ಬೆಂಗಳೂರು: ಕರ್ನಾಟಕ ಕರಾವಳಿ ಹಾಗೂ ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಟೆಕ್ಕಿ ಆತ್ಮಹತ್ಯೆಗೆ ಶರಣು
ಲಿಂಗನಮಕ್ಕಿ, ಕದ್ರಾ, ಸಿದ್ದಾಫುರ, ಶೃಂಗೇರಿ, ಕುಂದಾಪುರ, ಮಂಕಿಯಲ್ಲಿ ಭಾರಿ ಮಳೆಯಾಗಿದೆ. ಕಾರ್ಕಳ, ಶಿರಾಲಿ, ಭಾಗಮಂಡಲ, ಕುಮಟಾ, ಹೊನ್ನಾವರ, ಕೊಪ್ಪ, ಜಯಪುರ, ಹುಂಚದಕಟ್ಟೆ, ಕೊಟ್ಟಿಗೆಹಾರ, ಗೋಕರ್ಣ, ಧರ್ಮಸ್ಥಳ, ಲೋಂಡಾ, ಕಳಸ, ಕೋಟ, ಯಲ್ಲಾಪುರ, ಬೆಳ್ತಂಗಡಿ, ತ್ಯಾಗರ್ತಿ, ಉಪ್ಪಿನಂಗಡಿಯಲ್ಲಿ ಭಾರೀ ಮಳೆಯಾಗಿದ್ದು, ರಸ್ತೆ ಮತ್ತು ಮನೆಗಳು ಜಲಾವೃತವಾಗಿವೆ. ಇದನ್ನೂ ಓದಿ: ಹಾಲು ಉತ್ಪಾದಕರಿಗೆ 2 ರೂ. ಕಡಿತಗೊಳಿಸಿ ಕೋಚಿಮುಲ್ ರೈತರಿಗೆ ಶಾಕ್
ಸುಳ್ಯ, ಎನ್ಆರ್ಪುರ, ನಾಪೊಕ್ಲು, ಬಾಳೆಹೊನ್ನೂರು, ಮಾಣಿ, ಮಂಗಳೂರು, ಸೋಮವಾರಪೇಟೆ, ಪುತ್ತೂರು, ಕಾರವಾರ, ಪಣಂಬೂರು, ಪೊನ್ನಂಪೇಟೆ, ಅಜ್ಜಂಪುರ, ಹಳಿಯಾಳ, ಮುಲ್ಕಿ, ಕಲಘಟಗಿ, ಚಿಂತಾಮಣಿ, ತರೀಕೆರೆ, ಕುಶಾಲನಗರ, ಮಾಗಡಿ, ಯುಗಟಿ, ಕುಂದಗೋಳ, ಬೇಲೂರು, ಅರಕಲಗೂಡು, ತುಮಕೂರು, ಮದ್ದೂರು, ಭದ್ರಾವತಿ, ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಷ್ಣಾಂಶ ದಾಖಲಾಗಿದೆ. ಇದನ್ನೂ ಓದಿ: UK General Elections 2024: ರಿಷಿ ಸುನಕ್ಗೆ ಸೋಲು ಸಾಧ್ಯತೆ

