ಬೆಂಗಳೂರು: ನಟ ಪ್ರಥಮ್ ಗೆ ಕೊಲೆ ಬೆದರಿಕೆ ಆರೋಪ ಪ್ರಕರಣದಲ್ಲಿ ಇಂದು ನಟ ದರ್ಶನ್ ಅಭಿಮಾನಿಗಳ ವಿರುದ್ಧ ದೂರು ನೀಡಿದ್ದಾರೆ. ಈ ಮೂಲಕ ನಟಿ ರಮ್ಯಾ ಬಳಿಕ ನಟ ಪ್ರಥಮ್ ದರ್ಶನ್ ಅಭಿಮಾನಿಗಳ ವಿರುದ್ಧ ಕಾನೂನು ಸಮರ ಸಾರಿದ್ದಾರೆ.
ಇಂದು ಬೆಂಗಳೂರು ಗ್ರಾಮಾಂತರ ಎಸ್ ಪಿ ಕಚೇರಿಗೆ ತೆರಳಿದಂತ ನಟ ಪ್ರಥಮ್ ಅವರು, ನಟ ದರ್ಶನ್ ಅಭಿಮಾನಿಗಳು ತಮಗೆ ಕೊಲೆ ಬೆದರಿಕೆ ಹಾಕಿರುವುದಾಗಿ ದೂರು ನೀಡಿದರು.
ಇದಕ್ಕೂ ಮುನ್ನಾ ವೀಡಿಯೋ ಮಾಡಿ ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟ ಪ್ರಥಮ್ ಆಕ್ರೋಶ ವ್ಯಕ್ತ ಪಡಿಸಿದ್ದರು. ಈ ಬೆನ್ನಲ್ಲೇ ಇದೀಗ ಎಸ್ಪಿಗೆ ದೂರು ನೀಡಿದ್ದಾರೆ.
ಮತ್ತೊಂದೆಡೆ ನಿನ್ನೆ ನಟಿ ರಮ್ಯಾ ಅವರು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಭೇಟಿಯಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿದಂತ ನಟ ದರ್ಶನ್ ಅಭಿಮಾನಿಗಳ ವಿರುದ್ಧ ದೂರು ನೀಡಿದ್ದರು. ಈ ದೂರು ಆಧರಿಸಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ 43 ಅಕೌಂಟ್ ಗಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

