ರಚಿತಾ ರಾಮ್ ವಿರುದ್ಧ ತಿರುಗಿಬಿದ್ದ ನಾಗಶೇಖರ್, ಕಿಟ್ಟಿ
ನಮ್ಮ ಸಿನಿಮಾ ಪ್ರಚಾರಕ್ಕೆ ಒಂಚೂರು ಸಪೋರ್ಟ್ ಕೊಟ್ಟಿಲ್ಲ
ಫಿಲ್ಮ್ ಚೇಂಬರ್ಗೆ ಅವರ ವಿರುದ್ಧ ಕಂಪ್ಲೇಂಟ್ ಕೊಡ್ತೀವಿ
ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ
ಸಂಜು ವೆಡ್ಸ್ ಗೀತಾ 2 ಸಿನಿಮಾದಲ್ಲಿ ಅಭಿನಯಿಸಿದ್ದ ನಟಿ ರಚಿತಾ ರಾಮ್ ವಿರುದ್ಧ ನಿರ್ದೇಶಕ ನಾಗಶೇಖರ್, ನಟ ಶ್ರೀನಗರ ಕಿಟ್ಟಿ ಅವರು ಕಂಪ್ಲೇಂಟ್ ಕೊಟ್ಟಿದ್ದಾರೆ. ಫಿಲ್ಮ್ ಚೇಂಬರ್ಗೆ ದೂರು ಕೊಟ್ಟ ನಿರ್ದೇಶಕ ನಾಗಶೇಖರ್, ರಮ್ಯಾ, ತಮನ್ನಾ ಎಲ್ಲರಿಗೂ ನಾನು ಸಿನಿಮಾ ಮಾಡಿದ್ದೀನಿ. ಆದ್ರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ ಎಂದಿದ್ದಾರೆ.
ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ರಚಿತಾ ರಾಮ್ ಬಂದಿಲ್ಲ. ಹೀಗಾಗಿ ರಚಿತಾ ರಾಮ್ ವಿರುದ್ಧ ನಿರ್ದೇಶಕರು ತಿರುಗಿ ಬಿದ್ದಿದ್ದಾರೆ. ನಮ್ಮ ಸಿನಿಮಾ ಪ್ರಚಾರಕ್ಕೆ ಒಂಚೂರು ಸಪೋರ್ಟ್ ಕೊಟ್ಟಿಲ್ಲ. ರಾಕ್ಲೈನ್ ವೆಂಕಟೇಶ್ ಮನವೊಲಿಸಲು ಪ್ರಯತ್ನಿಸಿದ್ರು. ಆದರೂ ರಚಿತಾ ಒಪ್ಪಿಲ್ಲ. ನಾವು ಇಂತಹ ಕಲಾವಿದರಿಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.

