ನವದೆಹಲಿ: 77ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಭಯೋತ್ಪಾದನಾ ಆತಂಕದ ನಡುವೆ ರೈಲು ನಿಲ್ದಾಣಗಳು, ಬಸ್ ಟರ್ಮಿನಲ್ಗಳು ಹಾಗೂ ಜನದಟ್ಟಣೆಯ ಮಾರುಕಟ್ಟೆ ಪ್ರದೇಶಗಳಲ್ಲಿ ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪೋಸ್ಟರ್ಗಳನ್ನು ಅಳವಡಿಸಲಾಗಿದೆ. ಬಬ್ಬರ್ ಖಾಲ್ಸಾ, ಜೈಶ್-ಎ-ಮೊಹಮ್ಮದ್ ಮತ್ತು ಅಲ್-ಖೈದಾ ಸಂಘಟನೆಗಳಿಗೆ ಸಂಬಂಧಿಸಿದ ಶಂಕಿತರ ಚಿತ್ರಗಳು ಪೋಸ್ಟರ್ಗಳಲ್ಲಿ ಸೇರಿವೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಪೊಲೀಸರು ಮನವಿ ಮಾಡಿದ್ದಾರೆ.

