ಸೇಡಂ: ‘ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 50 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂಕಲ್ಪ ಮಾಡಿದೆ. ಈಗಾಗಲೇ ಎರಡು ವರ್ಷಗಳ ಅವಧಿಯಲ್ಲಿ 15 ಸಾವಿರ ಹುದ್ದೆಗಳ ಭರ್ತಿ ಕ್ರಮ ತೆಗೆದುಕೊಂಡಿದ್ದು ಮುಂದಿನ ದಿನಗಳಲ್ಲಿ 35 ಸಾವಿರ ಹುದ್ದೆಗಳನ್ನು ಮಾಡಿಕೊಳ್ಳಲಾಗುತ್ತದೆ’ ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.
ಪಟ್ಟಣದ ಬಸವ ನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಿರ್ಮಾಣಗೊಂಡ ನೂತನ 6 ಕೋಣೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಈ ಹಿಂದೆ ನಾನು ಅಧಿಕಾರದಲ್ಲಿದ್ದಾಗ ಗ್ರಾಮ ಮತ್ತು ತಾಂಡಾಗಳಿಗೆ ಡಾಂಬಾರರ್ ರಸ್ತೆ ಮಾಡಿದ್ದೆ.
ಈ ಅವಧಿಯಲ್ಲಿ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಸುಸಜ್ಜಿತ ಶಾಲಾ ಕೋಣೆಗಳನ್ನು ನಿರ್ಮಿಸಿ ಮೂಲ ಸೌಕರ್ಯ ಒದಗಿಸಲಾಗುತ್ತದೆ. ಹಣಾದಿ ರಸ್ತೆಗಳನ್ನು ನಿರ್ಮಿಸುವ ಉದ್ದೇಶವಿದ್ದು ಮುಂದಿನ 3 ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು’ ಎಂದು ಭರವಸೆ ನೀಡಿದರು.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

