ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಮತ್ತಷ್ಟು ತೀವ್ರಗೊಂಡಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಆಗಿಸಬೇಕು ಎಂಬ ಬೇಡಿಕೆ ಜೋರಾಗಿದೆ.
ರಾಜ್ಯದ ಹಲವೆಡೆ ಡಿಕೆ ಶಿವಕುಮಾರ್ ಅಭಿಮಾನಿಗಳು ದೇವಾಲಯಗಳಿಗೆ ತೆರಳಿ ಪೂಜೆ–ಪುನಸ್ಕಾರ ನಡೆಸುತ್ತಿದ್ದು, ಡಿಕೆಶಿ ಸಿಎಂ ಆಗಲಿ ಎಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಈ ನಡುವೆ, ವಕೀಲ ದೀಪು ಅವರು ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಿ, ಡಿಕೆ ಶಿವಕುಮಾರ್ ಅವರ ಫೋಟೋ ಹಿಡಿದು ವಿಶೇಷ ಪೂಜೆ ನಡೆಸಿದ್ದು, ಡಿಕೆಶಿ ಮುಖ್ಯಮಂತ್ರಿ ಸ್ಥಾನಕ್ಕೆ ಏರಬೇಕೆಂದು ದೇವರಲ್ಲಿ ಬೇಡಿಕೊಂಡಿದ್ದಾರೆ. ರಾಜ್ಯ ರಾಜಕೀಯ ವಲಯದಲ್ಲಿ ಈ ಬೆಳವಣಿಗೆ ಹೊಸ ಚರ್ಚೆಗೆ ಕಾರಣವಾಗಿದೆ.

