ಬಾಗಲಕೋಟೆ: ರಾಜ್ಯದಲ್ಲಿ 2ಎ ಮೀಸಲಾತಿ ಹೋರಾಟ ಮತ್ತೆ ಜೋರಾಗಿ ಮುನ್ನೆಲೆಗೆ ಬಂದಿದೆ. ಪಂಚಮಸಾಲಿ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಜಯಮೃತ್ಯುಂಜಯ ಸ್ವಾಮೀಜಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ವಾಮೀಜಿ ಮಾತನಾಡಿ, “ಮೀಸಲಾತಿ ಕೇಳಿದ ಹೋರಾಟಗಾರರ ಮೇಲೆ ಸರ್ಕಾರ ಲಾಠಿ ಪ್ರಹಾರ ನಡೆಸಿದೆ. ನಮ್ಮ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಯತ್ನಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿಸೆಂಬರ್ 10ರಂದು “ದೌರ್ಜನ್ಯ ದಿನ” ವನ್ನಾಗಿ ಆಚರಿಸುವುದಾಗಿ ಘೋಷಿಸಿದ ಅವರು, “ಸಿಎಂ ಸಿದ್ದರಾಮಯ್ಯ ಪಂಚಮಸಾಲಿ ಸಮುದಾಯಕ್ಕೆ ಕ್ಷಮೆ ಕೇಳಬೇಕು. ಕ್ಷಮೆ ಕೇಳುವವರೆಗೂ 2ಎ ಮೀಸಲಾತಿ ಕೇಳುವುದಿಲ್ಲ” ಎಂದು ಸ್ಪಷ್ಟಪಡಿಸಿದರು.
ಸರ್ಕಾರಕ್ಕೆ ಬಿಸಿ ಮುಟ್ಟಿಸುವ ರೀತಿಯಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸುವ ಸೂಚನೆಯನ್ನು ಜಯಮೃತ್ಯುಂಜಯ ಸ್ವಾಮೀಜಿ ನೀಡಿದ್ದಾರೆ.

