– ಬಾಂಬರ್ಗಳಿಗೆ ತಮಿಳುನಾಡಿನಲ್ಲಿ ತರಬೇತಿ ನೀಡಿದೆ ಎಂದು ನಿಮಗೆ ಹೇಳಿದ್ಯಾರು? – ಹೈಕೋರ್ಟ್ ತರಾಟೆ
ಚೈನೈ: ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ (Rameswaram Cafe Blast) ಬಾಂಬ್ ಸ್ಫೋಟಿಸಿದ ಆರೋಪಿಗಳು ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದರು ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮುದ್ರಾಸ್ ಹೈಕೋರ್ಟ್ (Madras High Court) ತೀವ್ರ ಅಸಮಧಾನ ವ್ಯಕ್ತಪಡಿಸಿದೆ.
ಬಾಂಬರ್ಗಳು ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದರು ಎನ್ನುವ ಹೇಳಿಕೆ ವಿರುದ್ಧ ಸ್ಥಳೀಯ ನಿವಾಸಿಯೊಬ್ಬರು ಮಧುರೈ ಸಿಟಿ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದರು. ಎಫ್ಐಆರ್ ರದ್ದು ಕೋರಿ ಶೋಭಾ ಕರಂದ್ಲಾಜೆ (Shobha Karandlaje) ಮದ್ರಾಸ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಗುರುವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಜಿ.ಜಯಚಂದ್ರನ್ ಸರಣಿ ಪ್ರಶ್ನೆಗಳ ಮೂಲಕ ಶೋಭಾ ಕರಂದ್ಲಾಜೆ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ, ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಅಸಂಬದ್ಧ ಹೇಳಿಕೆ ನೀಡುವುದು ಸರಿಯಲ್ಲ ಎಂದು ಕೋರ್ಟ್ ಹೇಳಿದೆ. ಇದನ್ನೂ ಓದಿ: ಜೈಲಿನಲ್ಲಿ ದರ್ಶನ್ ಸ್ಥಿತಿ ಕಂಡು ಕಣ್ಣೀರು ಹಾಕಿದ ಮಗ ವಿನೀಶ್
ಬಾಂಬರ್ಗಳಿಗೆ ತಮಿಳುನಾಡಿನಲ್ಲಿ ತರಬೇತಿ ನೀಡಲಾಗಿದೆ ಎಂದು ಸಾರ್ವಜನಿಕವಾಗಿ ಏಕೆ ಹೇಳಿದ್ದೀರಿ? ಎನ್ಐಎ ಚೆನ್ನೈನಲ್ಲಿ ಶೋಧ ನಡೆಸುವ ಮುನ್ನವೇ ನೀವು ಹೇಳಿಕೆ ನೀಡಿದ್ದೀರಿ. ಇದರರ್ಥ ನೀವು ಸತ್ಯಗಳ ಬಗ್ಗೆ ತಿಳಿದಿರುತ್ತೀರಿ. ತರಬೇತಿ ಪಡೆದ ವ್ಯಕ್ತಿಗಳು ಯಾರು? ಅವರಿಗೆ ತರಬೇತಿ ನೀಡಿದವರು ಮತ್ತು ಅವರು ಏನು ಮಾಡಿದ್ದಾರೆಂದು ನಿಮಗೆ ತಿಳಿದಿದೆ. ಅಪರಾಧದ ಬಗ್ಗೆ ನಿಮಗೆ ಸ್ವಲ್ಪ ಮಾಹಿತಿ ಸಿಕ್ಕಿದ್ದರೆ, ನೀವು ಅದನ್ನು ಪೊಲೀಸರಿಗೆ ಬಹಿರಂಗಪಡಿಸಬೇಕು. ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ಸಚಿವರು ಅದನ್ನು ಮಾಡಿಲ್ಲ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ:ಹೊಟ್ಟೆ ಕಿಚ್ಚಿನಿಂದ ಇಲ್ಲಸಲ್ಲದ ಆರೋಪ: ಸಿದ್ದರಾಮಯ್ಯ
ಈ ವೇಳೆ ವಾದ ಮಂಡಿಸಿದ ಸರ್ಕಾರಿ ವಕೀಲ ಕೆಎಂಡಿ ಮುಹಿಲನ್, ಕರಂದ್ಲಾಜೆ ಅವರು ನೀಡಿರುವ ಸಂದರ್ಶನದ ವೀಡಿಯೋ ತುಣುಕನ್ನು ವೀಕ್ಷಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಪ್ರಕರಣದಲ್ಲಿ ತಮಿಳುನಾಡು ಭಾಗಿಯಾದ ಬಗ್ಗೆ ಎನ್ಐಎ ಇಲ್ಲಿಯವರೆಗೆ ಏನನ್ನೂ ಉಲ್ಲೇಖಿಸಿಲ್ಲ. ಆದರೆ ಯಾವುದೇ ಆಧಾರವಿಲ್ಲದೆ ಸಚಿವರು ಸಾರ್ವಜನಿಕವಾಗಿ ಇಂತಹ ಹೇಳಿಕೆಗಳನ್ನು ನೀಡಲು ಮುಂದಾಗಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ:ಸೇನೆ ಮೇಲೆ ದಾಳಿ – ಬೆದರಿಸಿ ಅಡುಗೆ ಮಾಡುವಂತೆ ಗ್ರಾಮಸ್ಥರಿಗೆ ಒತ್ತಾಯಿಸಿದ್ದ ಉಗ್ರರು
ಶೋಭಾ ಕರಂದ್ಲಾಜೆ ಪರ ವಾದ ಮಂಡಿಸಿದ ವಕೀಲರು, ಪ್ರಕರಣ ರಾಜಕೀಯ ಪ್ರೇರಿತ. ದುರುದ್ದೇಶದಿಂದ ದೂರು ದಾಖಲಿಸಿದೆ. ಎಫ್ಐಆರ್ ರದ್ದು ಮಾಡುಬೇಕು ಎಂದು ಮನವಿ ಮಾಡಿದರು. ಬಳಿಕ ನ್ಯಾಯಧೀಶರು ಪ್ರಕರಣದ ವಿಚಾರಣೆಯನ್ನು ಜು.12 ಕ್ಕೆ ಮುಂದೂಡಿಕೆ ಮಾಡಿದರು. ಇದನ್ನೂ ಓದಿ:ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದ ನಿವೃತ್ತ ಎಂಜಿನಿಯರ್ ಸೇರಿದಂತೆ 13 ಅಧಿಕಾರಿಗಳಿಗೆ ಲೋಕಾ ದಾಳಿ

