1.ರಾಷ್ಟ್ರಪತಿ ಭವನದಲ್ಲಿ ಸಿಎಂ ಸಿದ್ದು, ನಟ ಅಮೀರ್ ಖಾನ್ ಭೇಟಿ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಇರುವ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದರು ಈ ಸಂದರ್ಭದಲ್ಲಿ ಬಾಲಿವುಡ್ ನಟ, ನಿರ್ದೇಶಕ ಅಮೀರ್ ಖಾನ್ ಒಬ್ಬರಿಗೊಬ್ಬರು ಮುಖಾಮುಖಿ ಆಗಿ ಶುಭ ಹಾರೈಸಿದ್ದಾರೆ.
2.ಜೂ.28ರವರೆಗೂ ಹೆಚ್ಚು ಮಳೆ, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಇಂದಿನಿಂದ ಮುಂಗಾರು ಬಿರುಸುಗೊಳ್ಳಲಿದ್ದು, ಜೂನ್ 28ರವರೆಗೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಹಾಗೇನೇ ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಬೀದರ್, ವಿಜಯನಗರ, ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
3.ಡ್ರಗ್ಸ್ ಪ್ರಕರಣ, ತಮಿಳು ನಟ ಶ್ರೀಕಾಂತ್ ಅರೆಸ್ಟ್
ಸಿನಿಮಾ ರಂಗದಲ್ಲಿ ಕೆಲವೊಂದು ನಾಯಕರಿಗೆ ಡ್ರಗ್ಸ್ ಅನ್ನೋದು ಫ್ಯಾಷನ್ ಆಗೋಗಿದೆ ಯಾಕೆಂದ್ರೆ ಡ್ರಗ್ಸ್ ಪ್ರಕರಣಗಳಲ್ಲಿ ಈ ಹಿಂದೆ ಹಲವಾರು ನಟ ನಟಿಯರ ಹೆಸರುಗಳು ಕೇಳಿ ಬಂದಿದ್ದವು . ಇದೀಗ ತಮಿಳು ನಟ ಶ್ರೀಕಾಂತ್ ಅವರ ಹೆಸರು ಕೇಳಿ ಬಂದಿದ್ದಲ್ಲದೆ ಡ್ರಗ್ಸ್ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದ್ದು ಇನ್ನೊಬ್ಬ ನಟ ಕೃಷ್ಣಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇನ್ನು ತನಿಖಾಧಿಕಾರಿಗಳು ಕೊಕೇನ್ ಖರೀದಿ ಮತ್ತು ಸೇವನೆಯಲ್ಲಿ ಅವರು ಭಾಗಿಯಾಗಿರುವ ಫೋಟೋಗಳನ್ನು ಪಡೆದುಕೊಂಡಿದ್ದಾರೆ ಎನ್ನುವ ಮಾಹಿತಿ ಕೂಡ ಲಭ್ಯವಾಗಿದೆ
4.ಅನಾರೋಗ್ಯದಿಂದ ಬಳಲುತ್ತಿರುವ ವಿಧಾನಪರಿಷತ್ತಿನ ಮಾಜಿ ಸದಸ್ಯರು
ತೀವ್ರ ಅನಾರೋಗ್ಯದಿಂದ ಹಿನ್ನೆಲೆ ಹಿರಿಯ ಸಾಹಿತಿ ಹಾಗೂ ವಿಧಾನಪರಿಷತ್ತಿನ ಮಾಜಿ ಸದಸ್ಯರಾದ ಪ್ರೊ. ದೊಡ್ಡ ರಂಗೇಗೌಡ ಅವರು ಬೆಂಗಳೂರಿನ ಕೆಂಗೇರಿಯಲ್ಲಿರುವ ಗ್ಲನೆಗಲ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ತಿಳಿಯುತ್ತಿದ್ದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಶಿವರಾಜ ತಂಗಡಗಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಅವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯವನ್ನು ಒದಗಿಸಲು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ
