬರದೆ ಇರುವುದರಿಂದ ಸದ್ಯಕ್ಕೆ ಬಿಯರ್ ಬೆಲೆಯನ್ನು ಹೆಚ್ಚಿಸಲಾಗಿದೆ.ಬಿಯರ್ ಬೆಲೆ ಹೆಚ್ಚಳ ಮಾಡುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ.ಕಂಪನಿಗಳು ಹಾಗೂ ಮದ್ಯಪ್ರಿಯರು ವಿರೋಧ ವ್ಯಕ್ತಪಡಿಸಿದ್ದಾರೆ..

