ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಪರೇಷನ್ ಸಿಂಧೂರ್ ನಿಲ್ಲಿಸಲು ಆದೇಶಿಸಿದ್ದರು ಎಂಬ ಪ್ರತಿಪಕ್ಷಗಳ ಆರೋಪವನ್ನು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಅಲ್ಲಗೆಳೆದಿದ್ದಾರೆ.
ರಾಜ್ಯಸಭೆಯಲ್ಲಿ ಸಚಿವ ಡಾ. ಎಸ್. ಜೈಶಂಕರ್ ಅವರು ಪ್ರತಿಪಕ್ಷಗಳ ಆರೋಪಕ್ಕೆ ಪ್ರಬಲ ಖಂಡನೆ ವ್ಯಕ್ತಪಡಿಸಿದ್ದು, “ಕಿವಿಗೊಟ್ಟು ಕೇಳಿ ಏಪ್ರಿಲ್ 22 ರಿಂದ ಜೂನ್ 16 ರವರೆಗೆ, ಅಧ್ಯಕ್ಷ ಟ್ರಂಪ್ ಮತ್ತು ಪ್ರಧಾನಿ ಮೋದಿ ನಡುವೆ ಒಂದೇ ಒಂದು ಫೋನ್ ಕರೆ ಕೂಡ ನಡೆದಿಲ್ಲ” ಎಂದಿದ್ದಾರೆ.
ಭಾರತವು ಸೌದಿ ಅರೇಬಿಯಾ ಸೇರಿದಂತೆ ವಿವಿಧ ರಾಷ್ಟ್ರಗಳೊಂದಿಗೆ ರಾಜತಾಂತ್ರಿಕ ಸಂಪರ್ಕದಲ್ಲಿದ್ದರೂ ಯಾವುದೇ ರೀತಿಯ ಮಧ್ಯಸ್ಥಿಕೆಯನ್ನು ಸ್ವೀಕರಿಸುವುದಿಲ್ಲ ಎಂದು ನಿರಂತರವಾಗಿ ಹೇಳುತ್ತಲೇ ಬಂದಿದೆ. “ಹೋರಾಟ ನಿಲ್ಲಬೇಕಾದರೆ, ಪಾಕಿಸ್ತಾನದ ಡಿಜಿಎಂಒ ವಿನಂತಿಸಬೇಕು ಎಂದು ನಾವು avrige ತಿಳಿಸಿದ್ದೇವೆ ಮತ್ತು ಅದು ನಿಖರವಾಗಿ ಅದುವೇ ಸಂಭವಿಸಿತು” ಎಂದು ಅವರು ಹೇಳಿದ್ದಾರೆ.
“ಭಾರತದ ಮಾರ್ಗ ಸ್ಪಷ್ಟವಾಗಿತ್ತು, ಯಾವುದೇ ಬ್ಯಾಕ್ಚಾನೆಲ್ ರಾಜತಾಂತ್ರಿಕತೆ ಮತ್ತು ಮಧ್ಯವರ್ತಿಗಳಿರಲಿಲ್ಲ, ಮಿಲಿಟರಿಗಳ ಮೂಲಕ ನೇರ ಮತ್ತು ಅಧಿಕೃತ ಸಂವಹನ ಮಾತ್ರ ಇತ್ತು. ಆದಾಗ್ಯೂ, ಭಾರತ ಪಾಕಿಸ್ತಾನದೊಂದಿಗೆ ಕದನ ವಿರಾಮ ಘೋಷಿಸುವ ಮೊದಲೇ, ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ಟ್ರುತ್ಸ್ ಸೋಶಿಯಲ್ನಲ್ಲಿ, ಯುನೈಟೆಡ್ ಸ್ಟೇಟ್ಸ್ ಎರಡೂ ದೇಶಗಳ ನಡುವೆ “ಸುದೀರ್ಘ ರಾತ್ರಿಯ ಮಾತುಕತೆಗೆ ಮಧ್ಯಸ್ಥಿಕೆ ವಹಿಸಿದೆ ಎಂದು ಹೇಳಿಕೊಂಡರು” ಎಂದು ಜೈಶಂಕರ್ ಹೇಳಿದ್ದಾರೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