5.ಬಡವರ ದುಡ್ಡು ತಿನ್ನುವಷ್ಟು ದರಿದ್ರನೂ ಅಲ್ಲ: ಜಮೀರ್ ಅಹ್ಮದ್ ಖಾನ್
ಬಿ.ಆರ್. ಪಾಟೀಲ್ ಮಾಡಿರುವ ಆರೋಪಗಳಿಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ . ಬಡವರ ಬಳಿ ಹಣ ತೆಗೆದುಕೊಂಡು ಮನೆ ನೀಡಿದರೆ “ಹುಳ ಬಿದ್ದು ಸಾಯುತ್ತಾರೆ” “ನಾನು ಸತ್ಯ ಹರಿಶ್ಚಂದ್ರ ಎಂದು ಹೇಳಿಲ್ಲ, ಆದರೆ ಬಡವರ ದುಡ್ಡು ತಿನ್ನುವಷ್ಟು ದರಿದ್ರನೂ ಅಲ್ಲ” ಎಂದು ಹೇಳಿದ್ದಾರೆ. ಇನ್ನು ಇವೆಲ್ಲ ಆರೋಪಗಳಿಗೆ ಸಂಬಂಧಿಸಿದಂತೆ ಯಾವುದೇ ತನಿಖೆಗೆ ಸಿದ್ಧ ಎಂದು ಸವಾಲು ಹಾಕಿದ್ದಾರೆ
6.ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಮಾಡಿದ್ದವಳು ಈಗ ಪೊಲೀಸರ ಅತಿಥಿ
ಪ್ರೀತಿ ಮಾಡಿದವರು ಕೈ ಕೊಟ್ಟಾಗ ಪ್ರೀತಿ ದ್ವೇಷವಾಗಿ ಬದಲಾಗತ್ತೆ ಅಂತ ಹೇಳ್ತಾರೆ ಹೌದು ಇಲ್ಲೊಬ್ಬಳು ರೋಬೋಟಿಕ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಯುವತಿ ತಾನು ಪ್ರೀತಿಸಿದ ಹುಡುಗ ಕೈ ಕೊಟ್ಟ ಅನ್ನುವ ಕಾರಣಕ್ಕೆ ಪ್ರೇಮಿಯ ಹೆಸರಿನಲ್ಲೇ ಇ-ಮೇಲ್ ಐಡಿ ಸೃಷ್ಟಿಸಿ ಕರ್ನಾಟಕ, ಗುಜರಾತ್ ಸೇರಿದಂತೆ 12 ರಾಜ್ಯಗಳಲ್ಲಿ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಕಳಿಸಿ ಈಗ ಪೋಲೀಸರ ಅಥಿತಿಯಾಗಿದ್ದಾಳೆ . ಇದರ ಜೊತೆಗೆ ಗುಜರಾತ್ನ ನರೇಂದ್ರ ಮೋದಿ ಸ್ಟೇಡಿಯಂ ಸ್ಪೋಟಿಸುವ ಬೆದರಿಕೆ ಇ-ಮೇಲ್ ರವಾನೆ ಮಾಡಿದ್ದಳು ಎನ್ನುವ ಆರೋಪ ಕೂಡ ಕೇಳಿ ಬಂದಿದೆ
7.ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಹಿರಿಯ ಕೈ ನಾಯಕರು
ಇತ್ತೀಚಿಗೆ ರಾಜಕೀಯ ವಲಯದಲ್ಲಿ ಒಂದೊಂದು ಹೊಸ ಹೊಸ ಸುದ್ದಿ ಸೃಷ್ಟಿಯಾಗ್ತಿದೆ. ಹೌದು ಇತ್ತ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಅವರದ್ದೇ ಪಕ್ಷದ ಹಿರಿಯ ಮುಖಂಡರು ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆದು, ದೂರು ನೀಡಿದ್ದಾರೆ. ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರ ಸಂಪರ್ಕಕ್ಕೆ ಸಿಗುತ್ತಿಲ್ಲ ಹಾಗು ಸಭೆ ನೂ ನಡೆಸುತ್ತಿಲ್ಲ ಎಂದು ಚಿಕ್ಕಬಳ್ಳಾಪುರ ಭಾಗದ ಕಾಂಗ್ರೆಸ್ನ 28 ಹಿರಿಯ ನಾಯಕರು ಪತ್ರದಲ್ಲಿ ದೂರಿದ್ದಾರೆ
