ಬೆಂಗಳೂರು: ಗುವಾಹಟಿಯಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನ (6E 6764) ಗುರುವಾರ ಸಂಜೆ ಬೆಂಗಳೂರಿಗೆ ತುರ್ತು ಮಾರ್ಗ ಬದಲಾವಣೆ ಮಾಡಿದೆ. ಇಂಧನ ಮಟ್ಟ ತೀವ್ರವಾಗಿ ಕಡಿಮೆಯಾದ ಕಾರಣ ಪೈಲಟ್ ಅಪರೂಪದ “ಇಂಧನ ಮೇಡೇ” ಕರೆ ನೀಡಿದ ಬಳಿಕ ವಿಮಾನವನ್ನು ಬೆಂಗಳೂರಿನಲ್ಲಿ ಲ್ಯಾಂಡ್ ಮಾಡಲಾಯಿತು ಎಂದು ಹೇಳಲಾಗಿದೆ.
ಗುರುವಾರ ಸಂಜೆ 4.45ಕ್ಕೆ 168 ಪ್ರಯಾಣಿಕರನ್ನು ಹೊತ್ತು ಗುವಾಹಟಿಯಿಂದ ಹೊರಟ ಇಂಡಿಗೋ ವಿಮಾನ ಸಂಜೆ 7.45ರ ವೇಳೆಗೆ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿತ್ತು. ಆದರೆ ಚೆನ್ನೈ ತಲುಪುವ ಸ್ವಲ್ಪ ಸಮಯದ ಮೊದಲು, ಪೈಲಟ್ ಇಂಧನ ಕಡಿಮೆಯಿರುವ ಬಗ್ಗೆ ಗಮನಿಸಿದರು. ಇದು ಗಮ್ಯಸ್ಥಾನದಲ್ಲಿ ಸುರಕ್ಷಿತ ಲ್ಯಾಂಡಿಂಗ್ ಬಗ್ಗೆ ಕಳವಳ ಉಂಟು ಮಾಡಿತ್ತು.
ಪೈಲಟ್ ತಕ್ಷಣ ಚೆನ್ನೈ ವಾಯು ಸಂಚಾರ ನಿಯಂತ್ರಣ (ಎಟಿಸಿ) ಯನ್ನು ಸಂಪರ್ಕಿಸಿದರು. ಈ ವೇಳೆ ಸುರಕ್ಷತಾ ಕಾರಣಗಳಿಗಾಗಿ ವಿಮಾನವನ್ನು ಬೆಂಗಳೂರಿಗೆ ತಿರುಗಿಸಲು ಸೂಚಿಸಲಾಯಿತು. ಜೂನ್ 19ರಂದು ರಾತ್ರಿ 8 ಗಂಟೆ ಸುಮಾರಿಗೆ ವಿಮಾನವು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ.
“ಮೇಡೇ ಕರೆ ಬಂದ ನಂತರ, ಎಟಿಸಿ (ವಾಯು ಸಂಚಾರ ನಿಯಂತ್ರಣ) ವಿಮಾನ ನಿಲ್ದಾಣದ ಸಿಬ್ಬಂದಿಗೆ ಎಚ್ಚರಿಕೆ ನೀಡಿತು, ಅವರು ಕಾರ್ಯಪ್ರವೃತ್ತರಾದರು. ವೈದ್ಯಕೀಯ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿದ್ದರು ಎಂದು ಹೇಳಲಾಗಿದೆ. ಇಂಧನದ ಪರೀಕ್ಷೆ ಮಾಡಿಕೊಳ್ಳದೆ ಹಾರಾಟಕ್ಕೆ ಮುಂದಾಗಿದ್ದಕ್ಕೆ ಆ ವಿಮಾನದ ಇಬ್ಬರು ಪೈಲಟ್ಗಳನ್ನೂ ಅಮಾನತುಗೊಳಿಸಲಾಗಿದೆ ಎಂದು ಕೆಲವು ವರದಿಗಳು ತಿಳಿಸಿವೆ. ಆದರೆ ಇಂಡಿಗೋ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

