ಬೆಂಗಳೂರು: ನಟ ದರ್ಶನ್ (Darshan) ಕಾಂಗ್ರೆಸ್ ಪರ ಚುನಾವಣೆಯಲ್ಲಿ ಕೆಲಸ ಮಾಡಿದರು ಎಂದು ಅವರನ್ನು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಪ್ರಶ್ನಿಸಿ ಕಿಡಿಕಾರಿದ್ದಾರೆ.
ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಪ್ರತಿಕ್ರಿಯಿಸದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Congress Givernment) ಅಸ್ತಿತ್ವಕ್ಕೆ ಬಂದ ಮೇಲೆ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರ ಕೊಲೆಗಡುಕರ ಪರ ಇದೆ.
ಕೊಲೆಗಡುಕರಿಗೆ ರಾಜ್ಯದಲ್ಲಿ ಭಯ ಇಲ್ಲದರ್ಶನ್ ಇರುವ ಠಾಣೆಗೆ ರಕ್ಷಣೆ ಕೊಡಲಾಗಿದೆ. ಜನರಿಗೊಂದು ಕಾನೂನು, ದೊಡ್ಡವರಿಗೊಂದು ಕಾನೂನು, ಕಾಂಗ್ರೆಸ್ ಕಾರ್ಯಕರ್ತರಿಗೊಂದು ಕಾನೂನು ಎಂಬ ಸಂದೇಶವನ್ನು ಸರ್ಕಾರ ರವಾನಿಸಿದೆ. ಕಾನೂನು ರೀತಿಯಲ್ಲಿ ಸರ್ಕಾರ ಕ್ರಮ ವಹಿಸಲಿ. ಕೊಲೆಗಡುಕರ ರಕ್ಷಣೆಯನ್ನು ಸರ್ಕಾರ, ಪೊಲೀಸರು ಮಾಡಬಾರದು ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವರಾಗಿ ಬಂದ ಕುಮಾರಸ್ವಾಮಿಗೆ ಆಪ್ಯಲ್ ಮೂಸಂಬಿ ಹಾರ ಹಾಕಿ ಅದ್ದೂರಿ ಸ್ವಾಗತ

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ವಿಚಾರವಾಗಿ ಮಾತನಾಡಿ, ಈ ಕೇಸಿನ ಮಾಹಿತಿ ಗೊತ್ತಿಲ್ಲ. ನಾನು ಮಾಧ್ಯಮದ ಮೂಲಕ ಅಷ್ಟೇ ನೋಡಿದ್ದೇನೆ. ಆದರೆ ಯಡಿಯೂರಪ್ಪ ಅವರ ಸುದೀರ್ಘವಾದ ರಾಜಕಾರಣ ನೋಡಿದ್ದೇನೆ. ಸರ್ಕಾರದ ಪಾತ್ರದ ಬಗ್ಗೆ ಈ ಕೇಸ್ ವಿಚಾರವಾಗಿ ಗೊತ್ತಿಲ್ಲ. ನ್ಯಾಯಾಲಯ ನೆಲದ ಕಾನೂನು ಎತ್ತಿ ಹಿಡಿಯಲಿದೆ. ಯಡಿಯೂರಪ್ಪ ವಿರುದ್ಧದ ಪ್ರಕರಣ ಜನ ಗಮನಿಸುತ್ತಿದ್ದಾರೆ ಎಂದರು.ಇದನ್ನೂ ಓದಿ: ಕೋಲ್ಕತ್ತಾ ಮಾಲ್ನಲ್ಲಿ ಅಗ್ನಿ ಅವಘಡ – ಹಲವು ಮಂದಿ ಮಾಲ್ನಲ್ಲಿ ಸಿಲುಕಿರುವ ಶಂಕೆ
ಈ ಹಿಂದೆ ಯಡಿಯೂರಪ್ಪ ಅವರ ವಿರುದ್ಧ ಈ ತರಹದ ಯಾವುದೇ ಆರೋಪ ಕೇಳಿ ಬಂದಿರಲಿಲ್ಲ. ಆದರೆ ಈಗ ಯಾಕೆ ಈ ರೀತಿಯ ಆರೋಪಗಳು ಬರುತ್ತಿವೆ ಎಂಬುದನ್ನು ಜನ ಗಮನಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಎಲ್ಲರ ಮೇಲೆ ಕೇಸ್ ಹಾಕುವಂತಹ ಪ್ರಕರಣಗಳನ್ನು ಕೂಡಾ ಜನ ಗಮನಿಸುತ್ತಿದ್ದಾರೆ ಎಂದು ಶೋಭಾ ಹೇಳಿದರು. ಇದನ್ನೂ ಓದಿ: ಕೇಂದ್ರ ಸಚಿವರಾಗಿ ಬಂದ ಕುಮಾರಸ್ವಾಮಿಗೆ ಆಪ್ಯಲ್ ಮೂಸಂಬಿ ಹಾರ ಹಾಕಿ ಅದ್ದೂರಿ ಸ್ವಾಗತ

