ತುಮಕೂರು: ಜಿಲ್ಲೆಯಲ್ಲಿನ ಮಕ್ಕಳ ಮಾರಾಟ ಜಾಲವನ್ನು ಭೇದಿಸಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಆರೋಪಿಗಳನ್ನು ಗುಬ್ಬಿ (Gubbi) ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ತುಮಕೂರಿನ (Tumakur) ಖಾಸಗಿ ನರ್ಸಿಂಗ್ ಕಾಲೇಜಿನ ಮ್ಯಾನೇಜರ್ ಮಹೇಶ್ (39), ಆಸ್ಪತ್ರೆಯ ಸ್ಟಾಪ್ ನರ್ಸ್ಗಳಾದ ಪೂರ್ಣಿಮಾ (39) ಹಾಗೂ ಸೌಜನ್ಯ (48), ಚಿಕ್ಕನಾಯಕನಹಳ್ಳಿ ಮೂಲದ ಫಾರ್ಮಸಿಸ್ಟ್ ಮಹಬೂಬ್ ಷರೀಪ್ (52), ಟ್ಯಾಟೋ ಹಾಕುತ್ತಿದ್ದ ಕೆ.ಎನ್. ರಾಮಕೃಷ್ಣಪ್ಪ (53), ಹನುಮಂತರಾಜು (45) ಬಂಧಿತ ಆರೋಪಿಗಳು. ಬಂಧಿತರಿಂದ 1 ಕಾರು, 50 ಸಾವಿರ ನಗದು, 4 ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಪ್ರಕರಣವೇನು?
ಜೂ.9ರಂದು ಲ್ಲಿ 11 ತಿಂಗಳ ರಾಕಿ ಎಂಬ ಗಂಡು ಮಗು ಅಪಹರಣವಾಗಿತ್ತು. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಪಹರಣ ಪ್ರಕರಣ ಬೆನ್ನತ್ತಿದ್ದು, ಗ್ಯಾಂಗ್ನಿಂದ 9 ಮಕ್ಕಳನ್ನು ಮಾರಾಟ ಮಾಡಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಮಾಹಿತಿ ಆಧರಿಸಿ ಆರೋಪಿಗಳನ್ನು ಬೆನ್ನತ್ತಿದ ಪೊಲೀಸರಿಗೆ ಇದೊಂದು ಮಕ್ಕಳ ಮಾರಾಟ ಜಾಲ ಎಂದು ತಿಳಿದಿದೆ. ಬಳಿಕ ಈ ಜಾಲದಲ್ಲಿ ತುಮಕೂರಿನ ಖಾಸಗಿ ಆಸ್ಪತ್ರೆ ಸಿಬ್ಬಂದಿ ಭಾಗಿಯಾಗಿರುವ ಬಗ್ಗೆ ಮಾಹಿತಿ ದೊರತಿದೆ. ಇದನ್ನೂ ಓದಿ: ಮುಂದಿನ ಮೂರು ಗಂಟೆ ಭಾರೀ ಮಳೆಯ ಮುನ್ಸೂಚನೆ
ಇನ್ನೂ ಈ ಜಾಲದಲ್ಲಿ ಭಾಗಿಯಾಗಿದ 5 ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳ ವಿಚಾರಣೆ ನಡೆಸಿದಾಗ ತಾವು ಮಾಡುತ್ತಿದ್ದ ಕೃತ್ಯದ ಬಗ್ಗೆ ಬಾಯಿ ಬಿಟ್ಟಿದ್ದಾರೆ. ವಿವಾಹ ಪೂರ್ವ ಗರ್ಭಧರಿಸಿದ, ಅಕ್ರಮ ಸಂಬಂಧದಿಂದ ಜನಿಸಿದ ಮಕ್ಕಳನ್ನು ಮಾರಾಟ ಮಾಡುತ್ತಿದ್ದರು. ಅಲ್ಲದೆ ಬಡವರ ಮಕ್ಕಳನ್ನು ಅಪಹರಿಸಿ ಮಾರಾಟ ಮಾಡುತ್ತಿದ್ದರು ಏಂದು ಬಾಯಿಬಿಟ್ಟಿದ್ದಾರೆ. ಮಧುಗಿರಿಯ ಗೊಲ್ಲಹಳ್ಳಿ, ದಾವಣಗೆರೆ ಮತ್ತು ಮಂಡ್ಯ ಸೇರಿದಂತೆ ಹಲವು ಕಡೆ ಮಕ್ಕಳನ್ನು ಮಾರಾಟ ಮಾಡಿದ್ದರು.
ಸದ್ಯ 9 ಮಕ್ಕಳ ಪೈಕಿ 4 ಮಕ್ಕಳನ್ನು ದತ್ತು ಸ್ವೀಕಾರ ಕೇಂದ್ರದಲ್ಲಿ ಇರಿಸಲಾಗಿದೆ. ಮಾರಾಟವಾಗಿದ್ದ ಒಂದು ಮಗು ಮರಳಿ ಪೋಷಕರ ಮಡಿಲು ಸೇರಿದೆ. ಇದನ್ನೂ ಓದಿ: ಡೆಂಗ್ಯೂ ನಾಗಲೋಟಕ್ಕೆ ಬ್ರೇಕ್ ಹಾಕಲು ಸರ್ಕಾರ ಸಜ್ಜು…!