ಆಜಾದಿ ಕಾ ಅಮೃತ್ ಮಹೋತ್ಸವ ಅಭಿಯಾನ ಮತ್ತು ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕರ್ನಾಟಕದ ಹಂಪಿಯಲ್ಲಿರುವ ಐತಿಹಾಸಿಕ ಸ್ಮಾರಕಗಳನ್ನು ತ್ರಿವರ್ಣ ದೀಪಗಳಿಂದ ಅಲಂಕರಿಸಲಾಗಿದೆ. ಕಲ್ಲಿನ ರಥ, ವಿಟ್ಲ ದೇವಸ್ಥಾನ, ವಿರೂಪಾಕ್ಷ ದೇವಸ್ಥಾನದ ಗೋಪುರಗಳು ಸಹ ರಾಷ್ಟ್ರಧ್ವಜದ ಬಣ್ಣಗಳಲ್ಲಿ ಬೆಳಗಿದ್ದು, ನೋಡಲು ಭವ್ಯವಾಗಿವೆ.