8.ಶ್ರೀ ಮಠದ ಹುಂಡಿಯಲ್ಲಿ 5,13,04,958/- ರೂ ಸಂಗ್ರಹ
ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಹುಂಡಿ ಎಣಿಕೆ ಮಾಡಲಾಗಿದೆ .ಭಕ್ತರ ಕಲ್ಪವೃಕ್ಷ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀರಾಘವೇಂದ್ರ ಸ್ವಾಮಿಗಳ ದರ್ಶನಕ್ಕಾಗಿ ದೇಶದ ಮೂಲೆ ಮೂಲೆಗಳಿಂದ ದಿನವು ಸಾವಿರಾರು ಜನ ಶ್ರೀಮಠಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆಯುತ್ತಾರೆ. ಹಾಗೇನೇ ರಾಯರಿಗೆ ಭಕ್ತರು ಕಾಣಿಕೆ ಮುಡುಪುಗಳನ್ನೂ ಅರ್ಪಿಸುತ್ತಾರೆ .. ಕಳೆದ 35 ದಿನಗಳ ಅವಧಿಯಲ್ಲಿ ಹುಂಡಿಗೆ ಜಮೆಯಾದ ಹಣ ಎಣಿಕೆ ಕಾರ್ಯ ಶ್ರೀ ಮಠದಲ್ಲಿ ನೆರವೇರಿದ್ದು ಒಟ್ಟು 5,13,04,958/- ರೂ ಹಣ ಹುಂಡಿಯಲ್ಲಿ ಸಂಗ್ರಹವಾಗಿದೆ
9.ಟ್ರೈನ್ ಟಿಕೆಟ್ ದರ ಹೆಚ್ಚಿಸಿ ಶಾಕ್ ಕೊಟ್ಟ ಸರ್ಕಾರ
ಟ್ರೈನ್ ನಲ್ಲಿ ಟಿಕೆಟ್ ದರ ಕಡಿಮೆ ಎಂದು ಪ್ರಯಾಣಿಸುವ ಪ್ರಯಾಣಿಕರಿಗೆ ಇದೀಗ ಸರ್ಕಾರ ಶಾಕ್ ಕೊಟ್ಟಿದೆ. ಹೌದು ಹಲವು ವರ್ಷಗಳ ಬಳಿಕ ದೇಶದಲ್ಲಿ ರೈಲ್ವೆ ಟಿಕೆಟ್ ದರ ಏರಿಕೆಗೆ ತೀರ್ಮಾನ ಕೈಗೊಳ್ಳಲಾಗಿದೆ. ದೇಶದಲ್ಲಿ ಜುಲೈ 1, 2025ರಿಂದ ಟಿಕೆಟ್ ದರ ಏರಿಕೆ ಜಾರಿಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ
10.ಮಕಾಡೆ ಮಲಗಿದ ‘ಥಗ್ ಲೈಫ್’ ಕ್ಷಮೆ ಕೇಳಿದ ನಿರ್ದೇಶಕ ಮಣಿರತ್ನಂ
ಅನೇಕ ವಿವಾದಗಳ ನಡೆವೆಯೂ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ರಿಲೀಸ್ ಆಗಿ ಕೊನೆಗೂ ಸೋಲು ಕಂಡಿದೆ . ಇನ್ನು ಸಿನಿಮಾ ನೋಡಿದ ಪ್ರೇಕ್ಷಕರು ಯಾರೊಬ್ಬರೂ ಸಹ ಸಿನಿಮಾ ಚೆನ್ನಾಗಿದೆ ಎಂದು ಹೇಳಿಲ್ಲ . ಇದೀಗ ಸಿನಿಮಾ ನಿರ್ದೇಶನ ಮಾಡಿರುವ ಮಣಿರತ್ನಂ ‘ಥಗ್ ಲೈಫ್’ ಸಿನಿಮಾದಿಂದ ನಿರಾಸೆ ಅನುಭವಿಸಿದ ಪ್ರೇಕ್ಷಕರಿಗೆ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.

