COVID-19 : ಪ್ರಸ್ತುತ ಭಾರತದಲ್ಲಿ ಕೋವಿಡ್ ಪ್ರಕರಣಗಳು 257ಕ್ಕೆ ಏರಿದ್ದರೂ ಆತಂಕ ಪಡುವ ಅಗತ್ಯವಿಲ್ಲವೆಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಇದರ ನಡುವೆ ದಕ್ಷಿಣದ ರಾಜ್ಯಗಳಾದ ಮಹರಾಷ್ಟ್ರ, ಕೇರಳ ಮತ್ತು ತಮಿಳು ನಾಡಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಶೇಕಡವಾರು ಹೆಚ್ಚಾಗುತ್ತಿವೆ. ಇದರಿಂದ ಎಚ್ಚೆತ್ತಿರುವ ಆಂದ್ರ ಸರ್ಕಾರ ಮಾಸ್ಕ್ ಕಡ್ಡಾಯಗೊಳಿಸಿದೆ.
ಆಂಧ್ರ ಪ್ರದೇಶದಲ್ಲಿ ನಿನ್ನೆ ಒಂದೇ ದಿನ ಕೋವಿಡ್ 19 ಪಾಸಿಟಿವ್ ಕೇಸ್ ದಾಖಲಾಗಿದೆ. ಗುಜರಾತ್ನಲ್ಲೂ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ನೆರೆ ರಾಜ್ಯ ಕೇರಳ ಒಂದರಲ್ಲೇ 186 ಕೇಸ್ ಇದ್ದು 95 ಸಕ್ರಿಯ ಪ್ರಕರಣಗಳು ಇವೆ. ಕಳೆದ ಕೆಲ ವರ್ಷಗಳಿಂದ ಮರೆಯಾಗಿದ್ದ ಮಹಾಮಾರಿ ಮತ್ತೆ ವಕ್ಕರಿಸಿತ ಎಂಬ ಬಗ್ಗೆ ಅನುಮಾನಗಳು ಆರಂಭವಾಗಿದೆ.
ಹಾಂಕಾಂಗ್, ಸಿಂಗಾಪುರ್ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿರುವ ಬೆನ್ನಲ್ಲೆ. ದೇಶದಲ್ಲೂ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.
ಕರ್ನಾಟಕದಲ್ಲೂ 22 ಕೇಸ್ :
ಸಕ್ರಿಯ ಕೊರೋನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು. ಈವರೆಗೂ ರಾಜ್ಯದಲ್ಲಿ 22 ಸಕ್ರಿಯ ಪ್ರಕರಣಗಳು ವರದಿಯಾಗಿದೆ. ಕಳೆದ ವಾರ ಸುಮಾರು 165 ಮಂದಿಗೆ ಕೊರೋನ ಪರೀಕ್ಷೆ ನಡೆಸಿದ್ದು. ಇವರ ಪೈಕಿ 9 ಜನರಲ್ಲಿ ಪಾಸಿಟಿವ್ ರಿರ್ಪೋಟ್ ಬಂದಿದೆ. ಪಾಸಿಟಿವ ಬಂದಿರುವವವರ ಪೈಕಿ ಯಾರು ಕೂಡ ಆಸ್ಪತ್ರೆಗೆ ದಾಖಲಾಗದ ಹಿನ್ನಲೆ ಈ ರೂಪಾಂತರಿ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

