ನವದೆಹಲಿ, ಜುಲೈ 29: ಇಂದು ಲೋಕಸಭಾ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ) ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಪಹಲ್ಗಾಮ್ ದಾಳಿಗೆ ಕಾರಣರಾಗಿದ್ದ ಮೂವರು ಉಗ್ರರನ್ನು ಆಪರೇಷನ್ ಮಹಾದೇವ ಕಾರ್ಯಾಚರಣೆಯಲ್ಲಿ ಎನ್ಕೌಂಟರ್ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ದಿನವೇ ಅಂದರೆ ಏಪ್ರಿಲ್ 22ರಂದು ಆಪರೇಷನ್ ಮಹಾದೇವ್ ಅನ್ನು ಪ್ರಾರಂಭಿಸಲಾಯಿತು ಎಂದು ಅಮಿತ್ ಶಾ ಲೋಕಸಭೆಯಲ್ಲಿ ಹೇಳಿದ್ದಾರೆ. ಅದೇ ದಿನ ಸಂಜೆ ನಾನು ಶ್ರೀನಗರ ತಲುಪಿದೆ. ಆ ಸಂಜೆ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಲಾಯಿತು. ಅಲ್ಲಿ ಭಯೋತ್ಪಾದಕರು ದೇಶ ಬಿಟ್ಟು ಪಲಾಯನ ಮಾಡಲು ಬಿಡಬಾರದು ಎಂದು ನಿರ್ಧರಿಸಲಾಯಿತು. ಅದರಿಂದ ಆರಂಭವಾಗಿದ್ದೇ ಆಪರೇಷನ್ ಮಹಾದೇವ್ ಕಾರ್ಯಾಚರಣೆ ಎಂದು ಅಮಿತ್ ಶಾ ಮಾಹಿತಿ ನೀಡಿದ್ದಾರೆ.
ನಿನ್ನೆ ಎನ್ಕೌಂಟರ್ನಲ್ಲಿ ಮೃತನಾದ ಸುಲೇಮಾನ್ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ. ಇನ್ನಿಬ್ಬರು ಅಫ್ಘಾನ್ ಮತ್ತು ಜಿಬ್ರಾನ್ ಆತನ ಸಹಚರರಾಗಿದ್ದರು. ಇವರೆಲ್ಲರೂ ಪಾಕ್ ಮೂಲದ ನಿಷೇಧಿತ ಗುಂಪು ಲಷ್ಕರ್-ಎ-ತೈಬಾಗೆ ಸೇರಿದ ಪ್ರಮುಖ ಭಯೋತ್ಪಾದಕರು. ಪಹಲ್ಗಾಮ್ ದಾಳಿಯಲ್ಲಿ ಇವರದ್ದೇ ಕೈವಾಡವಿತ್ತು. 26 ಜನರನ್ನು ಕೊಂದವರನ್ನು ಹತ್ಯೆ ಮಾಡಲಾಗಿದೆ ಎಂದು ಅಮಿತ್ ಶಾ ಸದನಕ್ಕೆ ತಿಳಿಸಿದ್ದಾರೆ.
ಉಗ್ರರ ಗನ್, ಚಾಕೋಲೇಟ್, ವೋಟರ್ ಐಡಿ ಎಲ್ಲಾ ಪಾಕಿಸ್ತಾನದ್ದು ;
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರನ್ನು ಹೊಡೆದುರುಳಿಸುತ್ತೇವೆ ಎಂದು ಇಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಆಪರೇಷನ್ ಸಿಂದೂರ್ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಮಾತನಾಡಿದ ಶಾ, ನಿನ್ನೆ ಸೇನೆ, ಸಿಆರ್ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಸುಲೇಮಾನ್, ಅಫ್ಘಾನಿ ಮತ್ತು ಗಿಬ್ರಾನ್ ಎಂದು ಗುರುತಿಸಲಾದ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಹೇಳಿದ್ದಾರೆ. ಸುಲೇಮಾನ್ ಲಷ್ಕರ್ನ ಉನ್ನತ ಕಮಾಂಡರ್ ಆಗಿದ್ದ . 26 ಅಮಾಯಕರ ಸಾವಿಗೆ ಕಾರಣವಾದ ಪಹಲ್ಗಾಮ್ ದಾಳಿಯಲ್ಲಿ ಮೂವರು ಭಾಗಿಯಾದ ಕುರಿತು ಮಾಹಿತಿ ಇದೆ ಎಂದು ಶಾ ಹೇಳಿದ್ದಾರೆ.
