ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರ ಬೆಂಗಾವಲು ವಾಹನವನ್ನು ಹಿಂಬಾಲಿಸುತ್ತಿದ್ದ ಕಾರಿನಲ್ಲಿ ಬರೋಬ್ಬರಿ ಸುಮಾರು 1.25 ಕೋಟಿ ರೂಪಾಯಿ ಪತ್ತೆಯಾಗಿದೆ. ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸುವ ವೇಳೆ ಈ ದೊಡ್ಡ ಮೊತ್ತದ ಹಣ ಸಿಕ್ಕಿದೆ.
ಕಾನ್ರಾಡ್ ಸಂಗ್ಮಾ ಅವರು ಅರುಣಾಚಲ ಪ್ರದೇಶದ ತನ್ನ ಪಕ್ಷದ ಅಭ್ಯಥಿಯ ಸಾರ್ವಜನಿಕ ರ್ಯಾಲಿಯಲ್ಲಿ ಭಾಗವಹಿಸಲು ಹೊರಟ್ಟಿದ್ದರು. ಇದನ್ನೂ ಓದಿ:ಸ್ಟಾರ್ ಕ್ರಿಕೆಟಿಗ ದೊಡ್ಡ ಗಣೇಶ, ಸುಮಲತಾ ಜೊತೆ ಬಿಜೆಪಿಗೆ ಎಂಟ್ರಿ
ಇದೇ ವೇಳೆ ಅವರ ಕಾರಿನ ಹಿಂಬದಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ 1 ಕೋಠಿ 25 ಲಕ್ಷ ರೂಪಾಯಿ ಸಿಕ್ಕಿದ್ದು, ಅದು ಖಾಸಗಿ ನಿರ್ಮಾಣ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಹರ್ಷವರ್ಧನ್ ಸಿಂಗ್ ಅವರ ಕಾರು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಟ್ವಿಸ್ಟ್ – A 1 ಆರೋಪಿ ಅರೆಸ್ಟ್!

ಹಣವನ್ನು ಕಾರ್ಮಿಕರಿಗೆ ಪಾವತಿಸಲು ಕಾರಿನಲ್ಲಿ ತೆಗೆದುಕೊಂಡು ಹೋಗಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ-ಶ್ರೀನಿವಾಸ ಪುಜಾರಿಗೆ ಕೋರ್ಟ್ ಸಂಕಷ್ಟ
ಈ ಕಾರು ಸಿಎಂ ಬೆಂಗಾವಲು ಪಡೆಯ ಭಾಗವಾಗಿರಲಿಲ್ಲ, ಆದರೆ ಮೆರವಣೀಗೆಯನ್ನು ಅನುಸರಿಸುತ್ತಿತ್ತು. ಸದ್ಯ ನಗದು ಹಣವನ್ನು ಆದಾಯ ತೆರಿಗೆ ಇಲಾಖೆ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ನೀರು ಕೇಳುವ ನೆಪದಲ್ಲಿ ಮನೆಗೆ – ಗುಂಡು ಹಾರಿಸಿ ದರೋಡೆಗೆ ಯತ್ನ

