ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಕಳೆದ ಒಂದು ವಾರದಿಂದ ವಿಶೇಷ ತನಿಖಾ ತಂಡ ತೀವ್ರ ಕಾರ್ಯಾಚರಣೆ ನಡೆಸುತ್ತಿದೆ. 1995ರಿಂದ 2014ರವರೆಗೆ ಧರ್ಮಸ್ಥಳದಲ್ಲಿ ನಡೆದಿರುವ ಶವಗಳ ರಹಸ್ಯ ಕೆದಕಲು ಅನಾಮಿಕ ನೀಡಿದ ದೂರಿನ ಆಧಾರದ ಮೇಲೆ ಸರ್ಕಾರ ಎಸ್ಐಟಿ ರಚನೆ ಮಾಡಿದ್ದು, ಎಸ್ಐಟಿ ತೀವ್ರ ತನಿಖೆಯಲ್ಲಿ ತೊಡೆಗಿದೆ.ಇದೀಗ ಧರ್ಮಸ್ಥಳ ಕೇಸ್ಗೆ ಹೊಸ ತಿರುವು ಸಿಕ್ಕಿದೆ.
6ನೇ ದಿನದ ಸ್ಥಳ ಪರಿಶೋಧನೆ ವೇಳೆ ಸಿಕ್ಕಿದ್ದು ಒಂದಲ್ಲ ಎರಡಲ್ಲಾ ಮೂರು ಅಸ್ಥಿಪಂಜರ ಸಿಕ್ಕಿವೆ ಎಂದು ದೂರುದಾರೆ ಸುಜಾತ ಭಟ್ ಪರ ವಕೀಲ ಮಂಜುನಾಥ್ ಅವರು ಮಾಹಿತಿ ನೀಡಿದ್ದಾರೆ.
ಪತ್ರಿಕಾ ಹೇಳಿಕೆ ಮೂಲಕ ವಕೀಲ ಮಂಜುನಾಥ್ ಅವರು, ಪಾಯಿಂಟ್ 11ರ ನೂರು ಮೀಟರ್ ದೂರದಲ್ಲಿ 3 ಮಾನವ ಅಸ್ಥಿಪಂಜರ ಅವಶೇಷಗಳು ಲಭ್ಯವಾಗಿದೆ.ನಿನ್ನೆ ಪಾಯಿಂಟ್ ನಂ. 11ರ ಬದಲು ಹೊಸ ಜಾಗದಲ್ಲಿ ಪರಿಶೋಧನೆ ನಡೆದಿತ್ತು. ಎಸ್ಐಟಿ ಅನಾಮಿಕ ದೂರುದಾರನಿಗೆ ಹೊಸ ಜಾಗ ತೋರಿಸಲು ಅವಕಾಶ ನೀಡಿದೆ.
ಇದರಿಂದ ನಿನ್ನೆಯ ಅಸ್ಥಿಪಂಜರ ಅಗೆಯುವ ಕಾರ್ಯ ಯಶಸ್ವಿಯಾಗಿತ್ತು. ಎಸ್ಐಟಿ ಸಹಿತ ಶೋಧ ನಡೆಸುತ್ತಿರುವ ತಂಡದ ಕಾರ್ಯಾಚರಣೆ ಶ್ಲಾಘನೀಯ ಅಂತ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

