ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ದಾಳಿ
ಅನೇಕ ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದ್ದ ಭಾರತ
ವೀಸಾ ಪಡೆದು ರಾಜ್ಯದಲ್ಲಿದ್ದ ಐವರು ಪಾಕ್ ಪ್ರಜೆಗಳ ಗಡಿಪಾರು
ವಿವಿಧ ಜಿಲ್ಲೆಗಳಲ್ಲಿ 91 ಮಂದಿ ಪಾಕ್ ಪ್ರಜೆಗಳು ವಾಸ
ಬೆಂಗಳೂರು : ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ದಾಳಿಯ ಬಳಿಕ ಭಾರತ ಅನೇಕ ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದ್ದು. ಅದರಲ್ಲಿ ಭಾರತದಲ್ಲಿದ್ದ ಪಾಕ್ ಪ್ರಜೆಗಳನ್ನು ಹೊರಹಾಕುವುದು ಸೇರಿದೆ. ಅದರಂತೆ ಕೇಂದ್ರ ಸರ್ಕಾದ ಆದೇಶದ ಮೇರೆಗೆ ಕರ್ನಾಟಕದಲ್ಲಿ ನೆಲೆಸಿದ್ದ ಪಾಕ್ ಪ್ರಜೆಗಳನ್ನು ಹೊರ ಹಾಕಲಾಗುತ್ತಿದ್ದು. ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕ್ ಪ್ರಜೆಗಳನ್ನು ರಾಜ್ಯದಿಂದ ಗಡಿಪಾರು ಮಾಡಲಾಗಿದೆ.
ಅಷ್ಟೇ ಅಲ್ಲದೇ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 91 ಮಂದಿ ಪಾಕ್ ಪ್ರಜೆಗಳು ವಾಸವಾಗಿದ್ದಾರೆ ಎಂದು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ. 5 ಪಾಕಿಸ್ತಾನಿ ಪ್ರಜೆಗಳು ವೈದ್ಯಕೀಯ ವೀಸಾದಡಿ ರಾಜ್ಯದಲ್ಲಿದ್ದಾರೆ.
ಇವರಿಗೆ ಏ.29ರವರೆಗೆ ಮಾತ್ರ ದೇಶದಲ್ಲಿರಲು ಕೇಂದ್ರವು ವಿನಾಯಿತಿ ನೀಡಿದ್ದು, ಗಡುವಿನೊಳಗೆ ನಿಯಮಾನುಸಾರ ಹೊರ ಕಳುಹಿಸಲಾಗುತ್ತದೆ.ರಾಜ್ಯದಲ್ಲಿ ಅತಿ ಹೆಚ್ಚು ಪಾಕಿಸ್ತಾನಿ ಪ್ರಜೆಗಳು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು, ಭಟ್ಕಳದಲ್ಲಿ 14 ಹಾಗೂ ಕಾರವಾರದಲ್ಲಿ ಒಬ್ಬರು ಸೇರಿ ಒಟ್ಟಾರೆ 15 ಮಂದಿ ವಾಸವಾಗಿದ್ದಾರೆ.
ಈ ಪೈಕಿ 12 ಮಹಿಳೆಯರು ಹಾಗೂ ಮೂವರು ಮಕ್ಕಳಿದ್ದಾರೆ. ಅಷ್ಟೇ ಅಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 91 ಮಂದಿ ಪಾಕ್ ಪ್ರಜೆಗಳು ವಾಸವಾಗಿದ್ದು. ಅವರೆಲ್ಲಾ ಧೀರ್ಘವದಿ ವೀಸ ಪಡೆದು ಭಾರತ ಪ್ರವೇಶಿಸಿದ್ದು. ಅವರೆಲ್ಲರ ಗಡಿಪಾರಿಗೆ ಕೇಂದ್ರ ಸರ್ಕಾರ ಸೂಚಿಸಿಲ್ಲ. ಹೀಗಾಗಿ ಅಲ್ಪಾವದಿ ವೀಸಾ ಹೊಂದಿರುವವರನ್ನು ಮಾತ್ರ ಗಡಿಪಾರು ಮಾಡಲಾಗುತ್ತಿದೆ.

