ತುಮಕೂರು : – ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬದುಕು ಸಂದೇಶ ಮತ್ತು ಚಿಂತನೆಗಳನ್ನು ಪ್ರಚೂರಿಸಿ ಪಡಿಸುವ ನಿಟ್ಟಿನಲ್ಲಿ ಏಪ್ರಿಲ್ 17 ರಿಂದ 29 ರವರೆಗೆ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಅನುಭವ- ಮಂಟಪ ಬಸವೇಶ್ವರ ವೈಭವ ರಥಯಾತ್ರೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ರವರು ಚಾಲನೆ ನೀಡಿದರು ,,
ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ರಾಥಾಯತ್ರೆಯನ್ನು ಸ್ವಾಗತಿಸಿ ಮಾತನಾಡಿದ ಅವರು, ಬಾಗಲಕೋಟೆ ಜಿಲ್ಲೆ ಬಸವನ ಬಾಗೇವಾಡಿಯಲ್ಲಿ ಏಪ್ರಿಲ್ 29 ಹಾಗೂ 30 ರಂದು ಆಯೋಜಿಸಿರುವ ಅನುಭವ ಮಂಟಪ – ಬಸವಾದಿ ಶರಣರ ವೈಭವ ಕಾರ್ಯಕ್ರಮದ ಅಂಗವಾಗಿ ಈ ರಥಾಯತ್ರೆಯನ್ನು ಆಯೋಜಿಸಲಾಗಿದೆ ವಿಧಾನಸೌಧದ ಮುಂಭಾಗದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 17ರಂದು ರಥಯಾತ್ರೆಗೆ ಚಾಲನೆ ನೀಡಿದ್ದು ಹೃದಯತ್ರಿಯು ನಾಡಿನಾದ್ಯಂತ ಸಂಚರಿಸಿ ಬಸವಣ್ಣನವರ ಬದುಕು ಸಂದೇಶ ಮತ್ತು ಚಿಂತನೆಗಳನ್ನು ಪ್ರಚುರ ಪಡಿಸಲಿದೆ ಎಂದು ತಿಳಿಸಿದರು,,
ಇಂದು ಪ್ರಜಾಪ್ರಭುತ್ವದಲ್ಲಿ ಸಮಾನತೆ ಸ್ವಾತಂತ್ರದ ಬಗ್ಗೆ ನಾವೆಲ್ಲ ಮಾತನಾಡುತ್ತಿದ್ದೇವೆ, ಆದರೆ ಬಸವಣ್ಣನವರು 12ನೇ ಶತಮಾನದಲ್ಲಿಯೇ ತಮ್ಮ ಅನುಭವ ಮಂಟಪದ ಮೂಲಕ ಮಹಿಳೆಯರು ಸೇರಿದಂತೆ ಎಲ್ಲಾ ಕಾಯಕ ಸಮುದಾಯಗಳಿಗೆ ಸಮಾನ ಅವಕಾಶ ಕಲ್ಪಿಸುವ ಮೂಲಕ ಸಮಾಜದ ಏಳಿಗೆಗಾಗಿ ಹಗಲಿರಲು ಶ್ರಮಿಸಿದವರು, ಸಾಮಾಜಿಕ ತಾರತಮ್ಯ, ಲಿಂಗ ತಾರತಮ್ಯ, ಮೂಢನಂಬಿಕೆಗಳನ್ನು ಹೋಗಲಾಡಿಸಲು 800 ವರ್ಷಗಳ ಹಿಂದೆಯೇ ರಚಿಸಿದ ವಚನಗಳು ಇಂದಿಗೂ ಪ್ರಸ್ತುತವಾಗಿದೆ,ಬಸವಣ್ಣನವರ ಮಹತ್ವವನ್ನು ನಾಡಿಗೆ ಸಾರಲು ಹೊರಟಿರುವುದು ಶ್ಲಾಘನೀಯ, ನಮ್ಮ ಜಿಲ್ಲೆಯಲ್ಲಿಯೂ ಬಸವಣ್ಣನವರ ವಚನಗಳ ಕುರಿತು ವಿಚಾರ ಸಂಕಿರಣಗಳನ್ನು ಏರ್ಪಡಿಸಲು ಜಿಲ್ಲಾಡಳಿತದಿಂದ ತಯಾರಿ ನಡೆಸಲಾಗುವುದು ಎಂದು ತಿಳಿಸಿದರು,,
