ಯಾದಗಿರಿ: ದೇಶದ ಯುವಕರಿಗೆ ಕಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಆದರ್ಶವಾಗಿದ್ದರೆ. ಅವರು ಜನರಿಗಾಗಿ ಭಾರತ್ ಜೋಡೋ ಯಾತ್ರೆ ನಡೆಸಿದ್ದಾರೆ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ (Revanth Reddy) ಯಾದಗಿರಿಯಲ್ಲಿ (Yadgir) ಕಾಂಗ್ರೆಸ್ (Congress) ಸಮಾವೇಶದಲ್ಲಿ ಹೇಳಿದ್ದಾರೆ.
ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಅವರು ಮತಯಾಚಿಸಿದ್ದರು. ಇದೇ ವೇಳೆ ಮೋದಿಯವರು 10 ವರ್ಷಗಳ ಕಾಲ ಅಧಿಕಾರ ನಡೆಸಿದ್ದಾರೆ. ಅರದೂ ಅವರು ರೈತರ ಹಿತ ಕಾಪಾಡಿಲ್ಲ. ಮೋದಿಯವರು ಜನರ ನಂಬಿಕೆ ದ್ರೋಹ ಮಾಡಿದ್ದಾರೆ ವಾಗ್ದಾಳಿ ಮಾಡಿದರು. ಇದನ್ನೂ ಓದಿ: ಇದೆಲ್ಲಾ ರಾಜಕೀಯ: ನಾಲ್ಕೈದು ವರ್ಷಗಳ ಕಥೆ ತಂದು ಈಗ ದೂರು ಕೊಟ್ರೆ ಏನರ್ಥ? ರೇವಣ್ಣ ಫಸ್ಟ್ ರಿಯಾಕ್ಷನ್
ಕರ್ನಾಟಕ ರಾಜ್ಯಕ್ಕೆ ಸಹಾಯ ಮಾಡಿಲ್ಲ. ರಾಜ್ಯದಲ್ಲಿ ಬರ ಅವರಿಸಿದ್ರು ಪರಿಹಾರ ನೀಡದೆ ಜನರಿಗೆ ಖಾಲಿ ಚೊಂಬು ನೀಡಿದ್ದಾರೆ. ಸುಪ್ರೀಂ ಕೋರ್ಟ್ ಛೀಮಾರಿ Pಹಾಕಿದ ನಂತರ ಹಣ ಬಿಡುಗಡೆ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬಟ್ಟೆ ತೊಳೆಯುತ್ತಿದ್ದ ಯುವತಿ ಕೊಲೆ- ಗಂಡನ ಮೆಲೆ ಅನುಮಾನ

