ಲಕ್ನೋ: ಉತ್ತರ ಪ್ರದೇಶದ (Uttar Pradesh) ಅಕ್ಬರ್ಪುರx(Akabarpura) ಹೆಸರನ್ನು ಬದಲಾಯಿಸುವ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಸುಳಿವು ನೀಡಿದ್ದಾರೆ.
ಆ ನಗರದ ಹೆಸರನ್ನು ಹೇಳಿದಾಗ ಬಾಯಿಗೆ ಕೆಟ್ಟ ರುಚಿ ಬರುತ್ತದೆ ಇವೆಲ್ಲವೂ ಬದಲಾಗುತ್ತದೆ. ನಾವು ನಮ್ಮ ರಾಷ್ಟ್ರದಿಂದ ವಸಾಹತುಶಾಹಿಯ ಎಲ್ಲಾ ಅವಶೇಷಗಳನ್ನು ತೊಡೆದುಹಾಕಬೇಕು. ನಮ್ಮ ಪರಂಪರೆಯನ್ನು ಗೌರವಿಸಬೇಕು ಎಂದು ಯೋಗಿ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಅಬ್ಬರ
ಈ ಹಿಂದೆ 2019 ರ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಅಲಹಾಬಾದ್ ಅನ್ನು ಪ್ರಯಾಗ್ರಾಜ್ ಎಂದು ಮರುನಾಮಕರಣ ಮಾಡಿತು. ಇದು ನಗರದ ಐತಿಹಾಸಿಕ ಗುರುತನ್ನು ಮರಳಿ ಪಡೆಯುವಲ್ಲಿ ಬೇರೂರಿದೆ ಎನ್ನಲಾಗಿತ್ತು. ಈ ಐತಿಹಾಸಿಕ ಸ್ಥಳದ ಮೂಲ ಹೆಸರು ಪ್ರಯಾಗ್ರಾಜ್. ಆದರೆ ಇದನ್ನು ಮೊಘಲರು ‘ಅಲಹಾಬಾದ್’ ಎಂದು ಬದಲಾಯಿಸಿದ್ದರು ಎಂದು ಸಂತರ ವಾದವಾಗಿತ್ತು. ಇದನ್ನೂ ಓದಿ: ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ: ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡುವಂತೆ ಸಂತ್ರಸ್ತೆಗೆ ಬೆದರಿಕೆ

ಯೋಗಿ ಆದಿತ್ಯನಾಥ್ ಅವರು 2017 ರಲ್ಲಿ ಅಧಿಕಾರ ವಹಿಸಿಕೊಂಡ ನಂತರ, ಐತಿಹಾಸಿಕ ಅಧೀನತೆಯ ಸಂಕೇತಗಳನ್ನು ನಿರ್ಮೂಲನೆ ಮಾಡುವ ಕಾರ್ಯಾಚರಣೆ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಅಕ್ಬರ್ಪುರ ಅಷ್ಟೇ ಅಲ್ಲದೆ, ಅಲಿಗಢ್, ಅಜಮ್ಗಢ್, ಷಹಜಹಾನ್ಪುರ, ಗಾಜಿಯಾಬಾದ್, ಫಿರೋಜಾಬಾದ್, ಫರೂಕಾಬಾದ್ ಮತ್ತು ಮೊರಾದಾಬಾದ್ ಸೇರಿದಂತೆ ರಾಜ್ಯದೊಳಗಿನ ಹಲವಾರು ಜಿಲ್ಲೆಗಳ ಹೆಸರನ್ನು ಬದಲಾಯಿಸಲು ಪರಿಗಣಿಸಲಾಗಿದೆ. ಇದನ್ನೂ ಓದಿ: ಮುಸ್ಲಿಮರ ಸಂಖ್ಯೆಯಲ್ಲಿ ಏರಿಕೆ , ಹಿಂದೂಗಳ ಸಂಖ್ಯೆಯಲ್ಲಿ ಕುಸಿತ
ಈ ಮೊದಲು ಅಯೋಧ್ಯೆ ಅನ್ನೂ ಫೈಜಾಬಾದ್ ಎಂದು ಕರೆಯಲ್ಪಡುತಿತ್ತು. ಝಾನ್ಸಿ ರೈಲು ನಿಲ್ದಾಣಕ್ಕೆ ರಾಣಿ ಲಕ್ಷ್ಮಿ ಬಾಯಿಯ ಹೆಸರನ್ನು ಮರುನಾಮಕರಣ ಮಾಡಲಾಯಿತು.ಇದನ್ನೂ ಓದಿ: ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ತೀರ್ಥ ನೀಡುವ ಹಕ್ಕಿಗಾಗಿ ಅರ್ಚಕರ ನಡುವೆ ಗಲಾಟೆ