ನಗರ ಶಾಸಕ ಜಿಬಿ ಜ್ಯೋತಿ ಗಣೇಶ್ ಮಾತನಾಡಿ ಬಸವಣ್ಣನವರ ಜಯಂತಿ ಅಂಗವಾಗಿ ಅವರ ಬದುಕು ತತ್ವಗಳನ್ನು ಜನತೆಗೆ ತಿಳಿಸಲು ಸರಕಾರ ಕೈಗೊಂಡಿರುವ ಅನುಭವ ಮಂಟಪ- ಬಸವಾದಿ ಶರಣರ ವೈಭವ ರಥಯಾತ್ರೆ ಇಂದು ತುಮಕೂರಿಗೆ ಆಗಮಿಸಿದೆ, ಬಸವಣ್ಣನವರ ವಚನಗಳ ಸಾರವನ್ನು ತಿಳಿದು ನಡೆದರೆ ಕಲ್ಯಾಣ ರಾಜ್ಯ ಸಕಾರ ಗೊಳ್ಳಲಿದೆ ಎಂದು ಮಾತನಾಡಿದರು,,
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ,ಎಸ್, ಸಿದ್ದಲಿಂಗಪ್ಪ ಮಾತನಾಡಿ ಬಸವೇಶ್ವರ ಸಂದೇಶಗಳನ್ನು ಸರಕಾರ ನಾಡಿಗೆ ಪರಿಚಯಿಸಲು ಹೊರಟಿರುವುದು ಸ್ವಾಗತರ್ಹ, ಇದರ ಜೊತೆಗೆ ಶಾಲಾ-ಕಾಲೇಜುಗಳಲ್ಲಿ ಬಸವಣ್ಣನವರ ಬಗ್ಗೆ ವಿಚಾರ ಸಂಕಿರಣ ಕಾರ್ಯಗಾರಗಳನ್ನು ನಡೆಸುವುದರ ಜೊತೆಗೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಸವ ಭವನ ನಿರ್ಮಾಣ ಮಾಡಬೇಕೆಂಬುದು ಬಹು ಜನರ ಬೇಡಿಕೆಯಾಗಿದೆ, ಸರಕಾರ ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ಶರಣರ ಒತ್ತಾಯವಾಗಿದೆ ಎಂದರು,,
ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ,ಎನ್ ತಿಪ್ಪೇಸ್ವಾಮಿ, ತಹಶೀಲ್ದಾರ್ ರಾಜೇಶ್ವರಿ, ಕನ್ನಡ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸುರೇಶ್ ಕುಮಾರ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಡಾ, ಪರಮೇಶ್, ತುಮಕೂರು ನಗರ ವೀರಶೈವ ಸೇವಾ ಸಮಾಜದ ಅಧ್ಯಕ್ಷ ಜಿಎಸ್ ಚಂದ್ರ ಮೌಳಿ, ಮುಖಂಡರಾದ ಸದಾಶಿವಯ್ಯ ಎಂಜಿ, ಸಿದ್ದರಾಮಯ್ಯ,ಡಾ, ಡಿ ಎನ್ ಯೋಗೀಶ್ವರಪ್ಪ, ಕುಮಾರಸ್ವಾಮಿ ಎಸ್, ಶಶಿಧರನ್, ತರಕಾರಿ ಮಹೇಶ್, ಕನ್ನಡ ಪ್ರಕಾಶ, ಅನಸೂಯಮ್ಮ, ಶ್ರೀಧರ ಸೇರಿದಂತೆ ಮತ್ತಿತರರು ಹಾಜರಿದ್ದರು,,,
ವರದಿ : ನರಸಿಂಹರಾಜು

