ಬೆಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಮತ್ತೆ 4 ದಿನ ಪೊಲೀಸ್ ಕಸ್ಟಡಿಗೆ (Police Custdy) ನೀಡಿ ಎಸಿಎಂಎಂ 42ನೇ ನ್ಯಾಯಾಲಯ (Court) ಆದೇಶ ಕೊಟ್ಟಿದೆ.
ಆರೋಪಿ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ಇಂದು ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಲಾಗಿದ್ದು, ಜೂನ್ 10 ರವರೆಗೆ ಕಸ್ಟಡಿಗೆ ನೀಡಿದೆ. ಎಸ್ಐಟಿ ಪರ ವಕೀಲರು ತನಿಖೆಗೆ ಸಮಯ ಸಾಕಾಗಿಲ್ಲ. ಇದನ್ನೂ ಓದಿ: ಬರ್ತ್ಡೇ ಪಾರ್ಟಿಗೆಂದು ಕರೆದು ಸ್ನೇಹಿತನ ಕೊಲೆ
ಸದ್ಯ ಅವರ ಮೊಬೈಲ್ ವಿಚಾರವಾಗಿ ಮಾಹಿತಿ ಇನ್ನು ಲಭ್ಯವಾಗಿಲ್ಲ. ಪ್ರಮುಕವಾಗಿ ಟೈಂ ಶಾರ್ಟೆಜ್ ಆಗಿದೆ. ಮುಖ್ಯವಾಗಿ ವಿದೇಶದಲ್ಲಿ ಇದ್ದಾಗ ಹಣ ಹೇಗೆ ಸಂದಾಯ ಆಗಿದೆ ಗೊತ್ತಾಗಿಲ್ಲ. ಇವರು ತಲೆಮರೆಸಿಕೊಂಡಿದ್ದ ಆರೋಪಿಯಾಗಿದ್ದು, ಇವರಿಗೆ ಹಣ ನೀಡಿದವರು ಯಾರು ಗೊತ್ತಾಗಬೇಕು. ಇದನ್ನೂ ಓದಿ: ಉತ್ತರಾಖಂಡ ಹಿಮಪಾತ ಕೇಸ್- ಬೆಂಗಳೂರಿನ ಬಹುರಾಷ್ಟ್ರೀಯ ಕಂಪನಿ ಉದ್ಯೋಗಿ ಸಾವು
ಕೆಲವು ಸಂತ್ರಸ್ತೆಯರು, ಸಾಕ್ಷಿಗಳನ್ನು ಮುಖಾಮುಖಿ ಮಾಡಬೇಕಾಗಿದೆ. ಏನು ಕೇಳಿದ್ರೂ ಸರಿಯಾದ ಉತ್ತರವನ್ನು ನೀಡಿಲ್ಲ. ನಾನು ಏನು ಮಾಡಿಲ್ಲ ಅಂತ ಪ್ರಜ್ವಲ್ ಹೇಳುತ್ತಾ ಇದ್ದಾರೆ. ಹೊಟ್ಟೆ ನೋವು ಅಂತ ಆಸ್ಪತ್ರೆಗೆ ಹೋಗಿದ್ದರು ಹೀಗಾಗಿ ಜೂನ್ 10 ರ ತನಕ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.ಈ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಮತ್ತೆ 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಇದನ್ನೂ ಓದಿ: ಎನ್ಡಿಎ ಮೈತ್ರಿಕೂಟದ ಸಂಖ್ಯೆ 303ಕ್ಕೆ ಏರಿಕೆ!

