ಹುಬ್ಬಳ್ಳಿ: ಮುಸಾಲ್ಮಾನ ಮುಖಂಡರು ಅವರ ಹಗುಡುಗರಿಗೆ ಬುದ್ದಿ ಹೇಳಬೇಕು ಎಂದು ಪ್ರಮೋದ್ ಮುತಾಲಿಕ್ (Pramod Mutalik) ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ (Hubbali) ಅವರು ಸುದ್ದಿಗಾರೊಂದಿಗೆ ಮಾತನಾಡಿದ್ದಾರೆ. ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಹತ್ಯೆಯಾದ ನೇಹಾ (Neha) ಅವರ ಮನೆಗೆ ಭೇಟಿ ನೀಡಿ, ಪೋಷಕರಿಗೆ ಸಾಂತ್ವಾನ ಹೇಳಿ ಮಾತನಾಡಿದ ಅವರು, ಲವ್ ಜಿಹಾದ್ ಷಡ್ಯಂತ್ರದ ಸಮಗ್ರ ತನಿಖೆಯಾಗಬೇಕು. ಈ ಮಾನಸಿಕತೆ ಎಲ್ಲಿಂದ ಯಾರಿಂದ ಬರುತ್ತಿದೆ? ಇಂತಹ ಕೃತ್ಯಗಳು ಇಲ್ಲಿಗೆ ಕೊನೆಯಾಗಬೆಕು ಎಂದಿದ್ದಾರೆ. ಇದನ್ನೂ ಓದಿ: ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಬಂದ ಕಾರಣ ತಿಳಿಸಿದ ಡಿ ಬಾಸ್
ಆರೋಪಿಯ ಮೊಬೈಲ್ ಸೀಜ್ ಆದ ರಾತ್ರಿಯೇ ಅದರಲ್ಲಿನ ಫೋಟೋ ಹೊರಗೆ ಬಂದಿದೆ. ಸಕಾಋಕ್ಕೆ ಈ ಪ್ರಕರಣದ ದಿಕ್ಕು ತಪ್ಪಿಸಬೇಕಿತ್ತು. ಇಬ್ಬರ ನಡುವೆ ಲವ್ ಇತ್ತು ಎಂದು ಬಿಂಬಿಸಿದವರ ಬಂಧನವಾಗಬೇಕು. ಇದನ್ನೂ ಓದಿ: ಮುರುಘಾ ಶ್ರೀಗೆ ಮತ್ತೆ 4 ತಿಂಗಳು ಜೈಲೇ ಗತಿ
ಮುಸಲ್ಮಾನರು, ಆತನ ಕುಡುಂಬ ಬಹಿಷ್ಕರಿಸುವ ಫತ್ವಾ ಹೊರಡಿಸುತ್ತಿಲ್ಲ. ಕೇವಲ ಗಲ್ಲಿಗೇರಿಸಿ ಎನ್ನುವ ನಾಟಕ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪೂಜಾ ರಮೇಶ್ ಬಿಜೆಪಿಗೆ ಸೇರ್ಪಡೆ

