ಕಣ್ಣೂರು : 2011ರ ಕೇರಳದ ಸೌಮ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ದೋಷಿ ಗೊವಿಂದಚಾಮಿ ಕಣ್ಣೂರು ಕೇಂದ್ರ ಜೈಲಿನಿಂದ ಶುಕ್ರವಾರ ಬೆಳಿಗ್ಗೆ ತಪ್ಪಿಸಿಕೊಂಡಿದ್ದು, ಕೆಲವೇ ಗಂಟೆಗಳಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಗೋವಿಂದಚಾಮಿಗೆ ಎಡಗೈ ತುಂಡಾಗಿದ್ದು, ಕಣ್ಣೂರು ನಗರ ವ್ಯಾಪ್ತಿಯ ಥಲಾಪ್ನಲ್ಲಿರುವ ಪಾಳುಬಿದ್ದ ಕಟ್ಟಡದ ಸಮೀಪ ಆತನನ್ನು ಸೆರೆಹಿಡಿಯಲಾಗಿದೆ. ವರದಿಗಳ ಪ್ರಕಾರ ಆತ ಕಟ್ಟಡದ ಸಮೀಪ ಇದ್ದ ಬಾವಿಯಲ್ಲಿ ಅಡಗಿ ಕುಳಿತಿದ್ದನು.
ಬೆಳಗಿನ ಜಾವ 1.15 ರ ಸುಮಾರಿಗೆ 10 ನೇ ಬ್ಲಾಕ್ನಲ್ಲಿರುವ ಬಿಗಿ ಭದ್ರತೆಯ ಸೆಲ್ನಲ್ಲಿ ಏಕಾಂಗಿಯಾಗಿದ್ದ ಗೋವಿಂದಚಾಮಿ, ಕಬ್ಬಿಣದ ಸರಳುಗಳನ್ನು ಕತ್ತರಿಸಿ ವಾಶ್ ಏರಿಯಾದಿಂದ ಬಟ್ಟೆಗಳನ್ನು ಬಳಸಿ ಜೈಲಿನ ಗೋಡೆಯಿಂದ ಕೆಳಕ್ಕೆ ಇಳಿದಿದ್ದ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
ಜೈಲು ಸಿಬ್ಬಂದಿ ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಬೆಳಗಿನ ಜಾವದ ಸಮಯದಲ್ಲಿ ಮಾತ್ರ ಆತ ಅಲ್ಲಿ ಇಲ್ಲದ್ದನ್ನು ಗಮನಿಸಿದರು. ನಂತರ ಜೈಲಿನೊಳಗೆ ಹುಡುಕಾಟ ನಡೆಸಲಾಯಿತು ಆದರೆ ಅವನು ಪತ್ತೆಯಾಗಲಿಲ್ಲ. ಅಧಿಕಾರಿಗಳು ಅವರು ಹಲವು ಗಂಟೆಗಳ ಕಾಲ ಕಾಣೆಯಾಗಿದ್ದನ್ನು ದೃಢಪಡಿಸಿದರು.
ಜೈಲು ಅಧಿಕೃತವಾಗಿ ಬೆಳಿಗ್ಗೆ 7 ಗಂಟೆಗೆ ಪೊಲೀಸರಿಗೆ ಮಾಹಿತಿ ನೀಡಿತು ಮತ್ತು ಪೂರ್ಣ ಪ್ರಮಾಣದ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಬಳಿಕ ಕಣ್ಣೂರು ಕೇಂದ್ರ ಕಾರಾಗೃಹದಿಂದ 4 ಕಿ.ಮೀ ದೂರದಲ್ಲಿರುವ ಪಾಳುಬಿದ್ದ ಮನೆಯ ಬಳಿಯ ಬಾವಿಯಲ್ಲಿ ಅಡಗಿ ಕುಳಿತಿದ್ದ. ಜೈಲಿನಿಂದ ಎಸ್ಕೆಪ್ ವಿಚಾರ ತಿಳಿದ ಪೊಲೀಸರು ಡಾಗ್ ಸ್ಕ್ಯಾಡ್, ಸುತ್ತ ಮುತ್ತಲಿನ ಸಿಸಿಟಿವಿ ದೃಶ್ಯ ಆಧರಿಸಿ ಕಾರ್ಯಾಚರಣೆ ನಡೆದಿದ್ದರು. ಇದಾದ ಬಳಿಕ ಬೆಳಗ್ಗೆ 10:30ರ ಸುಮಾರಿಗೆ ಬಾವಿಯಲ್ಲಿ ಅಡಗಿ ಕೂತಿದ್ದ ಗೋವಿಂದ ಚಾಮಿಯನ್ನು ಪತ್ತೆ ಹಚ್ಚಿದ ಪೊಲೀಸರು ಮತ್ತೆ ಲಾಕ್ ಮಾಡಿದ್ದಾರೆ.
ಯಾರು ಈ ಗೋವಿಂದಚಾಮಿ?
2011ರ ಫೆಬ್ರವರಿ 1ರಂದು ಆರೋಪಿ ಗೋವಿಂದಚಾಮಿ, ಶೋರನೂರು ಮೂಲದ 23 ವರ್ಷದ ಸೌಮ್ಯಾಳನ್ನು ಎರ್ನಾಕುಲಂ-ಶೋರನೂರು ಪ್ಯಾಸೆಂಜರ್ ರೈಲಿನಲ್ಲಿ ಸುಲಿಗೆ ಮಾಡಿ, ಆಕೆಯನ್ನು ರೈಲಿನಿಂದ ತಳ್ಳಿ ಕೊಲೆ ಮಾಡಿದ್ದಾನೆ ಎಂಬ ಥಾಸ್ಟ್ ಟ್ರ್ಯಾಕ್ ನ್ಯಾಯಾಲಯದ ತೀರ್ಪನ್ನು ಕೇರಳ ಹೈಕೋರ್ಟ್ 2013ರ ಡಿಸೆಂಬರ್ ತಿಂಗಳಲ್ಲಿ ಎತ್ತಿಹಿಡಿದಿತ್ತು. ಘಟನೆಯ ಸಂದರ್ಭದಲ್ಲಿ ಸೌಮ್ಯಳ ಮೇಲೆ ಅತ್ಯಾಚಾರ ಎಸಗಿ, ಕ್ರೂರವಾಗಿ ಹಲ್ಲೆ ಮಾಡಲಾಗಿತ್ತು. ಬಳಿಕ, ಸೌಮ್ಯಾಳನ್ನು ರೈಲ್ವೆ ಪೊಲೀಸರು ಹಳಿಯ ಬಳಿ ಪತ್ತೆ ಮಾಡಿದರು. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾದೇ 2011, ಫೆಬ್ರವರಿ 6ರಂದು ತ್ರಿಶೂರ್ನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಸೌಮ್ಯ ಮೃತಪಟ್ಟರು.
ಘಟನಾ ಸಮಯದಲ್ಲೇ ಅರೋಪಿ ಗೋವಿಂದಚಾಮಿ, ತಮ್ಮ ಹುಟ್ಟೂರಾದ ತಮಿಳುನಾಡಿನಲ್ಲಿ ಅಷ್ಟರಲ್ಲಾಗಲೇ ಎಂಟು ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದರು. 2012ರಲ್ಲಿ ತ್ವರಿತ ನ್ಯಾಯಾಲಯವು ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸಿತು. ಆರೋಪಿಯನ್ನು ರೂಢಿಗತ ಅಪರಾಧಿ ಪರಿಗಣಿಸಿ ಕಠಿಣ ಶಿಕ್ಷೆಯನ್ನು ನೀಡಿತು.

