ಬೆಂಗಳೂರು: ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ, ವಿಧಾನಸೌಧ ಎದುರೇ ಬೈಕ್ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿರುವ ಘಟನೆ ಬುಧವಾರ ನಡೆದಿದೆ. ಸದ್ಯ ಯುವಕನನ್ನು ಚಳ್ಳಕೆರೆ ಮೂಲದ ಪೃತ್ವಿರಾಜ್ ಎಂದು ಗುರುತಿಸಲಾಗಿದ್ದು, ವಿಧಾನಸೌಧ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಚಳ್ಳಕೆರೆ ಮೂಲದ ಪೃತ್ವಿರಾಜ್ ಎಂಬ ಯುವಕ ಟ್ರಕ್ಕಿಂಗ್ ಹೋಗಿ ಮಿಸ್ಸಾಗಿದ್ದ. ಈ ಹಿನ್ನಲೆ ಗಾಬರಿಗೊಂಡ ಆತನ ತಾಯಿ ಚಳ್ಳಕೆರೆ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಪೊಲೀಸರು ಪೃಥ್ವಿ ತಾಯಿಯನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನಲೆ ನನ್ನ ತಾಯಿಯನ್ನು ಬೈದಿದ್ದಕ್ಕೆ ಬೇಸರಗೊಂಡ ಪೃತ್ವಿರಾಜ್, ವಿಧಾನಸೌಧದ ಮುಂದೆಯೇ ಬೈಕ್ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾನೆ ಎನ್ನಲಾಗಿದೆ. ಈ ಘಟನೆ ಕುರಿತು ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.

