ಬೆಂಗಳೂರು: ಹುಬ್ಬಳ್ಳಿ ಎಂಸಿಎ ವಿದ್ಯಾರ್ಥಿ ನೇಹಾ ಹತ್ಯೆ ಪ್ರಕರಣ ಖಂಡಿಸಿ ಗೃಹ ಮಂತ್ರಿ ಜಿ. ಪರಮೇಶ್ವರ್ (G. Parameshwara) ಅವರ ಮನೆಗೆ ಮುತ್ತಿಗರ ಹಾಕಲು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (AVBP) ಇಂದು ಯತ್ನಿಸಿದ್ದಾರೆ.
ಶನಿವಾರ ಬೆಳಗ್ಗೆ ಗೃಹ ಸಚಿವರ ಮನೆಗೆ ಮುತ್ತಿಗರ ಹಾಕಲು ಎಬಿವಿಪಿ ಮುಂದಾಗಿದೆ. ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದೆ. ಸಿಲಿಕಾನ್ ಸಿಡಿಯಲ್ಲೂ ಹತ್ಯೆ ಖಂಡಿಸಿ ಎಬಿವಿಪಿ ಹೋರಾಟ ನಡೆಸಲಿದೆ . ಇದನ್ನೂ ಓದಿ: ನಾಮಪತ್ರ ಸಲ್ಲಿಸಿದ ನಟ ಬಾಲಯ್ಯ – 280.64 ಕೋಟಿ ರೂ ಆಸ್ತಿ ಘೋಷನೆ
ಇನ್ನು ಈ ಪ್ರಕರಣವನ್ನು ಫಾಸ್ಟ್ ಟ್ರ್ಯಕ್ ಕೋರ್ಟ್ಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ರಾಜ್ಯದ್ಯಂತ ಪ್ರತಿಭಟನೆ ನಡೆಯಲಿದೆ. ಸದ್ಯ ಗೃಹಸಚಿವ ಪರಮೇಶ್ವರ್ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿ ಮುತ್ತಿಗೆಗೆ ಹಾಕಲು ಯತ್ನಿಸಿದವರನ್ನು ಪೊಲಿಶರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ನಟ ದರ್ಶನ್ ಇಂದು ಮತ್ತಬ್ಬ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ

