ನವದೆಹಲಿ: ಉತ್ತರ ಭಾರತದಲ್ಲಿ ದಾಖಲೆ ಪ್ರಮಾಣದಲ್ಲಿ ತಾಪಮಾನ (Temperature) ಹೆಚ್ಚುತ್ತಿದ್ದು ಕಳೆದ 72 ಗಂಟೆಗಳಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (New Delhi) ಬಿಸಿ ಗಾಳಿಗೆ 5 ಮತ್ತು ನೋಯ್ಡಾದಲ್ಲಿ ಕಳೆದ 24 ಗಂಟೆಗಳಲ್ಲಿ 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಬಿಸಿಗಾಳಿಯಿಂದ ಪೀಡಿತರಾದ ಸುಮಾರು 36 ಜನರನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ (Ram Manohar Lohia Hospital) ಮತ್ತು ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ತಲಾ ಒಬ್ಬ ಸಾವು ವರದಿಯಾಗಿದೆ. ಲೋಕನಾಯಕ ಆಸ್ಪತ್ರೆಯಲ್ಲಿ ಮೂರು ಜನ ಸಾವನ್ನಪ್ಪಿದ್ದಾರೆ. ಜೂನ್ 16 ರಂದು ಶಾಖದ ಹೊಡೆತದಿಂದ ನಿಧನರಾದ ಕಾರ್ ಮೆಕ್ಯಾನಿಕ್ ಜೂನ್ 15 ರಂದು 106 ಡಿಗ್ರಿಗಳಷ್ಟು ತೀವ್ರ ಜ್ವರದಿಂದ ಬಳಲುತ್ತಿದ್ದರು ಎಂದು ವೈದ್ಯರು ಹೇಳಿದ್ದಾರೆ. ಇದನ್ನೂ ಓದಿ: ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ…! ಎಲ್ಲೆಲ್ಲಿ?
ದೆಹಲಿಯಲ್ಲಿ ಸಾವನ್ನಪ್ಪಿದ ಐವರನ್ನು ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು. ಈ ಪೈಕಿ ಮೂವರು ರೋಗಿಗಳು 65 ವರ್ಷಕ್ಕಿಂತ ಮೇಲ್ಪಟ್ಟವರು. ಈ ಬಗ್ಗೆ ಎಲ್ಎನ್ಜೆಪಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಸುರೇಶ್ ಕುಮಾರ್ ಮಾತನಾಡಿ, ಶಾಖದ ಅಲೆಯಿಂದ ಬಳಲುತ್ತಿರುವ ಹೆಚ್ಚಿನ ಜನರು ಕಾರ್ಮಿಕರು ಅಥವಾ ರಿಕ್ಷಾ ಚಾಲಕರು ಮತ್ತು ಅವರಲ್ಲಿ ಹೆಚ್ಚಿನವರು 60 ವರ್ಷಕ್ಕಿಂತ ಮೇಲ್ಪಟ್ಟವರು. ಈ ರೋಗಿಗಳಲ್ಲಿ ಹೆಚ್ಚಿನವರು ಎಲೆಕ್ಟ್ರೋಲೈಟ್ ಕೊರತೆ, ಶಾಖದ ಹೊಡೆತ, 105 ಡಿಗ್ರಿಗಿಂತ ಹೆಚ್ಚಿನ ಜ್ವರ ಮತ್ತು ವಿಪರೀತ ನಿರ್ಜಲೀಕರಣದಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ಇಂದಿನಿಂದ 5 ದಿನಗಳ ಕಾಲ ಮಳೆಯ ಮುನ್ಸೂಚನೆ- ಕರಾವಳಿ ,ಉತ್ತರ ಕನ್ನಡ ಭಾಗದಲ್ಲಿ ಇಂದು ಯೆಲ್ಲೋ ಆಲರ್ಟ್ ಘೋಷಣೆ
ದೆಹಲಿಯ ವಿವಿಧ ಖಾಸಗಿ ಆಸ್ಪತ್ರೆಗಳು ಮತ್ತು ಸಣ್ಣ ಚಿಕಿತ್ಸಾಲಯಗಳಲ್ಲಿ ಶಾಖದ ಹೊಡೆತದಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆ ಸರಾಸರಿ ಹೆಚ್ಚುತ್ತಿದೆ. ಪಹರ್ಗಂಜ್ನಲ್ಲಿ ಕ್ಲಿನಿಕ್ ನಡೆಸುತ್ತಿರುವ ಡಾ.ಗೌರವ್ ಕುಮಾರ್ ಪ್ರಕಾರ, ಕಳೆದ ತಿಂಗಳಲ್ಲಿ ಬಿಸಿಗಾಳಿಯಿಂದ ಬಳಲುತ್ತಿರುವವರ ಸಂಖ್ಯೆ ಎರಡು ಪಟ್ಟು ಹೆಚ್ಚಾಗಿದೆ. ಹಾನಿಗೊಳಗಾದವರಲ್ಲಿ ಹೆಚ್ಚಿನವರು ರಿಕ್ಷಾ ಚಾಲಕರು ಅಥವಾ ದಿನಗೂಲಿ ಕಾರ್ಮಿಕರಾಗಿದ್ದಾರೆ. ಇದನ್ನೂ ಓದಿ: ಶಾಲೆಗಳಲ್ಲಿ ಶಿಶುಪಾಲನ ಕೇಂದ್ರಗಳ ಪ್ರಾರಂಭಕ್ಕೆ ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

