ಕಾಜಲ್ ಅಗರ್ವಾಲ್ (Kajal Agrwal) ಅವರು ಸದ್ಯ ‘ಸತ್ಯಭಾಮ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ಲಾಂಚ್ಗೆ ಬಾಲಯ್ಯ ಅವರು ಅತಿಥಿಯಾಗಿ ಬಂದಿದ್ದಾರೆ. ಈ ವೇಳೆ ಅವರು ತಮ್ಮ ಮುಂದಿನ ಸಿನಿಮಾಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಚುನಾವಣೆಯಲ್ಲಿ ಬ್ಯೂಸಿಯಾಗಿದ ಬಾಲಯ್ಯ ‘ನಾನು 50 ದಿನಗಳಿಂದ ಕ್ಯಾಮೆರಾ ಫೇಸ್ ಮಾಡಿಯೇ ಇಲ್ಲ’ ಎಂದು ಹೇಳಿದ್ದಾರೆ.
ಕೆಲವು ದಿನಗಳ ಹಿಂದೆಯೇ ಆಂಧ್ರ ಪ್ರದೇಶದಲ್ಲಿ (Andhra Pradesh) ಚುನಾವಣೆ ನಡೆದಿದೆ. ಹಾಲಿ ಶಾಸಕ, ನಟ ನಂದಮೂರಿ ಬಾಲಕೃಷ್ಣ (Balakrishna) ಅವರು ಕೂಡ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಹಿಂದೂಪುರದಿಂದ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ.

ಚುನಾವಣೆ ನಡೆದ ಬಳಿಕ ಎಲೆಕ್ಷನ್ ರಿಸಲ್ಟ್ಗೆ ಸ್ವಲ್ಪ ದಿನಗಳು ಬಾಕಿ ಇದ್ದವು. ಈ ಸಂದರ್ಭದಲ್ಲಿ ಬಾಲಯ್ಯ ಅವರು ಶೂಟಿಂಗ್ನಲ್ಲಿ ಬ್ಯುಸಿ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅದು ನಿಜವಾಗಿಲ್ಲ. ಚುನಾವಣಾ ಫಲಿತಾಂಶ ಬಂದ ಬಳಿಕವೇ ಅವರು ಕ್ಯಾಮೆರಾ ಎದುರಿಸೋ ನಿರ್ಧಾರ ತೆಗೆದುಕೊಂಡಿದ್ದಾರೆ. ಸದ್ಯ ಅವರು ಇನ್ನು ಸಿನಿಮಾದ ಕಡೆ ಮುಖ ಮಾಡಿಲ್ಲ.

ಚಂದ್ರಬಾಬು ನಾಯ್ಡು ಹಾಗೂ ಪವನ್ ಕಲ್ಯಾಣ್ ಒಟ್ಟಾಗಿ ಆಂಧ್ರ ಪ್ರದೇಶದಲ್ಲಿ ಸರ್ಕಾರ ರಚಿಸಲಿದ್ದಾರೆ ಎನ್ನುವ ಮಾತಿದೆ. ಒಂದೊಮ್ಮೆ ಇದು ನಿಜವಾಗಿ, ಬಾಲಯ್ಯ ಚುನಾವಣೆಯಲ್ಲಿ ಗೆದ್ದರೆ ಅವರಿಗೆ ಸಚಿವ ಸ್ಥಾನ ಸಿಗಲಿದೆ. ಆಗ ಅವರು ಸಿನಿಮಾ ರಂಗದಲ್ಲಿ ಎಷ್ಟು ಆ್ಯಕ್ಟೀವ್ ಆಗಿರುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ. ಬಾಲಯ್ಯ ಅವರು ಆ್ಯಕ್ಷನ್ ಸಿನಿಮಾಗಳ ಮೂಲಕವೇ ಫೇಮಸ್ ಆದವರು. ಅವರ ಮುಂದಿನ ಸಿನಿಮಾದಲ್ಲೂ ಭರ್ಜರಿ ಆ್ಯಕ್ಷನ್ ಇರಲಿದೆ ಎಂದು ಹೇಳಲಾಗುತ್ತಿದೆ.

