ಆನೇಕಲ್: ನಡುರಸ್ತೆಯಲ್ಲೇ ಪುರಸಭಾ ಸದಸ್ಯನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಆನೇಕಲ್ ಪಟ್ಟಣದ ಬಹದ್ದೂರ್ ಪುರ ಬಳಿ ಜರುಗಿದೆ. ಆನೇಕಲ್ ಪುರಸಭೆ ಸದಸ್ಯ ರವಿ ಅಲಿಯಾಸ್ ಸ್ಕ್ರ್ಯಾಪ್ ರವಿ ಎಂಬವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ರವಿ ಆನೇಕಲ್ ಪುರಸಭೆಯ 22ನೇ ವಾರ್ಡ್ ಸದಸ್ಯರಾಗಿದ್ದರು.
ಹೊಂಚು ಹಾಕಿ ರವಿ ಅಡ್ಡಗಟ್ಟಿ ಮಾರಕಸ್ತ್ರದಿಂದ ಹಲ್ಲೆ ಮಾಡಲಾಗಿದೆ. ಕೊಲೆ ಬಳಿಕ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಕಳೆದ 15 ದಿನದಿಂದ ಲಾಂಗ್ ಹಿಡಿದು ಯುವಕರು ಓಡಾಡುತ್ತಿದ್ದರು. ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿ ಎಚ್ಚರಿಸಿತ್ತು..ಅದೇ ಯುವಕರಿಂದ ಇಂದು ಪುರಸಭಾ ಸದಸ್ಯರ ಕೊಲೆ ನಡೆದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಬೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಪೊಲೀಸರ ಮುಂದೆ ವಾರ್ನಿಂಗ್ ಕೊಟ್ಟ ಒಂದೇ ವಾರಕ್ಕೆ ರವಿ ಅಲಿಯಾಸ್ ಸ್ಕ್ರಾಪ್ ರವಿಯ ಮರ್ಡರ್ ಆಗಿದೆ. ಸ್ಮಶಾನ ಜಾಗ ಒತ್ತುವರಿ ವಿಚಾರಕ್ಕೆ ರವಿಗೆ ನಾಗರಾಜ್ ಇತರರ ಜೊತೆ ಮನಸ್ತಾಪ ಇತ್ತು. ಸ್ಮಶಾನ ಜಾಗಕ್ಕಾಗಿ ಮೃತ ರವಿ ಹೋರಾಟ ಮಾಡುತ್ತಿದ್ದ. ಇದೇ ವಿಚಾರಕ್ಕೆ ರಮೇಶ @ ಬಾತು ಅಂಡ್ ಗ್ಯಾಂಗ್ನಿಂದ ಕೊಲೆ ಮಾಡಲಾಗಿದೆ ಎಂದು ಮೃತ ರವಿ ಕುಟುಂಬದವರು ಆರೋಪ ಮಾಡಿದ್ದಾರೆ.
ಸದ್ಯ ರವಿ ಪಾರ್ಥಿವ ಶರೀರವನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

