ಕೋಲಾರ : ಬೀದಿ ನಾಯಿಗಳು ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಮತ್ತು ಅದರಿಂದ ವಿವಿಧ ರೋಗಗಳು ಬರುತ್ತಿರುವುದರಿಂದ ಸಂತಾನೋತ್ಪತ್ತಿ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಬೀದಿನಾಯಿಗಳಿಗೆ ಎಬಿಸಿ ಲಸಿಕೆ ಹಾಕಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸಮಗ್ರ ರೋಗಗಳ ಕಣ್ಣಾವಲು ಘಕಟಕ ಕೋಲಾರ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಸರ್ವೇಕ್ಷಣಾ ಸಮನ್ವಯ ಸಮಿತಿ ಸಭೆಯನ್ನು ಕುರಿತು ಮಾತನಾಡುತ್ತಿದ್ದರು.
ವೈದ್ಯಕೀಯ, ಪಶುವೈದ್ಯಕೀಯ ಮತ್ತು ಸಂಬಂಧಿತ ಇಲಾಖೆಗಳು/ಸಂಸ್ಥೆಗಳಂತಹ ವಿವಿಧ ವಲಯಗಳ ನಡುವೆ ಜಾಲಬಂಧವನ್ನು ಅಭಿವೃದ್ಧಿಪಡಿಸಲು ನಿಯಮಾವಳಿಗಳನ್ನು ರೂಪಿಸಲು ರಾಜ್ಯ ಮಟ್ಟದ ಸಮಿತಿಯೊಂದಿಗೆ ಸಂಪರ್ಕದಲ್ಲಿ ಕೆಲಸ ಮಾಡುವುದು.
ಜಿಲ್ಲೆಯಲ್ಲಿ ಪ್ರಚಲಿತದಲ್ಲಿರುವ ಆದ್ಯತೆಯ ಪ್ರಾಣಿಜನ್ಯ ಕಾಯಿಲೆಯ ಹೊರೆಯನ್ನು ಪರಿಶೀಲಿಸುವುದು ಮತ್ತು ಪ್ರಾಣಿಜನ್ಯ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ತೆಗೆದುಕೊಳ್ಳಬೇಕಾದ ನಿರ್ದಿಷ್ಟ ಕ್ರಮಗಳ ಕುರಿತು ಆಯಾ ಜಿಲ್ಲಾ ಅಧಿಕಾರಿಗಳಿಗೆ ಸಲಹೆ ನೀಡುವುದು.

