ವಾರಣಾಸಿ: ಪ್ರೀತಿಸುತ್ತಿದ್ದ ಹುಡಗಿಯ ಜೊತೆ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ತಂದೆ-ತಾಯಿ ಹಾಗೂ ಸಹೋದರನನ್ನು ಬರ್ಬರವಾಗಿ ಕೊಂದಿರುವುದಾಗಿ ಒಪ್ಪಿಕೊಂಡ 15 ವರ್ಷದ ಬಾಲಕನನ್ನು ಗಾಜಿಪುರ ಪೊಲೀಸರು ಮಂಗಳವಾರ ಮಧ್ಯರಾತ್ರಿ ಘಾಜಿಪುರ ಜಿಲ್ಲೆಯ ನಂದಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಸುಮ್ಹಿಕಲಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಬಾಲಾಪರಾಧಿಯನ್ನು ಬಂಧಿಸಲಾಗಿದ್ದು, ಆತನ ತಂದೆ ಮುನ್ಷಿ ಬಿಂದ್ (45), ತಾಯಿ ದೇವಂತಿ ಬಿಂದ್(40) ಮತ್ತು ಸಹೋದರನ ಕತ್ತು ಸೀಳಲು ಬಳಸಿದ್ದ ಹರಿತವಾದ ಆಯುಧವನ್ನು ವಶಪಡಿಸಿಕೊಂಡಿರುವುದಾಗಿ ಎಂದು ಗಾಜಿಪುರ ಎಸ್ಪಿ ಓಂವಿರ್ ಸಿಂಗ್ ಮಂಗಳವಾರ ತಿಳಿಸಿದ್ದಾರೆ.ಇದನ್ನೂ ಓದಿ: ಹೊಟ್ಟೆ ಕಿಚ್ಚಿನಿಂದ ಇಲ್ಲಸಲ್ಲದ ಆರೋಪ: ಸಿದ್ದರಾಮಯ್ಯ
ಹಲವು ದಿನಗಳ ಹಿಂದೆ ಮೂವರನ್ನು ಕೊಲ್ಲಲು ನಿರ್ಧರಿಸಿದ್ದೆ, ಆದರೆ ಸಾಧ್ಯವಾಗಲಿಲ್ಲಎಂದು ಬಾಲಕ ಪೊಲೀಸರಿಗೆ ತಿಳಿಸಿದ್ದಾನೆ. ಭಾನುವಾರ ರಾತ್ರಿ, ಕುಟುಂಬದ ಸದಸ್ಯರೆಲ್ಲರೂ ಮಲಗಿದ್ದಾಗ ಮದ್ಯ ಸೇವಿಸಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬಂದ ಬಾಲಕ ತಂದೆ, ತಾಯಿ ಹಾಗೂ ಸಹೋದರನ ಕತ್ತು ಸೀಳಿದ್ದಾನೆ.
ಅಪರಾಧ ಮಾಡಿದ ನಂತರ, ಮನೆಯಿಂದ ಸ್ವಲ್ಪ ದೂರದಲ್ಲಿರುವ ಹೊಲದಲ್ಲಿ ಚಾಕುವನ್ನು ಬಚ್ಚಿಟ್ಟು ಹತ್ತಿರದ ಆರ್ಕೆಸ್ಟ್ರಾ ಪ್ರದರ್ಶನವನ್ನು ನೋಡಲು ಹೋಗಿದ್ದಾನೆ. ಬಳಿಕ ಬೆಳಗಿನ ಜಾವ 1.45 ರ ಸುಮಾರಿಗೆ ಮನೆಗೆ ಹಿಂದಿರುಗಿದ ಬಾಲಕ ಮನೆಯವರನ್ನು ಯಾರೋ ಕೊಂದು ಹೋಗಿರುವುದಾಗಿ ಗ್ರಾಮಸ್ಥರಿಗೆ ಕರೆ ಮಾಡಿ ತಿಳಿಸಿದ್ದಾನೆ.
ಬಳಿಕ ಪೊಲೀಸ್ ವಿಚಾರಣೆ ವೇಳೆ ಬಾಲಕ ತನ್ನ ತಪ್ಪನ್ನು ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಸೇನೆ ಮೇಲೆ ದಾಳಿ – ಬೆದರಿಸಿ ಅಡುಗೆ ಮಾಡುವಂತೆ ಗ್ರಾಮಸ್ಥರಿಗೆ ಒತ್ತಾಯಿಸಿದ್ದ ಉಗ್ರರು