ತುಮಕೂರು : ಏನು ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಮಹಿಳಾ ನೌಕರರಿಗೆ ಕಾಯಂ ನೌಕರರಂತೆಯೇ ಹೆರಿಗೆ ರಜೆ, ಹೆರಿಗೆ ಬತ್ತಿಯೇ ಸೌಲಭ್ಯ ಕಲ್ಪಿಸುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ಕಾರ್ಯರೂಪಕ್ಕೆ ತರಲು ಪ್ರಯತ್ನಿಸುತ್ತೇನೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭರವಸೆ ನೀಡಿದರು,
ನಗರದ ಜಿಲ್ಲಾ ಬಾಲ ಭವನದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಮಟ್ಟದ ವಾರ್ಷಿಕ ಮಹೋತ್ಸವ ಜಿಲ್ಲಾ ಸಮಿತಿಯ ಅಭಿನಂದನ ಸಮಾರಂಭ ಹಾಗೂ ರಾಜ್ಯಮಟ್ಟದ ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರ ಒಗ್ಗಟ್ಟು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು,,
ಸರ್ಕಾರದ ಕಾಯಂ ಮಹಿಳಾ ನೌಕರರಿಗೆ ನೀಡುವಂತೆಯೇ ಹೊರಗುತ್ತಿಗೆ ಮಹಿಳಾ ನೌಕರರಿಗೂ ಹೆರಿಗೆಬತ್ತಿಯೇ ಹೆರಿಗೆ ರಜೆ ಸೌಲಭ್ಯ ಕಲ್ಪಿಸಬೇಕು, ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುವ ಬಹುಪಾಲು ನೌಕರರು ಆರ್ಥಿಕವಾಗಿ ಹಿಂದುಳಿದಿರುವುದರಿಂದ ನೌಕರಿ ಅವರಿಗೆ ಅನಿವಾರ್ಯವಾಗುತ್ತದೆ,
ಹೆರಿಗೆ ಸಮಯದಲ್ಲಿ ಹೊರಗುತ್ತಿಗೆ ಮಹಿಳಾ ನೌಕರರು ಆರ್ಥಿಕ ಸಂಕಷ್ಟಕ್ಕೆ ಸಿಲುಕದಂತೆ ಹಾಗೂ ಆರೋಗ್ಯದ ಹಿತ ದೃಷ್ಟಿಯಿಂದ ಭಕ್ತಿಯೆ ರಜಾ ಸೌಲಭ್ಯವನ್ನು ನೀಡುವಂತೆ ಈಗಾಗಲೇ ಆರೋಗ್ಯ ಸಚಿವರ ಗಮನಕ್ಕೆ ತಂದಿದ್ದೇನೆ ಮುಖ್ಯಮಂತ್ರಿಗಳಿಗೂ ಮನವಿ ಮಾಡಲಾಗುವುದೆಂದು ಮಾತನಾಡಿದರು,,
ಗುತ್ತಿಗೆ ನೌಕರರು ತಮಗೆ ಸಿಗಬೇಕಾದ ಸೌಲಭ್ಯಗಳನ್ನು ಪಡೆಯಲು ಕಾನೂನು ಮೂಲಕ ಹೋರಾಡಿದಾಗ ಮಾತ್ರ ಗೆಲವು ದೊರೆಯುತ್ತದೆ ಈ ನಿಟ್ಟಿನಲ್ಲಿ ಹೊರಗುತ್ತಿಗೆ ನೌಕರರು ಸಂಘಟನೆ ಮೂಲಕ ಹೋರಾಡಬೇಕೆಂದು ಸಲಹೆ ನೀಡಿದರು, ಅರ್ಹತೆ ಇರುವುದನ್ನು ಪಡೆಯಲು ಒಗ್ಗಟ್ಟಿನ ಧ್ವನಿ ಎತ್ತಲೇಬೇಕು, ಎಲ್ಲಿಯವರೆಗೂ ಧ್ವನಿ ಎತ್ತುವುದಿಲ್ಲವೋ ಅಲ್ಲಿವರೆಗೂ ಸೌಲಭ್ಯಗಳು ನಮ್ಮ ಕೈ ಸೇರುವುದಿಲ್ಲ, ಹೊರಗುತ್ತಿಗೆ ನೌಕರರಿಗೆ ಸಕಾಲದಲ್ಲಿ ಕನಿಷ್ಠ ವೇತನ ಪಾವತಿ ಮಾಡುವುದು ಸಂಬಂಧಿಸಿದ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ , ಖಾಯಂ ನೌಕರರಿಗಿಂತ ಹೆಚ್ಚು ಕೆಲಸ ಮಾಡುವ ಹೊರಗುತ್ತಿಗೆ ನೌಕರರಿಗೆ ವೇತನ ಪಾವತಿಯಲ್ಲಿ ತಾರತಮ್ಯ ಕಂಡು ಬಂದರೆ ಆಯೋಗ ಸುಮ್ಮನೆ ಕೈಕಟ್ಟಿ ಕೂರುವುದಿಲ್ಲ ಎಂದು ತಿಳಿಸಿದರು,,
ನೇಮಕಾತಿ ಏಜೆನ್ಸಿಗಳು ಗುತ್ತಿಗೆ ನೌಕರರಿಗೆ ಕಡ್ಡಾಯವಾಗಿ ಮಾಹೆಯಾನ ಕನಿಷ್ಠ 14,000 ವೇತನವನ್ನು ಪಾವತಿಸಬೇಕು, ಇಲ್ಲದಿದ್ದರೆ ಸಂಬಂಧಿಸಿದ ಏಜೆನ್ಸಿಗಳನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲಾಗುವುದು ,ಎಂದು ತಿಳಿಸಿದರಲ್ಲದೆ ಬರುವ ದಿನಗಳಲ್ಲಿ ಗುತ್ತಿಗೆ ನೌಕರರಿಗೆ ನೇರ ವೇತನ ಪಾವತಿ ಮಾಡಲು ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು,,
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರ ಸಂಘದ ರಾಜ್ಯಾಧ್ಯಕ್ಷ ಅಕ್ಷಯ್ ಡಿ ಎಂ ಗೌಡ, ತುಮಕೂರು ಜಿಲ್ಲಾ ಘಟಕ ಮತ್ತು ರಾಜ್ಯ ಸಮಿತಿ ನಿರ್ದೇಶಕ ಬಿ ,ಸಿದ್ದಪ್ಪ ರಾಜ್ಯ ಸಮಿತಿ ಪದಾಧಿಕಾರಿಗಳು ಕಾರ್ತಿಕ್, ಕಿರಣ್ ,ರಾಜ್ಯ ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು,,,
ವರದಿ : ನರಸಿಂಹರಾಜು