ಪಹಲ್ಗಾಮ್ನಲ್ಲಿ ದಾಳಿ ನಡೆಸಿದ್ದ ಉಗ್ರರು ಪಾಕಿಸ್ತಾನದವರು ಎಂಬುದಕ್ಕೆ ನಿಮ್ಮ ಬಳಿ ಪುರಾವೆ ಏನಿದೆ?, ಅವರು ದೇಶೀಯ ಉಗ್ರರು ಕೂಡ ಆಗಿರಬಹುದಲ್ಲ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಪಿ ಚಿದಂಬರಂ ಮಾಡಿದ್ದ ಪ್ರಶ್ನೆಗೆ ಸಾಕ್ಷಿ ಸಮೇತ ಉತ್ತರಿಸಿದ ಶಾ ಪಾಕ್ ವೋಟರ್ ಐಡಿ, ಚಾಕೊಲೇಟ್ಗಳು ಸಿಕ್ಕಿವೆ. ಭಯೋತ್ಪಾದಕರು ಪಾಕಿಸ್ತಾನದಿಂದ ಬಂದಿದ್ದಾರೆ ಎಂಬುದಕ್ಕೆ ಪುರಾವೆ ಏನು ಎಂದು ಮಾಜಿ ಗೃಹ ಸಚಿವ (ಪಿ) ಚಿದಂಬರಂ ಜಿ ಪ್ರಶ್ನಿಸಿದಾಗ ನನಗೆ ನೋವಾಯಿತು. ಅವರು ಏನು ಹೇಳಲು ಬಯಸುತ್ತಾರೆ? ಪಾಕಿಸ್ತಾನವನ್ನು ರಕ್ಷಿಸುವುದರಿಂದ ಅವರು ಏನು ಗಳಿಸುತ್ತಾರೆ? ನಾನು ಚಿದಂಬರಂ ಜಿ ಅವರಿಗೆ ಹೇಳಲು ಬಯಸುತ್ತೇನೆ, ಮೂವರೂ ಪಾಕಿಸ್ತಾನಿಗಳು ಎಂಬುದಕ್ಕೆ ನಮ್ಮ ಬಳಿ ಪುರಾವೆಗಳಿವೆ. ಮೂವರಲ್ಲಿ ಇಬ್ಬರಿಗೆ ಪಾಕಿಸ್ತಾನದ ಮತದಾರರ ಸಂಖ್ಯೆ ನಮ್ಮ ಬಳಿ ಇದೆ. ಅವರ ಮೇಲೆ ಪಾಕಿಸ್ತಾನದಲ್ಲಿ ತಯಾರಾದ ಚಾಕೊಲೇಟ್ಗಳು ಕಂಡುಬಂದಿವೆ. ಇಡೀ ಪ್ರಪಂಚದ ಮುಂದೆ, ಈ ದೇಶದ ಮಾಜಿ ಗೃಹ ಸಚಿವರು ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ನೀಡುತ್ತಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ಭಾರತವು ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳನ್ನು ಯಶಸ್ವಿಯಾಗಿ ನಾಶಪಡಿಸಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ 26 ನಾಗರಿಕರ ಹತ್ಯೆಗೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ನಿಖರವಾದ ದಾಳಿಗಳನ್ನು ನಡೆಸಿ, ಹಲವಾರು ಭಯೋತ್ಪಾದಕರನ್ನು ಕೊಂದಿವೆ ಎಂದು ಶಾ ಹೇಳಿದರು.
ಇಬ್ಬರು ಪಹಲ್ಗಾಮ್ ಉಗ್ರರ ಮೊದಲ ಫೋಟೋ ರಿಲೀಸ್.!
ಏಪ್ರಿಲ್ 22 ರ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾದ ಮೂವರು ಭಯೋತ್ಪಾದಕರಲ್ಲಿ ಇಬ್ಬರಾದ ಹಬೀಬ್ ತಾಹಿರ್ ಮತ್ತು ಜಿಬ್ರಾನ್ ಅವರ ಮೊದಲ ಚಿತ್ರ ಬಿಡುಗಡೆ ಆಗಿದೆ. ಇಬ್ಬರೂ ಪಾಕಿಸ್ತಾನಿ ಪ್ರಜೆಗಳಾಗಿದ್ದು, ಸೋಮವಾರ ಶ್ರೀನಗರದಲ್ಲಿ ನಡೆದ ಜಂಟಿ ಪಡೆಗಳ ಕಾರ್ಯಾಚರಣೆಯಲ್ಲಿ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು.
ಪಹಲ್ಗಾಮ್ ದಾಳಿಯ ಪ್ರಮುಖ ಸಂಚುಕೋರ ಮತ್ತು ಕಾರ್ಯನಿರ್ವಾಹಕ ಎಂದು ಹೆಸರಿಸಲಾದ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಉನ್ನತ ಕಮಾಂಡರ್ ಹಾಶಿಮ್ ಮೂಸಾ ಅವರನ್ನು ಕಾರ್ಯಾಚರಣೆಯ ಸಮಯದಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು. ಭಯೋತ್ಪಾದಕರು ಡೇರೆಯೊಂದರೊಳಗೆ ನಿದ್ದೆ ಮಾಡುವಾಗ ಸಿಕ್ಕಿಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎ
ನ್ಕೌಂಟರ್ ಪೂರ್ವ ಯೋಜಿತವಲ್ಲ ಆದರೆ ಆಕಸ್ಮಿಕವಾಗಿ ಉಗ್ರರು ಪತ್ತೆಯಾದ ಕಾರಣ ಇದನ್ನು ನಡೆಸಲಾಯಿತು. ದಚೆಗಮ್ ಅರಣ್ಯ ಪ್ರದೇಶದಲ್ಲಿ ಸುತ್ತುವರಿದ ಎರಡು ದಿನಗಳ ನಂತರ, 4 ಪ್ಯಾರಾದ ಸಿಬ್ಬಂದಿ ಅಡಗುತಾಣದಲ್ಲಿ ಭಯೋತ್ಪಾದಕರನ್ನು ಗುರುತಿಸಿ, ತಕ್ಷಣವೇ ಗುಂಡು ಹಾರಿಸಿ, ಮೂವರನ್ನು ಸ್ಥಳದಲ್ಲೇ ಕೊಂದರು. ದಾಳಿಯ ಸಮಯದಲ್ಲಿ ಭಯೋತ್ಪಾದಕರು ವಿಶ್ರಾಂತಿ ಸ್ಥಿತಿಯಲ್ಲಿ ಮಲಗಿದ್ದರು ಎಂದು ಕಾರ್ಯಾಚರಣೆಯ ಬಗ್ಗೆ ಮಾಹಿತಿ ಹೊಂದಿರುವ ಹಿರಿಯ ಅಧಿಕಾರಿಯೊಬ್ಬರು ದೃಢಪಡಿಸಿದರು..

