ಬೆಳಗಾವಿ: ಶೈಕ್ಷಣಿಕ ವರ್ಷ ಈಗಾಗಲೇ ಆರಂಭವಾಗಿದ್ದು, ಶಕ್ತಿ ಯೋಜನೆಯಿಂದ (Shakti Yojane) ಸಾರಿಗೆ ಬಸ್ಗಳು ತುಂಬಿ ತುಳುಕುತ್ತಿದ್ದು, ವಿದ್ಯಾರ್ಥಿಗಳಿಗೆ (Student) ಜಾಗವಿಲ್ಲದಂತಾಗಿದ್ದು, ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
2024-25 ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವರ್ಷ ಈಗಾಗಲೇ ಆರಂಭವಾಗಿದ್ದು, ಶಾಲಾ, ಕಾಲೇಜುಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು (Students) ಶಾಲೆಗಳತ್ತ ಮುಖ ಮಾಡಿದ್ದಾರೆ. ಸಾಕಷ್ಟು ವಿದ್ಯಾರ್ಥಿಗಳು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶದಲ್ಲಿ ಶಾಲಾ, ಕಾಲೇಜುಗಳಿಗೆ ತೆರಳಲು ಸರ್ಕಾರಿ ಬಸ್ಗಳನ್ನು ಅವಲಂಬಿಸಿದ್ದಾರೆ. ಆದರೆ ಸದ್ಯ ಇದೇ ಸಾರಿಗೆ ಬಸ್ಗಳು ಶಕ್ತಿ ಯೋಜನೆಯಿಂದ (Shakti scheme) ತುಂಬಿ ತುಳುಕುತ್ತಿದ್ದು, ವಿದ್ಯಾರ್ಥಿಗಳಿಗೆ ಜಾಗವಿಲ್ಲದಂತಾಗಿದೆ. ಇದನ್ನೂ ಓದಿ: ಜಮ್ಮು ಕಾಶ್ಮೀರದ ದೋಡಾದಲ್ಲಿ ಇಬ್ಬರು ಉಗ್ರರ ಎನ್ಕೌಂಟರ್

ಇನ್ನು ಸರಿಯಾದ ಸಮಯಕ್ಕೆ ಬಸ್ಗಳು ಬಾರದ ಹಿನ್ನಲೆ ನಿಗದಿತ ಸಮಯಕ್ಕೆ ತಲುಪಲಾಗುತ್ತಿಲ್ಲ. ಹೀಗಾಗಿ ಬಸ್ ಸಂಖ್ಯೆ ಹೆಚ್ಚಳ ಮಾಡುವಂತೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಮಾಡಲಾಗಿದೆ. ಶಕ್ತಿ ಯೋಜನೆಯಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಸ್ಯೆ ಆಗುತ್ತಿದೆ. ಶಕ್ತಿ ಯೋಜನೆ ಅನುಗುಣವಾಗಿ ಬಸ್ ಸಂಖ್ಯೆ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ಮಾಡಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿ ಅನುಗುಣವಾಗಿ ಬಸ್ ಪಾಸ್ ವಿತರಣೆ ಮಾಡಬೇಕು. ಸರಿಯಾದ ಸಮಯಕ್ಕೆ ತರಗತಿಗಳಿಗೆ ತೆರಳಲು ಆಗುತ್ತಿಲ್ಲ. ಶಾಲಾ ತರಗತಿಗಳು ಪ್ರಾರಂಭವಾದರೂ ಬಸ್ ಪಾಸ್ ವಿತರಣೆ ಮಾಡಿಲ್ಲ. ನೂರಾರು ರೂ. ಖರ್ಚು ಮಾಡಿ ಶಾಲಾ ಕಾಲೇಜುಗಳಿಗೆ ಬರುತ್ತಿದ್ದಾರೆ. ಹೀಗಾಗಿ ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ – ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್
ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ: ಬಸ್ ಹೆಚ್ಚಳಕ್ಕೆ ಆಗ್ರಹ
ಅದೇ ರೀತಿಯಾಗಿ ಗದಗ ನಗರದ ಹಳೆಯ ಡಿಸಿ ಕಚೇರಿ ಬಳಿ ಮಾನವ ಸರಪಳಿ ನಿರ್ಮಿಸಿ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಬಾಲಾ ಬಾದಾಮಿ ರಸ್ತೆ ತಡೆದು ಎಬಿವಿಪಿ ವತಿಯಿಂದ ಬೃಹತ್ ಪ್ರತಿಭಟನೆ ಮಾಡಲಾಗಿದೆ. ಪ್ರತಿಭಟನೆಯಿಂದಾಗಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು.
ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಹೆಚ್ಚುವರಿ ಬಸ್ ಕಲ್ಪಿಸಿ ಮಕ್ಕಳಿಗೆ ಅನುಕೂಲವಾಗುವಂತೆ ಎನ್ಡಬ್ಲ್ಯು ಕೆಎಸ್ಆರ್ಟಿಸಿ ವಿಭಾಗ ನಿಯಂತ್ರಕರಿಗೆ ಮನವಿ ಸಲ್ಲಿಸಲಾಗಿದೆ. ಶೈಕ್ಷಣಿಕ ವರ್ಷದ ಅನುಗುಣವಾಗಿ ಬಸ್ ಸೌಲಭ್ಯ ಕಲ್ಪಿಸಬೇಕು. ಸುಗಮ ಸಂಚಾರಕ್ಕೆ, ವಿದ್ಯಾರ್ಥಿಗಳ ಅನುಕೂಲಕ್ಕೆ ಬಸ್ ಸಂಖ್ಯೆ ಹೆಚ್ಚಳಕ್ಕೆ ಆಗ್ರಹಿಸಲಾಗಿದೆ. ಬಸ್ ಪಾಸ್ ನೀಡುವಲ್ಲಿ ವಿಳಂಬ ಮಾಡದೇ ಆದಷ್ಟು ಬೇಗ ವಿತರಿಸುವಂತೆ ಮನವಿ ಮಾಡಲಾಗಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ಶಾಕ್ – ಜಾಮೀನು ಅರ್ಜಿ ವಜಾ

