ನೆಲಮಂಗಲ: ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಹಸುಗಳ ಕತ್ತು ಕೊಯ್ದು ರಸ್ತೆಯಲ್ಲಿ ಬಿಸಾಡಿದ್ದ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಇಮ್ರಾನ್, ಸೈಯದ್ ನವಾಜ್, ಬಂಧಿತರು. ಮತ್ತೋರ್ವ ಆರೋಪಿಯ ಹೆಸರು ಬಹಿಂಗಪಡಿಸಿಲ್ಲ. ಆರೋಪಿಗಳು ಇತ್ತೀಚೆಗೆ ನೆಲಮಂಗಲ ತಾಲೂಕಿನ ಅರಳಸಂದ್ರ ಗ್ರಾಮದ ಸೇತುವೆ ಮೇಲೆ 2 ನಾಟಿ ಹಸುಗಳ ಕತ್ತು ಕೊಯ್ದು ಬಿಸಾಡಿದ್ದರು. ಈ ಪ್ರಕರಣದ ಬಗ್ಗೆ ಸದನದಲ್ಲೂ ಚರ್ಚೆ ಆಗಿತ್ತು.
ಈ ಸಂಬಂಧ ತನಿಖೆ ಕೈಗೆತ್ತಿಕೊಂಡಿದ್ದ ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು, ಕೇರಳಕ್ಕೆ ಹಸುಗಳನ್ನ ಸಾಗಿಸುತ್ತಿದ್ದ ಗ್ಯಾಂಗ್ನ ಮೂವರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ, ಹತ್ಯೆಯಾದ ಹಸುಗಳ ಮಾಂಸ ತಿನ್ನಲು ಯೋಗ್ಯವಲ್ಲದ ಕಾರಣ ಆರೋಪಿಗಳು ಕೊಂದು ಬಿಸಾಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್ಗೆ ಭರ್ಜರಿ ಚಾಲನೆ
- ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
- ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
- ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
- ರೇಮಂಡ್ ಕಂಪನಿಯ ಮಾಜಿ ಅಧ್ಯಕ್ಷ ವಿಜಯಪತ್ ಸಿಂಘಾನಿಯಾ ನಿಧನ

